ಹಳ್ಳಿಗಳನ್ನು ತಲುಪಲಿದೆ KSRTC ಕೊರಿಯರ್‌! ಉದ್ಯೋಗ ಸೃಷ್ಟಿಯ ವಿನೂತನ ಯೋಜನೆ


Team Udayavani, Nov 22, 2020, 6:45 AM IST

ಹಳ್ಳಿಗಳನ್ನು ತಲುಪಲಿದೆ KSRTC ಕೊರಿಯರ್‌! ಉದ್ಯೋಗ ಸೃಷ್ಟಿಯ ವಿನೂತನ ಯೋಜನೆ

ಮಂಗಳೂರು: ಕೊರೊನಾದಿಂದಾಗಿ ನಷ್ಟದ ಸುಳಿಯಲ್ಲಿ ಸಿಲುಕಿರುವ ಕೆಎಸ್ಸಾರ್ಟಿಸಿ ಮತ್ತೆ ಹಳಿಯತ್ತ ಮರಳಲು ವಿನೂತನ ಯೋಜನೆಗಳನ್ನು ರೂಪಿಸುತ್ತಿದೆ. ಕರ್ನಾಟಕ ಮತ್ತು ಅನ್ಯ ರಾಜ್ಯಗಳಿಗೆ ಸರಕು ಮತ್ತು ಪತ್ರಗಳನ್ನು ಕೊಂಡೊಯ್ಯಲು ಕೊರಿಯರ್‌ ಸೇವೆ ಜಾರಿಗೆ ತರಲು ನಿರ್ಧರಿಸಿದ್ದು, ಹೊಸ ವರ್ಷಕ್ಕೆ ಈ ಯೋಜನೆ ಜಾರಿಗೊಳ್ಳಲಿದೆ.

ರಾಜ್ಯದಲ್ಲಿ ಈಗಾಗಲೇ ಹತ್ತಾರು ಖಾಸಗಿ ಕೊರಿಯರ್‌ ವ್ಯವಸ್ಥೆಗಳಿದ್ದು, ಕೆಎಸ್ಸಾರ್ಟಿಸಿಯು ಸ್ಪರ್ಧಾತ್ಮಕ ದರದಲ್ಲಿ ಕೊರಿಯರ್‌ ಸೇವೆ ಒದಗಿಸಲಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ಜನರರನ್ನು ಗುರಿಯಾಗಿರಿಸಿಕೊಂಡು ಈ ಯೋಜನೆ ರೂಪಿಸಲಾಗಿದೆ. ಈವರೆಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ವಾರಸುದಾರರಿದ್ದರೆ ಮಾತ್ರ ಪಾರ್ಸೆಲ್‌ ಒಯ್ಯಲು ಅವಕಾಶ ಇತ್ತು. ಮುಂದೆ ಯಾರೂ ಕೊರಿಯರ್‌ ಕಳುಹಿಸಬಹುದು. ಸದ್ಯಕ್ಕೆ ರಾಜ್ಯದೊಳಗೆ ಸಂಚರಿಸುವ ಬಸ್‌ಗಳಲ್ಲಿ ಈ ಸೇವೆ ಜಾರಿಗೊಳ್ಳಲಿದೆ. ಈ ಬಗ್ಗೆ ಈಗಾಗಲೇ ಎಲ್ಲ ನಿಗಮಗಳ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಸದ್ಯದಲ್ಲೇ ರಾಜ್ಯದೆಲ್ಲೆಡೆ ಫ್ರಾಂಚೈಸಿ ಕಚೇರಿಗಳು ತೆರೆಯಲಿವೆ.
ಕೊರಿಯರ್‌ ಸೇವೆ ಆರಂಭಿಸುವ ಉದ್ದೇಶದಿಂದ ಕೆಎಸ್ಸಾರ್ಟಿಸಿಯು ಖಾಸಗಿ ಸಂಸ್ಥೆಯೊಂದಕ್ಕೆ ಜವಾಬ್ದಾರಿ ನೀಡಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಒಪ್ಪಂದ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು, ಕೊರಿಯರ್‌ ಸೇವೆಗಾಗಿ ಆ್ಯಪ್‌ ಅಭಿವೃದ್ಧಿಪಡಿಸಲಾಗುತ್ತಿದೆ.

ಉದ್ಯೋಗ ಸೃಷ್ಟಿ
ಕೆಎಸ್ಸಾರ್ಟಿಸಿಯ ಈ ವಿನೂತನ ಯೋಜನೆಯಿಂದ ಉದ್ಯೋಗ ಸೃಷ್ಟಿಯ ಗುರಿಯೂ ಇದೆೆ. ಕೊರಿಯರ್‌ ನಿರ್ವಹಣೆಗೆ ಸಂಬಂಧಪಟ್ಟಂತೆ ಸಿಬಂದಿ ನೇಮಕಾತಿಯನ್ನು ಆಯಾ ಫ್ರಾಂಚೈಸಿ ಮಾಡಿಕೊಳ್ಳುತ್ತದೆ. ಪ್ರತೀ ವಿಭಾಗ ಮಟ್ಟದಲ್ಲಿರುವ ಕಚೇರಿಯಿಂದ ನಗರ, ಗ್ರಾಮೀಣ ಪ್ರದೇಶದ ಮನೆ ಬಾಗಿಲಿಗೆ ತಲುಪಿಸಲು ಸಿಬಂದಿ ನೇಮಕಾತಿ ಕೆಲವು ದಿನಗಳಲ್ಲಿ ನಡೆಯಲಿದೆ.
ರಾಜ್ಯದ ಕೆಲವು ಕಡೆ ಗ್ರಾಮೀಣ ಭಾಗದಲ್ಲಿ ಕೊರಿಯರ್‌ ಸೇವೆ ಸಮರ್ಪಕವಾಗಿಲ್ಲ. ಕೊರಿಯರ್‌ ಸ್ವೀಕರಿಸಲು ಅಥವಾ ಕಳುಹಿಸಲು ಹತ್ತಿರದ ಪಟ್ಟಣ ಅಥವಾ ನಗರಕ್ಕೆ ಹೋಗಬೇಕು. ಕೆಎಸ್ಸಾರ್ಟಿಸಿ ಬಸ್‌ಗಳು ಸಾಮಾನ್ಯವಾಗಿ ಎಲ್ಲ ಹಳ್ಳಿಗಳನ್ನೂ ತಲುಪುತ್ತಿವೆ. ಈ ಜಾಲದ ಮೂಲಕ ಕೊರಿಯರ್‌ ಸೇವೆಯನ್ನು ಗ್ರಾಮೀಣ ಭಾಗಕ್ಕೂ ತಲುಪಿಸುವ ಯೋಜನೆ ಕೆಎಸ್ಸಾರ್ಟಿಸಿಯದ್ದು.

ಕೊರಿಯರ್‌ ವ್ಯವಸ್ಥೆಯು ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯು ಕೆಎಸ್ಸಾರ್ಟಿಸಿ, ಬಿಎಂಟಿಸಿ, ಎನ್‌ಇ ಕೆಎಸ್ಸಾರ್ಟಿಸಿ ನಿಗಮಗಳಲ್ಲಿ ಜಾರಿಗೊಳ್ಳಲಿದೆ. ಹೊರ ರಾಜ್ಯಗಳ ಸರಕಾರಿ ಸಾರಿಗೆ ನಿಗಮಗಳು ಯಾವ ರೀತಿ ಇಂತಹ ಸೇವೆಯನ್ನು ಅಳವಡಿಸಿಕೊಂಡಿವೆ ಎಂಬುದನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳ ತಂಡ ಅಧ್ಯಯನ ನಡೆಸಿದೆ. ತೆಲಂಗಾಣದ ಮಾದರಿಯನ್ನು ಇಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.

ಆ್ಯಪ್‌ ಮೂಲಕ ಟ್ರ್ಯಾಕ್‌
ಕೆಎಸ್ಸಾರ್ಟಿಸಿ ಕೊರಿಯರ್‌ ವ್ಯವಸ್ಥೆಯನ್ನು ಆ್ಯಪ್‌ ಟ್ರ್ಯಾಕ್‌ ಮಾಡಬಹುದಾಗಿದೆ. ಪಾರ್ಸೆಲ್‌ ನೀಡುವಾಗ ಯುನಿಕ್‌ ಐಡಿ ನೀಡಲಾಗುತ್ತದೆ. ಆ ಬಳಿಕ ಕೊರಿಯರ್‌ ಎಲ್ಲಿದೆ, ಯಾವಾಗ ತಲುಪುತ್ತದೆ ಮತ್ತಿತರ ಮಾಹಿತಿಗಳನ್ನು ಆ್ಯಪ್‌ ಮೂಲಕ ಪಡೆಯಬಹುದು.

ಹಸುರು ಬಸ್‌ ಸೇವೆಗೆ ಚಿಂತನೆ
ಒಂದು ಜಿಲ್ಲೆಯಿಂದ ಮತ್ತೂಂದು ಜಿಲ್ಲೆಗೆ ತರಕಾರಿ, ಹಣ್ಣುಗಳನ್ನು ಒಯ್ಯುವ “ಗ್ರೀನ್‌ ಬಸ್‌ ಸೇವೆ’ಯನ್ನು ಆರಂಭಿಸುವುದಕ್ಕೂ ಕೆಎಸ್ಸಾರ್ಟಿಸಿ ಚಿಂತನೆ ನಡೆಸುತ್ತಿದೆ. ಈಗಾಗಲೇ 10 ಲಕ್ಷ ಕಿ.ಮೀ. ಕ್ರಮಿಸಿರುವ ಹಳೆಯ ಬಸ್‌ಗಳನ್ನು ಈ ಸೇವೆಗಾಗಿ ಉಪಯೋಗಿಸಲು ಸಿದ್ಧತೆ ನಡೆಯುತ್ತಿದೆ ಎನ್ನುತ್ತಾರೆ ಕೆಎಸ್ಸಾರ್ಟಿಸಿ ಅಧಿಕಾರಿಗಳು.

ಕೆಎಸ್ಸಾರ್ಟಿಸಿಯು ಕೆಲವೇ ತಿಂಗಳಲ್ಲಿ ಸ್ಪರ್ಧಾತ್ಮಕ ದರದ ಕೊರಿಯರ್‌ ಸೇವೆಯನ್ನು ಜಾರಿಗೆ ತರಲಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಪ್ರತೀ ವಿಭಾಗದಲ್ಲಿ ಪ್ರಾಂಚೈಸಿ ಕಚೇರಿ ತೆರೆಯಲಿದ್ದು, ಉದ್ಯೋಗ ಸೃಷ್ಟಿಗೂ ಇದು ಪ್ರಯೋಜನಕಾರಿ.
– ಶಿವಯೋಗಿ ಕಳಸದ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.