ಕುಕ್ಕೆ ಸುಬ್ರಹ್ಮಣ್ಯ : ವಾರ್ಷಿಕ ಆದಾಯ 68.94 ಕೋ.ರೂ. : ಕಳೆದ ಬಾರಿಗಿಂತ 29 ಕೋ.ರೂ. ಕಡಿಮೆ
Team Udayavani, Apr 18, 2021, 6:40 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2020 ಎಪ್ರಿಲ್ನಿಂದ 2021 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 68,94,88,039.17 ರೂ. ಆದಾಯ ಗಳಿಸಿದೆ.
ಕಳೆದ ವರ್ಷ ಮಾ. 17ರಿಂದ ಸೆ. 8ರ ತನಕ ದೇವಸ್ಥಾನವು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಪೂರ್ಣ ಬಂದ್ ಆಗಿತ್ತು. ಈ 6 ತಿಂಗಳ ಅವಧಿಯಲ್ಲಿ ಶ್ರೀ ದೇವಳಕ್ಕೆ ಯಾವುದೇ ಆದಾಯ ಇರಲಿಲ್ಲ. ಬಳಿಕ ಸೆ. 15ರಿಂದ ಮಾ. 31ರ ತನಕ ಶ್ರೀ ದೇವಳಕ್ಕೆ ಬಂದ ಆದಾಯ ಇದಾಗಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.
2019-20ನೇ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿತ್ತು. ಕೊರೊನಾ ಕಾರಣ ಕಳೆದ ವರ್ಷಕ್ಕಿಂತ ಈ ಬಾರಿ 29,97,36,154.17 ರೂ. ಕಡಿಮೆ ಆದಾಯ ಬಂದಿದೆ ಎಂದರು.
ಆದಾಯ
ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯವು ಬರುತ್ತದೆ. ಗುತ್ತಿಗೆಗಳಿಂದ 72,35,331 ರೂ., ತೋಟದ ಉತ್ಪನ್ನದಿಂದ 15,64,681 ರೂ., ಕಟ್ಟಡ ಬಾಡಿಗೆಯಿಂದ 37,11,409ರೂ, ಕಾಣಿಕೆಯಿಂದ 3,34,69,717 ರೂ., ಕಾಣಿಕೆ ಹುಂಡಿಯಿಂದ 12,75,11,301 ರೂ., ಹರಕೆ ಸೇವೆಗಳಿಂದ 24,10,63,401 ರೂ., ಅನುದಾನದಿಂದ 80,196 ರೂ., ಹೂಡಿಕೆಯಿಂದ ಬಂದ ಬಡ್ಡಿ 20,49,00,424 ರೂ., ಉಳಿತಾಯ ಖಾತೆ ಮತ್ತು ಇತರ ಖಾತೆಗಳಿಂದ ಬಂದ ಬಡ್ಡಿ 36,72,645 ರೂ., ಸಂಕೀರ್ಣ ಜಮೆಗಳಿಂದ 2,63,07,139 ರೂ., ಅನ್ನಸಂತರ್ಪಣೆ ನಿಧಿಯಿಂದ 3,54,61,982 ರೂ., ಅಭಿವೃದ್ಧಿ ನಿಧಿ 9,20,908 ರೂ., ಶಾಶ್ವತ ಸೇವಾ ಮೂಲಧನ 35,88,900 ರೂ. ಹೀಗೆ ಒಟ್ಟು 68 ಕೋಟಿ 94 ಲಕ್ಷದ 88 ಸಾವಿರದ 039.17 ರೂ. ಆದಾಯ ದೇವಸ್ಥಾನಕ್ಕೆ ಬಂದಿದೆ.
ಭಕ್ತರ ಅನುಕೂಲತೆಗೆ ಆದ್ಯತೆ
ನಿತ್ಯವೂ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಭಕ್ತರ ಅನುಕೂಲಕ್ಕಾಗಿ ಸುಮಾರು 180 ಕೋಟಿ ರೂ. ವೆಚ್ಚದಲ್ಲಿ ಮಾಸ್ಟರ್ ಪ್ಲಾನ್ ಯೋಜನೆಯ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ಭಕ್ತರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ, ಶ್ರೀ ಕ್ಷೇತ್ರದಲ್ಲಿ ಸಾಕಷ್ಟು ವಸತಿಗೃಹಗಳ ನಿರ್ಮಾಣ, ಶೌಚಾಲಯಗಳ ನಿರ್ಮಾಣ, ಸಮಗ್ರ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಹಾಗೂ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರಸ್ತೆಗಳ ವಿಸ್ತರಣೆ ಮುಂತಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ತಿಳಿಸಿದರು.
ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ವನಜಾ ವಿ. ಭಟ್ ಸುಬ್ರಮಣ್ಯ, ಶೋಭಾ ಗಿರಿಧರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…