ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಕೆಎಸ್ಟಿಡಿಸಿ ಕ್ಯಾಬ್ ಚಾಲಕ ಬಲಿ: ಹೆಚ್ ಡಿಕೆ ಆಕ್ರೋಶ
Team Udayavani, Mar 31, 2021, 11:26 AM IST
ಬೆಂಗಳೂರು: ಕ್ಯಾಬ್ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್ಗಳಿಗೆ ಸರ್ಕಾರ 1 ಕಿ.ಮೀಗೆ ₹24 ದರ ನಿಗದಿ ಮಾಡಿದೆ. ಕೆಎಸ್ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್ಟಿಡಿಸಿ ಕ್ಯಾಬ್ ಚಾಲಕ ಪ್ರತಾಪ್ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್ ಅವರ ಸಾವಿನೊಂದಿಗೆ ಕೆಎಸ್ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಏ.1 ರಿಂದ 45 ವರ್ಷ ಮೇಲಿನ ಎಲ್ಲರಿಗೂ ಲಸಿಕೆ: 2000 ಹೆಚ್ಚುವರಿ ಲಸಿಕಾ ಕೇಂದ್ರ: ಸುಧಾಕರ್
ಕೆಎಸ್ಟಿಡಿಸಿ ಕ್ಯಾಬ್ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್ಗಳು ₹9ಕ್ಕೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್ಟಿಡಿಸಿ ಕ್ಯಾಬ್ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ.
ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ ನಿಯಂತ್ರಣ : ಮಾರ್ಕೆಟ್ ಪ್ರವೇಶಿಸಲು ಇಲ್ಲಿ ಶುಲ್ಕ ಪಾವತಿಸಬೇಕು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು