ಮಾ. 20, 21: ಎಂಜಿಎಂ ಕೃಷಿ ಸಮ್ಮಿಲನ : ವಿದ್ಯಾರ್ಥಿಗಳಲ್ಲಿ ಕೃಷಿ ಆಸಕ್ತಿ ಮೂಡಿಸುವ ಪ್ರಯತ್ನ


Team Udayavani, Mar 18, 2021, 4:40 AM IST

ಮಾ. 20, 21: ಎಂಜಿಎಂ ಕೃಷಿ ಸಮ್ಮಿಲನ : ವಿದ್ಯಾರ್ಥಿಗಳಲ್ಲಿ ಕೃಷಿ ಆಸಕ್ತಿ ಮೂಡಿಸುವ ಪ್ರಯತ್ನ

ಉಡುಪಿ: ಎಂ.ಜಿ.ಎಂ ಕಾಲೇಜಿನ ಮಾನವಿಕ ಹಾಗೂ ಭಾಷಾ ವಿಭಾಗಗಳು, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ ಕ್ರಾಸ್‌ ಮತ್ತು ಐಕ್ಯುಎಸಿ ಸಹಯೋಗ ದಲ್ಲಿ ಮಾ. 20 ಮತ್ತು 21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರ ವರೆಗೆ ಎರಡು ದಿನಗಳ ಕೃಷಿ ಸಮ್ಮಿಲನ, ಸ್ಥಳೀಯ ಕೃಷಿ ಬದುಕು ಮತ್ತು ಉತ್ಪನ್ನಗಳ ಅವಲೋಕನ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ| ದೇವಿದಾಸ್‌ ಎಸ್‌. ನಾಯ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ಕೃಷಿಕರಿಂದ ಕೃಷಿ ಉತ್ಪನ್ನಗಳ ಪ್ರದರ್ಶನ, ಮಾರಾಟ ಮತ್ತು ವಿವಿಧ ವಿಷಯಗಳ ಕುರಿತು ತಜ್ಞರಿಂದ, ಸಾಧಕ ಕೃಷಿಕರಿಂದ ಮಾಹಿತಿ ಮಾಲಿಕೆ ನಡೆಯಲಿದೆ. ಬೆಳೆಯುವವರಿಂದಲೇ ನೇರವಾಗಿ ಗ್ರಾಹಕರಿಗೆ ಹಣ್ಣು, ತರಕಾರಿ, ಸಸಿ, ಬೀಜ ಹಾಗೂ ಮಣ್ಣಿನ ಮಡಿಕೆ, ಬುಟ್ಟಿ ಮತ್ತಿತರ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಕೊಳ್ಳುವ ಅವಕಾಶವಿದೆ. ಕೈತೋಟ, ತಾರಸಿ ಕೃಷಿ, ಕಸಿ ಕಟ್ಟುವಿಕೆ ಮತ್ತು ಅಂಗಾಂಶ ಕೃಷಿಗಳ ಪ್ರಾತ್ಯಕ್ಷಿಕೆ ನಡೆಯಲಿದೆ. ಕಲಾವಿದ, ಕೃಷಿ ಪ್ರೇಮಿ ಪುರುಷೋತ್ತಮ ಅಡ್ವೆ ನೇತೃತ್ವದಲ್ಲಿ ಕಾಡುತ್ಪತ್ತಿಗಳ ಪರಿಚಯ ಹಾಗೂ ಮೌಲ್ಯವರ್ಧನೆಯ ಕುರಿತು ವಿವಿಧ ಪ್ರಯೋಗಗಳಿಗೆ ಚಾಲನೆ ದೊರೆಯಲಿದೆ.
ಮಾ. 20ರ ಬೆಳಗ್ಗೆ 10 ಗಂಟೆಗೆ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ವೈ. ಕೃಷಿ ಸಮ್ಮಿಲನವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ವಿಜ್ಞಾನಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಧನಂಜಯ, ಪ್ರಗತಿ ಪರ ಕೃಷಿಕ ನಟರಾಜ್‌ ಹೆಗ್ಡೆ, ರಾಷ್ಟ್ರೀಯ ಸಾಧನಾಶೀಲ ಕೃಷಿಕ ಪ್ರಶಸ್ತಿ ಪುರಸ್ಕೃತ ಕುದಿ ಶ್ರೀನಿವಾಸ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಾ. 20ರಂದು ಬೆಳಗ್ಗಿನಿಂದ ಮಂಗಳೂರಿನ ಪಶು ವೈದ್ಯ ಡಾ| ಮನೋಹರ ಉಪಾಧ್ಯ ಅಂಗಳದಾಚೆಯೂ ಆರೋಗ್ಯ, ಪ್ರಗತಿಪರ ಕೃಷಿಕ ಕುದಿ ಶ್ರೀನಿವಾಸ ಭಟ್‌ ಸಮಗ್ರ ಕೃಷಿ ಪದ್ಧತಿಯಿಂದ ಅಧಿಕ ಆದಾಯ, ಶಂಕರಪುರದ ಪ್ರಯೋಗಶೀಲ ಕೃಷಿಕ ಜೋಸೆಫ್ ಲೋಬೋ ತಾರಸಿ ಕೃಷಿಯಲ್ಲಿ ವಿನೂತನ ಪ್ರಯೋಗ, ನಿಟ್ಟೂರು ಹೈಸ್ಕೂಲಿನ ನಿವೃತ್ತ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್‌ ಹಡಿಲು ಭೂಮಿಯಲ್ಲಿ ಭತ್ತದ ಕೃಷಿ ಕುರಿತು ಮಾತನಾಡಲಿ¨ªಾರೆ. ಮಾರ್ಚ್‌ 21ರಂದು ಬೆಳಗ್ಗಿನಿಂದ ಆಯುರ್ವೇದ ವೈದ್ಯ ಡಾ| ಶ್ರೀಧರ ಬಾಯರಿ ಔಷಧ ಸಸ್ಯಗಳಿಂದ ಆರೋಗ್ಯ ರಕ್ಷಣೆ, ಅಜೆಕಾರಿನ ಪ್ರಗತಿಪರ ಕೃಷಿಕ ನಾರಾಯಣ ನಾಯ್ಕ ನಿಂಬೆ ಕೃಷಿ, ಸವಾಲು ಮತ್ತು ಸಾಧನೆ, ಕಲಾವಿದ ಮತ್ತು ಕೃಷಿ ಪ್ರೇಮಿ ಪುರುಷೋತ್ತಮ ಅಡ್ವೆ ಸಾಂಪ್ರದಾಯಿಕ ಕೃಷಿ ಪದ್ಧತಿಯ ದಾಖಲೀಕರಣ, ಪೇತ್ರಿ ಅನ್ನಪೂರ್ಣ ನರ್ಸರಿಯ ಪ್ರಸಾದ್‌ ಭಟ್‌ ಅಂಗಾಂಶ ಕೃಷಿಯ ಕುರಿತು ಮಾತನಾಡಲಿದ್ದಾರೆ.

ಸುಮಾರು ಸಾವಿರ ಸಾರ್ವಜನಿಕರು, 50 ಕೃಷಿಕರು ಭಾಗವಹಿಸುವ ನಿರೀಕ್ಷೆ ಇದೆ. ಕೋವಿಡ್‌ ನಿಯಮ ಕಡ್ಡಾಯ ವಾಗಿ ಪಾಲಿಸಲಾಗುವುದು ಎಂದು ಪ್ರಾಂಶು ಪಾಲರು ತಿಳಿಸಿದರು. ಐಕ್ಯುಎಸಿ ಸಂಯೋಜಕ ಅರುಣ್‌ ಕುಮಾರ್‌ ಬಿ., ಮಾನವಿಕ ವಿಭಾಗದ ಡಾ|ಲಕ್ಷ್ಮೀ ನಾರಾಯಣ ಕಾರಂತ್‌ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಮಂಜುನಾಥ ಕಾಮತ್‌ ಸ್ವಾಗತಿಸಿದರು.

ಹಡಿಲು ಗದ್ದೆಯಲ್ಲಿ ಬೇಸಾಯ, ಸಂತೆಯ ಇಂಗಿತ
– ವಿದ್ಯಾರ್ಥಿಗಳು ಹಾಗೂ ಯುವಕರಲ್ಲಿ ಕೃಷಿ ಪ್ರೇಮ ಬಿತ್ತುವ ಪ್ರಯತ್ನ. ಕಾಲೇಜಿನ ವತಿಯಿಂದ ಹಡಿಲು ಬಿದ್ದ ಗದ್ದೆಗಳಲ್ಲಿ ವ್ಯವಸಾಯ ಮಾಡುವ ಇಂಗಿತ. ವಿದ್ಯಾರ್ಥಿಗಳಲ್ಲಿ ಪರಿಣಾಮ ಬೀರಿ ಮನೆಗಳಲ್ಲಿ ತರಕಾರಿ ಬೆಳೆದು ಹೆಚ್ಚುವರಿಯಾಗಿ ಉಳಿದರೆ ಮುಂದೆ ಶನಿವಾರದ ಸಂತೆಯನ್ನೂ ಏರ್ಪಡಿಸುವ ಸಾಧ್ಯತೆ.

– ವಿದ್ಯಾರ್ಥಿಗಳಿಂದ ರೂ. 10ಕ್ಕೆ ವಿವಿಧ ತರಕಾರಿ ಬೀಜಗಳ ಮಾರಾಟ.

– ಕಾಟು ಮಾವು, ತಾಳಿಬೊಂಡ, ಪುನರ್ಪುಳಿ ಮೊದಲಾದ ಸ್ಥಳೀಯ ಹಣ್ಣಿನ ಐಸ್‌ ಕ್ಯಾಂಡಿ ಮಾರಾಟದ ಪ್ರಯೋಗ.

– ಸಾಂಪ್ರದಾಯಿಕ ಮತ್ತು ಗ್ರಾಮೀಣ ಸಸ್ಯಾಹಾರಿ ಆಹಾರ ಮಳಿಗೆ

– ಪುರುಷೋತ್ತಮ ಅಡ್ವೆ ನೇತೃತ್ವದಲ್ಲಿ ಕಾಡುತ್ಪತ್ತಿಗಳ ಪರಿಚಯ ಹಾಗೂ ಮೌಲ್ಯವರ್ಧನೆಯ ಕುರಿತು ವಿವಿಧ ಪ್ರಯೋಗಗಳಿಗೆ ಚಾಲನೆ.

– ಅಂಗಾಂಶ ಕೃಷಿಯ ಪ್ರಾತ್ಯಕ್ಷಿಕೆ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.