ಸಿದ್ದರಾಮಯ್ಯ ಮಾಡಿದ್ದು ಯಡಿಯೂರಪ್ಪ ಕೈಲೂ ಮಾಡಿಸೋಣ : ಈಶ್ವರಪ್ಪ
Team Udayavani, Mar 16, 2021, 10:10 PM IST
ವಿಧಾನಸಭೆ: ಸಿದ್ದರಾಮಯ್ಯ ಅವರು ಮಾಡಿದ್ದು ಯಡಿಯೂರಪ್ಪ ಅವರಿಂದಲೂ ಮಾಡಿಸೋಣ ಎಂದು ಜಲಸಂಪನ್ಮೂಲ ಸಚಿವ ಕೆ.ಎಸ್. ಈಶ್ವರಪ್ಪ ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರಿಗೆ ಭರವಸೆ ನೀಡಿದರು.
ಶ್ರೀನಿವಾಸಪುರ ಕ್ಷೇತ್ರದ 20 ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕೊಳವೆ ಬಾವಿ ಕೊರೆದಿರುವ ಹಣ ಪಾವತಿಯಾಗದ ಬಗ್ಗೆ ರಮೇಶ್ಕುಮಾರ್ ಪ್ರಸ್ತಾಪಿಸಿದಾಗ ಹಣಕಾಸಿನ ಲಭ್ಯತೆ ಇಲ್ಲದಿರುವುದು, ಹಣಕಾಸು ಇಲಾಖೆ ಅಧಿಕಾರಿಗಳ ಆಕ್ಷೇಪ, ಕಾರ್ಯಪಡೆಯಲ್ಲಿ ಕ್ರಿಯಾಯೋಜನೆ ರೂಪಿಸಿ ಅನುಮತಿ ಪಡೆಯದಿದ್ದರೆ ಮಂಜೂರಾತಿ ಕಷ್ಟ . ಈಗಲೇ ಅಲ್ಲ ಸಿದ್ದರಾಮಯ್ಯ ಅವರ ಅವಧಿಯಲ್ಲೂ ಹೀಗೇ ಆಗಿತ್ತು ಎಂದು ಈಶ್ವರಪ್ಪ ಹೇಳಿದರು.
ಆಗ, ರಮೇಶ್ಕುಮಾರ್ ಅವರು ನೀವು ಅಧಿಕಾರಿಗಳ ಉತ್ತರ ಪಡೆದು ಹೇಳಿದರೆ ನಿಮ್ಮ ವ್ಯಕ್ತಿತ್ವ ಕಳೆದುಕೊಳ್ಳುತ್ತೀರಿ. ಅಧಿಕಾರಿಗಳ ಮನೆಯಲ್ಲಿ ಶವರ್ ತಿರುಗಿಸಿದರೆ ನೀರು ಬರುತ್ತೆ. ಹಳ್ಳಿಗಳಲ್ಲಿ ನೀರಿಗಾಗಿ ಜನರು ಪಡುತ್ತಿರುವ ಕಷ್ಟ ಇವರಿಗೇನು ಗೊತ್ತು ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಅವಧಿಯಲ್ಲಿ ಇದೇ ರೀತಿ ಸಮಸ್ಯೆಯಾದಾಗ 48 ಕೋಟಿ ರೂ. ಮಂಜೂರು ಮಾಡಿಸಲಾಗಿತ್ತು ಎಂದು ತಿಳಿಸಿದರು.
ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು
ಆಗ, ಈಶ್ವರಪ್ಪ ಅವರು ಆಗ ಸಿದ್ದರಾಮಯ್ಯ ಅವರು ಮಾಡಿದ್ದು ಈಗ ಯಡಿಯೂರಪ್ಪ ಅವರ ಕೈಲಿ ಮಾಡಿಸೋಣ ಎಂದರು. ನೀವು ನಮ್ಮ ಜತೆ ಇದ್ದರೆ ಅವರೂ ಒಪ್ಪಿಕೊಳ್ಳುತ್ತಾರೆ ಎಂದು ರಮೇಶ್ಕುಮಾರ್ ಚಟಾಕಿ ಹಾರಿಸಿದರು. ಅದಕ್ಕೆ ಈಶ್ವರಪ್ಪ ಅವರು ನೀವು ಜತೆಗಿದ್ದರೆ ಸಾಕು ಎಂದರು.
ಶಾಸಕರು ಕುಡಿಯುವ ನೀರಿಗಾಗಿ ಪಡುತ್ತಿರುವ ಪಡಿಪಾಟಲು ಅಧಿಕಾರಿಗಳಿಗೂ ಗೊತ್ತಾಗಬೇಕು. ಅರ್ಧ ಗಂಟೆ ಕಾಲ ಚರ್ಚೆಗೆ ಅವಕಾಶ ಕೊಡಿ. ಮುಖ್ಯಮಂತ್ರಿಯವರು ಇರಲಿ, ನಾನೂ ಇರುತ್ತೇನೆ, ಅಧಿಕಾರಿಗಳು ಇರಲಿ, ಅವರಿಗೂ ಎಲ್ಲವೂ ಗೊತ್ತಾಗಲಿ ಎಂದು ಸ್ಪೀಕರ್ ಅವರಿಗೆ ಮನವಿ ಮಾಡಿದರು. ಅದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಪ್ಪಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ