ಕುಮಾರಸ್ವಾಮಿ ದೇವರು ಕೊಟ್ಟ ಮುಖ್ಯಮಂತ್ರಿ : ಶಾಸಕ ವೆಂಕಟರಾವ್ ನಾಡಗೌಡ
Team Udayavani, Apr 16, 2022, 5:30 PM IST
ಕೊಪ್ಪಳ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆದರೂ ಅವರೊಬ್ಬ ದೇವರು ಕೊಟ್ಟ ಮುಖ್ಯಮಂತ್ರಿಯಾಗಿದ್ದಾರೆ. ಅವರು ಜನರು ಕೊಟ್ಟ ಮುಖ್ಯಮಂತ್ರಿಯಲ್ಲ ಎಂದು ಶಾಸಕ ವೆಂಕಟರಾವ್ ನಾಡಗೌಡ ಬಣ್ಣಿಸಿದ್ದಾರೆ.
ಮುನಿರಾಬಾದ್ನ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೆಚ್ಡಿಕೆ ಅವರು ನನಗೆ ಪೂರ್ಣ ಅಧಿಕಾರ ಕೊಡಿ ನಾನು ಅಭಿವೃದ್ಧಿಗೆ ಬದ್ದನಿದ್ದೇನೆ ಎಂದು ಜನರಿಗೆ ಮನವಿ ಮಾಡಿದ್ದರು. ಆದರೆ ಜನತೆ ಅವರಿಗೆ ಪೂರ್ಣ ಅಧಿಕಾರ ಕೊಡಲಿಲ್ಲ. ಅವರು ಅದೃಷ್ಟದಂತೆ ದೇವರು ಕೊಟ್ಟ ಮುಖ್ಯಮಂತ್ರಿಯಾಗಿದ್ದಾರೆ. ಜನರು ಕೊಟ್ಟ ಮುಖ್ಯಮಂತ್ರಿಯಲ್ಲ ಎಂದರು.
ಸಿದ್ದರಾಮಯ್ಯ ಅವರು ಹೆಚ್ಡಿಕೆ ಬಗ್ಗೆ ವ್ಯಂಗ್ಯವಾಡಿ ದೇವರಾಣೆ ಸಿಎಂ ಆಗಲ್ಲ ಎಂದಿದ್ದರು. ಆದರೆ ಹೆಚ್ಡಿಕೆ ಸಿಎಂ ಆದರು. ಸಿದ್ದು ಹೇಳಿದ್ದೆಲ್ಲವೂ ಉಲ್ಟಾ ಆಗಲಿದೆ ಎಂದರಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಸಾಲ ಮನ್ನಾ ಮಾಡಲು ಸಮಯವಿಲ್ಲ. ಆದರೆ ಆದಾನಿ, ಅಂಬಾನಿ ಸಾಲ ಮನ್ನಾ ಮಾಡುತ್ತಾರೆ. ಎಲ್ಲೆಡೆ ಬೆಲೆ ಏರಿಕೆಯಾಗಿದೆ. ಆದರೆ ಮೋದಿ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿ ಕಾರಿದರು.
ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ. ದೇಶದ ಹಲವು ರಾಜ್ಯಗಳಲ್ಲಿ ಇಂದು ಪ್ರಾದೇಶಿಕ ಪಕ್ಷಗಳೇ ಅಧಿಕಾರ ನಡೆಸುತ್ತಿವೆ. ಜೆಡಿಎಸ್ 2023ರ ಚುನಾವಣೆಯಲ್ಲಿ ವಿಜನ್ 123 ಗುರಿಯೊಂದಿಗೆ ಸಜ್ಜಾಗಿದ್ದು ರೈತರ ಜಮೀನಿಗೆ ನೀರು ಹರಿಯಬೇಕೆಂಬ ಉದ್ದೇಶದಿಂದ ಜನತಾ ಜಲಧಾರೆ ಎನ್ನುವ ಯೋಜನೆಯ ಸಂಕಲ್ಪ ಮಾಡಿ 15 ನದಿಗಳ ಜಲ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ