ಯಲಬುಣಚಿ ಬತ್ತಿದ ಕೆರೆಗೆ ಹರಿದ ಕೃಷ್ಣೆ ನದಿ ನೀರು


Team Udayavani, Mar 25, 2023, 4:21 PM IST

kushtagi

ಕುಷ್ಟಗಿ:ಬರದ ನಾಡಿಗೆ ಒಣ ಬೇಸಾಯ ಪ್ರದೇಶವಾದ ಕುಷ್ಟಗಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಕೃಷ್ಣೆಯ ನದಿ ನೀರು ವರದಾನವಾಗುವ ಆಶಾವಾದ ಮೂಡಿಸಿದೆ. ಕೃಷ್ಣ ಭಾಗ್ಯ ಜಲ ನಿಗಮದಿಂದ ತಾಲೂಕಿನ 17 ಕೆರೆಗಳ ಪೈಕಿ, ಯಲಬುಣಚಿ ಕೆರೆಗೆ ಶುಕ್ರವಾರ ಕೃಷ್ಣೆ ನದಿ ನೀರು ಹರಿಸಿರುವ ಪರೀಕ್ಷಾರ್ಥ ಪ್ರಯೋಗ ಯಶಸ್ಸು ಕಂಡಿದೆ.

ಕೊಪ್ಪಳ ಏತ ನೀರಾವರಿ ಯೋಜನೆ ಮೊದಲ ಹಂತದ ನಾರಾಯಣಪುರ ಜಲಾಶಯದಿಂದ ಹುನಗುಂದ ತಾಲೂಕಿನ ಮುರೋಳ, ಬಲಕುಂದಿ, ಕುಷ್ಟಗಿ ತಾಲೂಕಿನ ಕಲಾಲಬಂಡಿ ಡಿಲಿವೆರಿ ಚೇಂಬರ (ಡಿಸಿ-3) ಈಗಾಗಲೇ ಕೃಷ್ಣೆ ನದಿ ನೀರು ಹರಿಸಿರುವುದು ಪ್ರಾಯೋಗೀಕವಾಗಿ ಮೊದಲ ಯಶಸ್ವಿಯಾಗಿದೆ. ಅಲ್ಲಿಂದ 20 ಕಿ.ಮೀ. ಅಂತರದ ಪ್ರತ್ಯೇಕವಾಗಿ ಯಲಬುಣಚಿ ಕೆರೆಗೆ 456 ಅಶ್ವಶಕ್ತಿ ಎರಡು ಮೋಟಾರಗಳಿಂದ ನೀರನ್ನು ಪೈಪಲೈನ್ ಮೂಲಕ ಶುಕ್ರವಾರ ಹರಿಸಿದ್ದರಿಂದ ಬರದ ನಾಡಿನಲ್ಲಿ ಗಂಗೆಯ ಸ್ವರೂಪವಾಗಿ ಕೃಷ್ಣೆ ಬಂದಿರುವುದು ಗ್ರಾಮಸ್ಥರಲ್ಲಿ ಸಂತಸ ಇಮ್ಮಡಿಸಿದೆ.

ಯಲಬುಣಚಿ ಕೆರೆಗೆ ಪ್ರಪ್ರಥಮ ಬಾರಿಗೆ ನದಿ ನೀರು ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಪೈಪಲೈನ್ ಮೂಲಕ ಚಿಮ್ಮುವ ನೀರಿಗೆ ಪೂಜೆ ಸಲ್ಲಿಸಿ ಧನ್ಯತಾ ಭಾವ ಸಮರ್ಪಿಸಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣ ಭಾಗ್ಯ ಜಲ ನಿಗಮದಿಂದ ಕುಷ್ಟಗಿ ತಾಲೂಕಿನ 17 ಕೆರೆಗಳಿಗೆ ನೀರು ತುಂಬುವ ಯೋಜನೆಯಲ್ಲಿ ಮೊದಲ ಹಂತವಾಗಿ ಯಲಬುಣಚಿ ಕೆರೆಗೆ ನೀರು ಪರೀಕ್ಷಾರ್ಥ ಪ್ರಯೋಗ ಇದಾಗಿದೆ. ಶೀಘ್ರದಲ್ಲೇ ಇನ್ನುಳಿದ ಕೆರೆಗಳಿಗೆ ನೀರು ಹರಿಸಲಾಗುವುದು. ಪ್ರತಿ ವರ್ಷ ಎರಡು ಬಾರಿ ಅಂದರೆ ಮಳೆಗಾಲ ಹಾಗೂ ಬೇಸಿಗೆಯ ಸಂಕಷ್ಟದ ಪರಿಸ್ಥಿತಿಯಲ್ಲಿ ನಾರಾಯಣಪುರ ಜಲಾಶಯದ ಮೂಲಕ ನೀರು ತಾಲೂಕಿನ ಕೆರೆಗಳಿಗೆ ಹರಿಸಿ ತುಂಬಿಸಲಾಗುವುದು.

ಇದನ್ನೂ ಓದಿ: ಮೈಸೂರಿನಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಸಿದ್ದತೆ

ಕೆರೆಗಳನ್ನು ತುಂಬಿಸುವ ಕೊಪ್ಪಳ ಏತ ನೀರಾವರಿ ಯೋಜನೆಯಲ್ಲಿ ನಮ್ಮ ಜಿಲ್ಲೆಯ ಕುಷ್ಟಗಿ, ಯಲಬುರ್ಗಾ, ಕನಕಗಿರಿ ಸ್ವಲ್ಪ ಭಾಗ ಕೊಪ್ಪಳ. ಗದಗ ಜಿಲ್ಲೆಯ ರೋಣ ತಾಲೂಕು, ಭಾಗಲಕೋಟೆ ಜಿಲ್ಲೆಯ ಹುನಗುಂದ ಬದಾಮಿ ಈ ರೀತಿ ಯೋಜನೆಯಲ್ಲಿ 12.08 ಟಿಎಂಸಿ ನೀರನ್ನು ಸರ್ಕಾರ ಹಂಚಿಕೆಗೆ ಅವಕಾಶ ಕಲ್ಪಿಸಿದೆ. 2013ರ ಆದೇಶದನ್ವಯ 1.12ಲಕ್ಷ ಹೆಕ್ಟೇರ್ ನೀರಾವರಿ ಅದರ ಜೊತೆಗೆ ಸದರಿ ಯೋಜನಾ ವ್ಯಾಪ್ತಿಯ ನೂರಕ್ಕೂ ಅಧಿಕ ಕೆರೆಗಳಿವೆ. ನಮ್ಮ ತಾಲೂಕಿಗೆ 17 ಕೆರೆಗಳು ಈ ಯೋಜನೆ ವ್ಯಾಪ್ತಿಯಲ್ಲಿದ್ದು ಪ್ರಪ್ರಥಮವಾಗಿ ಯಲಬುಣಚಿ ಕೆರೆ ಪ್ರಾಯೋಗೀಕವಾಗಿ ಚಾಲನೆ ನೀಡಲಾಗಿದೆ. ಇನ್ನುಳಿದ 16 ಕೆರೆಗಳಿಗೆ ಜಲಾಶಯದ ನೀರಿನ ಲಭ್ಯತೆ ಆಧರಿಸಿ ಕೆರೆ ತುಂಬಿಸುವ ಯೋಜನೆ ಇದೆ. ಈ ಯೋಜನೆಯ ಕೆರೆಯ ಲೋಕಾರ್ಪಣೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಾಡುವ ಹಿನ್ನೆಲೆಯಲ್ಲಿ ಅದರ ಅಂಗವಾಗಿ ಪ್ರಾಯೋಗೀಕವಾಗಿ ಮಾಡಲಾಗಿದೆ ಎಂದರು. ಈ ಯೋಜನೆ ಕೆರೆ ತುಂಬಿಸುದಷ್ಟೇ ಅಲ್ಲ ಇದರಿಂದ ತಾಲೂಕಿನಲ್ಲಿ 20ಸಾವಿರ ಎಕರೆಗೆ ನೀರಾವರಿ ಸಾದ್ಯವಾಗಲಿದೆ ಎಂದರು. ಈ ಯೋಜನೆ ಕಾರ್ಯಗತಗೊಳಿಸಿದ ಸಾಕಾರಗೊಳ್ಳಲು ಸರ್ಕಾರಕ್ಕೂ ಸಹಕರಿಸಿದ ರೈತ ಬಾಂಧವರಿಗೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.