ಕುಮಾರಸ್ವಾಮಿ -ಯೋಗೇಶ್ವರ್ ಟಾಕ್ವಾರ್: ಸಚಿವ ಅಶ್ವತ್ಥನಾರಾಯಣ ಸಮರ್ಥನೆ
ಕುಮಾರಸ್ವಾಮಿ ಅವರನ್ನೂ ಆಹ್ವಾನಿಸಲಾಗಿತ್ತು...
Team Udayavani, Oct 1, 2022, 9:04 PM IST
ಬೆಂಗಳೂರು: ಚನ್ನಪಟ್ಟಣ ತಾಲೂಕಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವ ಶಿಷ್ಟಾಚಾರವೂ ಉಲ್ಲಂಘನೆಯಾಗಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಲ್ಲೇಶ್ವರದಲ್ಲಿ ಮರು ಅಭಿವೃದ್ಧಿಪಡಿಸಿರುವ ಚಂದ್ರಶೇಖರ ಆಜಾದ್ ಕ್ರೀಡಾಂಗಣ ಉದ್ಘಾಟಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿ, ”ಕುಮಾರಸ್ವಾಮಿಯವರಿಗೆ ಈ ಸಂಬಂಧ ಆಹ್ವಾನ ಕೊಡಲಾಗಿತ್ತು. ಸ್ವತಃ ಅವರೇ ತಾನು ನಿಗದಿತ ದಿವಸದಂದು ಬೇರೆ ಕೆಲಸ ಇರುವುದರಿಂದ ಕಾರ್ಯಕ್ರಮಕ್ಕೆ ಬರಲಾಗುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವುದಾಗಿಯೂ ಹೇಳಿದ್ದರು” ಎಂದರು.
ಇದನ್ನೂ ಓದಿ: ಕುಮಾರಸ್ವಾಮಿ -ಯೋಗೇಶ್ವರ್ ನಡುವೆ “ಟಾಕ್ವಾರ್’
”ಚನ್ನಪಟ್ಟಣದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಯುತ್ತವೆ. ಅವೆಲ್ಲವೂ ಹೆಚ್ಚಾಗಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿಯೇ ಆಗುತ್ತವೆ. ಇದಕ್ಕಿಂತ ಮುಖ್ಯವಾಗಿ ನಮಗೆ ಬೇಕಿರುವುದು ಜಿಲ್ಲೆಯ ಒಟ್ಟಾರೆ ಅಭಿವೃದ್ಧ. ನಾವೇ ಮಾಡಲಿ, ಅವರೇ ಮಾಡಲಿ, ದುಡ್ಡು ಸರ್ಕಾರದ್ದೇ ಆಗಿರುತ್ತದೆ. ಹಾಗಿರುವಾಗ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಅವರು ಈ ರೀತಿ ಗೊಂದಲ ಸೃಷ್ಟಿಸುವುದು ಸರಿಯಲ್ಲ” ಎಂದರು.
”ಸಿ ಪಿ ಯೋಗೇಶ್ವರ್ ಅವರು ನೇರವಾಗಿ ಮುಖ್ಯಮಂತ್ರಿಗಳ ಅನುದಾನದಿಂದ 50 ಕೋಟಿ ರೂಪಾಯಿಯನ್ನು ಅಭಿವೃದ್ಧಿಗಾಗಿ ತಂದಿದ್ದಾರೆ. ಕುಮಾರಸ್ವಾಮಿಯವರು ಇದರಲ್ಲಿ ಖುಷಿಯಿಂದ ಪಾಲ್ಗೊಳ್ಳಬೇಕಿತ್ತು ಅದನ್ನು ಬಿಟ್ಟು ವಿವಾದ ಉಂಟು ಮಾಡುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…