ಕುಂದಾಪುರ ತಾಲೂಕಿನ ವಿವಿಧೆಡೆ ಆಲಿಕಲ್ಲು ಸಹಿತ ಗಾಳಿ ಮಳೆ, ಅಪಾರ ಹಾನಿ
Team Udayavani, Apr 11, 2021, 6:55 PM IST
ಕುಂದಾಪುರ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಆಲಿಕಲ್ಲು, ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.
ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಅಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ ಅಮಾಸೆಬೈಲು ಹಾಗೂ ಉಳ್ಳೂರು -74 ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. ದಿಢೀರ್ ಆಗಮಿಸಿದ ಮಳೆಗೆ ವ್ಯಾಪಾರಿಗಳು ಕಂಗಾಲಾದರು. ಮಾರಾಟಕ್ಕೆ ಇಟ್ಟ ವಸ್ತುಗಳು ಕೊಚ್ಚಿ ಹೋಗತೊಡಗಿತು. ದಿನನಿತ್ಯದ ಬಳಕೆ ಸಹಿತ ಇತರ ವಸ್ತುಗಳು ಮಳೆ ನೀರಿಗೆ ಒದ್ದೆಯಾಗಿವೆ.
ಇದನ್ನೂ ಓದಿ :ಪರ್ಕಳ ಪೇಟೆಯ ಹೆದ್ದಾರಿ ವಿಸ್ತರಣೆ ಕಾಮಗಾರಿ: ಕಟ್ಟಡ ತೆರವಿಗೆ ಸ್ಥಳೀಯರ ವಿರೋಧ
ಮೊಳಹಳ್ಳಿ, ಬಿದ್ಕಲ್ ಕಟ್ಟೆ, ಹುಣ್ಸೆಮಕ್ಕಿ ಪರಿಸರದಲ್ಲಿ ಉತ್ತಮ ಮಳೆಯಾಗಿದೆ. ತೆಕ್ಕಟ್ಟೆ ಪರಿಸರದಲ್ಲಿ ಮಳೆಯಾಗಿದೆ.
ಮಡಾಮಕ್ಕಿ, ಶೇಡಿಮನೆ ಭಾಗದಲ್ಲಿ ಆಲಿಕಲ್ಲು ಮಳೆ. ಬೆಳ್ವೆಯಲ್ಲಿ ಬೀಸಿದ ಭಾರೀ ಗಾಳಿಗೆ ಅಡಿಕೆ ಮರಗಳು ಧರೆಗುರುಳಿವೆ. ಕುಂದಾಪುರ ನಗರದಲ್ಲಿ ಹನಿಯಷ್ಟೇ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು