K’taka hijab ban ಪರೀಕ್ಷೆಗೆ ಹಿಜಾಬ್:ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಹೇಳಿದ ಸುಪ್ರೀಂ
Team Udayavani, Mar 3, 2023, 3:24 PM IST
ನವದೆಹಲಿ : ಕರ್ನಾಟಕದ ಸರಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಆಲಿಸಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಪರೀಕ್ಷೆಗಳು ನಡೆಯುತ್ತಿರುವುದರಿಂದ ಸರಕಾರಿ ಶಾಲೆ, ಕಾಲೇಜ್ ಗಳು ಸ್ಕಾರ್ಫ್ ಧರಿಸಲು ಅನುಮತಿ ನೀಡದ ಕಾರಣ ಹುಡುಗಿಯರು ಮತ್ತೊಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳುವ ಅಂಚಿನಲ್ಲಿದ್ದಾರೆ ಎಂದು ಮಹಿಳಾ ವಕೀಲರು ಅರ್ಜಿಯ ತುರ್ತು ವಿಚಾರಣೆಯನ್ನು ಕೋರಿದಾಗ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನು ಒಳಗೊಂಡ ಪೀಠವು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಹೇಳಿದೆ.
ಆರಂಭದಲ್ಲಿ, ಸಿಜೆಐ ಈ ವಿಷಯವನ್ನು ಹೋಳಿ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದರು. ಐದು ದಿನಗಳ ನಂತರ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ವಕೀಲರು ಹೇಳಿ, ಅವರು ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ. ಇನ್ನೊಂದು ವರ್ಷವನ್ನು ಕಳೆದುಕೊಳ್ಳುತ್ತಾರೆ ಎಂದರು. ರಜೆಯ ಹಿಂದಿನ ಕೊನೆಯ ದಿನದಂದು ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ಪೀಠವು ತಿಳಿಸಿದಾಗ, ಈ ಹಿಂದೆ ಎರಡು ಬಾರಿ ಪ್ರಸ್ತಾಪಿಸಲಾಗಿದೆ ಎಂದು ವಕೀಲರು ಹೇಳಿದರು.
ದಿನಾಂಕವನ್ನು ನಿರ್ದಿಷ್ಟಪಡಿಸದೆ, ಪೀಠವು ಪೀಠವನ್ನು ರಚಿಸುವುದಾಗಿ ಹೇಳಿದೆ. ಈ ವಿಷಯವನ್ನು ಕೊನೆಯದಾಗಿ ವಿದ್ಯಾರ್ಥಿಗಳ ಪರವಾಗಿ ವಕೀಲ ಶದನ್ ಫರಾಸತ್ ಅವರು ತುರ್ತು ವಿಚಾರಣೆಗೆ ಪ್ರಸ್ತಾಪಿಸಿದರು. ಕರ್ನಾಟಕ ಸರಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗೆ ಕುಳಿತುಕೊಳ್ಳಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಪಟ್ಟಿ ಮಾಡುವುದಾಗಿ ನ್ಯಾಯಾಲಯ ಹೇಳಿತ್ತು.
ಮಾರ್ಚ್ 9 ರಿಂದ ಆರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿ ಬರುವ ಅರ್ಜಿಗಳನ್ನು ತಿರಸ್ಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?