ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿದೆ;ಈಶ್ವರಪ್ಪ
Team Udayavani, Jan 17, 2021, 4:59 PM IST
ಮೈಸೂರು : ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯನವರು ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ ಅದ್ಯಾವಾಗ ಸಿದ್ದರಾಮಯ್ಯನವರು ಜ್ಯೋತಿಷ್ಯರಾಗಿದ್ದಾರೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಕೆ ಎಸ್ ಈಶ್ವರಪ್ಪ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ, ಅದು ಯಾವುದೂ ನಿಜ ಆಗಲ್ಲ, ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಶೀಘ್ರವೇ, ನೂತನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆ ಆದ ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದರು.
ಇದನ್ನೂ ಓದಿ:ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ