ಕುಂದಾಪುರ ವಾರದ ಸಂತೆ : ಹೆದ್ದಾರಿಯಲ್ಲೇ ಪಾರ್ಕಿಂಗ್‌

ವಾಹನ ನಿಲ್ಲಿಸಲು ಪರ್ಯಾಯ ಜಾಗವಿಲ್ಲ; ಸಂಚಾರಕ್ಕೆ ತೊಡಕು

Team Udayavani, Mar 7, 2021, 5:10 AM IST

ಕುಂದಾಪುರ ವಾರದ ಸಂತೆ : ಹೆದ್ದಾರಿಯಲ್ಲೇ ಪಾರ್ಕಿಂಗ್‌

ಪ್ರತಿ ಶನಿವಾರ ನಡೆಯುವ ಕುಂದಾಪುರದ ಸಂತೆಗೆ ಜಿಲ್ಲೆ, ಹೊರ ಜಿಲ್ಲೆಯ ವಿವಿಧ ಭಾಗಗಳಿಂದ ವ್ಯಾಪಾರಸ್ಥರು, ಗ್ರಾಹಕರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಸಂದರ್ಭ ವಾಹನ ಪಾರ್ಕಿಂಗ್‌ ಮಾಡುವ ಕಷ್ಟ ಅನುಭವಿಸಿದವನಿಗಷ್ಟೇ ಗೊತ್ತು.

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿಯೇ ಎರಡನೇ ಅತೀ ದೊಡ್ಡ ವಾರದ ಸಂತೆಯೆಂದೇ ಹೆಸರಾದ ಕುಂದಾಪುರದ ವಾರದ ಸಂತೆಗೆ ಬರುವ ಜನರಿಗೆ ವಾಹನ ಪಾರ್ಕಿಂಗ್‌ ಮಾಡುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವಾಹನ
ಪಾರ್ಕಿಂಗ್‌ಗೆ ಪರ್ಯಾಯ ಜಾಗವಿಲ್ಲದೆ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲೇ ಪಾರ್ಕಿಂಗ್‌ ಮಾಡಿದರೆ, ಮತ್ತೆ ಕೆಲವರು ಸರ್ವೀಸ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್‌ ಮಾಡುವಂತಾಗಿದೆ.

ಪ್ರತಿ ಶನಿವಾರ ಕುಂದಾಪುರದ ಎಪಿಎಂಸಿ ಪ್ರಾಂಗಣದಲ್ಲಿ ನಡೆಯವ ಕುಂದಾಪುರದ ಸಂತೆಗೆ ಬೈಂದೂರು, ಸಿದ್ದಾಪುರ, ಬ್ರಹ್ಮಾವರ, ಹಾಲಾಡಿ, ವಂಡ್ಸೆ, ಕೋಟೇಶ್ವರ ಸೇರಿದಂತೆ ಅವಿಭಜಿತ ಕುಂದಾಪುರ ತಾಲೂಕಿನಾದ್ಯಂತ ಖರೀದಿಗೆ ಸಾವಿರಾರು ಮಂದಿ ಗ್ರಾಹಕರು ಬರುತ್ತಾರೆ. ಇನ್ನು ತೀರ್ಥಹಳ್ಳಿ, ಶಿವಮೊಗ್ಗ, ಭಟ್ಕಳ, ಉತ್ತರ ಕನ್ನಡ, ಚಿಕ್ಕಮಗಳೂರು, ಶೃಂಗೇರಿ, ಉಡುಪಿ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಮಂದಿ ವ್ಯಾಪಾರಸ್ಥರು ಬೇರೆ ಬೇರೆ ಉತ್ಪನ್ನಗಳ ಮಾರಾಟಕ್ಕೆಂದು ಬರುತ್ತಾರೆ.

ಜಾಗವೇ ಇಲ್ಲ
ವಾರದ ಸಂತೆಗೆ ವ್ಯಾಪಾರಸ್ಥರು, ಗ್ರಾಹಕರು ಸೇರಿ ಸಾವಿರಾರು ಮಂದಿ ಬರುತ್ತಿದ್ದು, ಸಂತೆಯಿಂದ ತುಂಬಾ ವಸ್ತುಗಳನ್ನು ತೆಗೆದುಕೊಂಡು ಹೋಗಲು ಹೆಚ್ಚಿನವರು ವಾಹನಗಳಲ್ಲಿಯೇ ಬರುತ್ತಾರೆ. ಆದರೆ ಇಲ್ಲಿಗೆ ಬರುವ ಗ್ರಾಹಕರಿಗೆ ತಲೆ ನೋವಾಗಿ ಪರಿಣಮಿಸಿರುವುದು ವಾಹನ ಪಾರ್ಕಿಂಗ್‌ ಸಮಸ್ಯೆ. ಎಪಿಎಂಸಿ ಪ್ರಾಂಗಣದೊಳಗೆ ಇರುವ ಸ್ವಲ್ಪ ಜಾಗದಲ್ಲಿ ದ್ವಿಚಕ್ರ ವಾಹನಗಳು, ವ್ಯಾಪಾರಸ್ಥರ ವಾಹನ ಪಾರ್ಕಿಂಗ್‌ಗೆ ಜಾಗ ಸಾಕಾಗುತ್ತಿಲ್ಲ. ಇನ್ನು ಕಾರು, ಟೆಂಪೋ, ಗೂಡ್ಸ್‌, ರಿಕ್ಷಾಗಳನ್ನು ಸರ್ವಿಸ್‌ ರಸ್ತೆಯಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದು, ಅಲ್ಲಿ ಜಾಗ ಸಾಕಾಗದೆ ಕೆಲವರು ಹೆದ್ದಾರಿಯ ಒಂದು ಬದಿಯಲ್ಲಿ ಪಾರ್ಕಿಂಗ್‌ ಮಾಡಿ, ಖರೀದಿಗೆ ಬರುವಂತಾಗಿದೆ.

ಗ್ರಾಹಕರ ಪಾಡು…
ಎಪಿಎಂಸಿ ಪ್ರಾಂಗಣದೊಳಗೆ ಪಾರ್ಕಿಂಗ್‌ಗೆ ಜಾಗವಿಲ್ಲ. ಹಾಗಂತ ಸರ್ವೀಸ್‌ ರಸ್ತೆಯಲ್ಲೋ ಅಥವಾ ಹೆದ್ದಾರಿಯಲ್ಲೋ ವಾಹನಗಳನ್ನು ಪಾರ್ಕಿಂಗ್‌ ಮಾಡಿದರೆ ಪೊಲೀಸರು ಬಂದು ಯಾಕೆ ಇಲ್ಲಿ ನಿಲ್ಲಿಸಿದ್ದು ಎಂದು ಕೇಳುತ್ತಾರೆ. ಸಂತೆಗೆ ಬರುವ ಗ್ರಾಹಕರ ಪಾಡು ಮಾತ್ರ ಹೇಳತೀರದಾಗಿದೆ. ಹಾಗಾದರೆ ವಾಹನ ಪಾರ್ಕಿಂಗ್‌ಗೆ ಜಾಗ ಮಾಡಿಕೊಡಬೇಕಾದವರು ಯಾರು ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಸಂಚಾರಕ್ಕೆ ಸಮಸ್ಯೆ
ಹೆದ್ದಾರಿಯಲ್ಲಿ ಪಾರ್ಕಿಂಗ್‌ ಮಾಡುತ್ತಿರು ವುದರಿಂದ ಇತರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇನ್ನು ಸರ್ವಿಸ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್‌ ಮಾಡುವುದರಿಂದ ಎಪಿಎಂಸಿ ಪ್ರಾಂಗಣಕ್ಕೆ, ಸಂತೆಗೆ ಬರುವವರಿಗೆಲ್ಲ ಭಾರೀ ಸಮಸ್ಯೆಯಾಗುತ್ತಿದೆ. ಸಂತೆ ಮಾರುಕಟ್ಟೆಯ ಒಳಗೆ ಪ್ರವೇಶಿಸಬೇಕಾದರೆ ಸಾಹಸವೇ ಮಾಡಬೇಕಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.