ಕುರುಗೋಡು: ಟ್ರ್ಯಾಕ್ಟರ್ ಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವು
Team Udayavani, Jan 5, 2022, 2:53 PM IST
ಕುರುಗೋಡು: ಕೃಷಿ ಕೆಲಸಕ್ಕಾಗಿ ತೆರಳಿ ಸಂಜೆ ಒಂದೇ ಬೈಕ್ ನಲ್ಲಿ ಮರಳುತ್ತಿದ್ದ ಮೂವರು ಯುವಕರು ಟ್ರಾಕ್ಟರ್ ಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತ ದುರ್ದೈವಿಗಳು ಬಾದನಹಟ್ಟಿ ಗ್ರಾಮದ ಕರಿಬಸಪ್ಪ (25), ದೊಡ್ಡಬಸಪ್ಪ (27), ಗೊಲ್ಲರ ಗೋಪಾಲ (28) ಎಂದು ತಿಳಿದು ಬಂದಿದೆ.
ಬಾದನಹಟ್ಟಿ ಗ್ರಾಮದಿಂದ ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಹೋಗುವ ಹೊರ ರಸ್ತೆ ಯಲ್ಲಿ ಗೊಲ್ಲರ ಗೋಪಾಲ ಅವರ ಗದ್ದೆ ಕೆಲಸಕ್ಕೆ ಹೋಗಿ ಸಂಜೆ ಮರಳಿ ಬರುವ ಸಂದರ್ಭದಲ್ಲಿ ರಸ್ತೆ ಯಲ್ಲಿ ಕುರುಗೋಡು ನಿವಾಸಿ ಬಸವರಾಜ್ ಅವರು ಯಾವುದೇ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸದೆ ಟ್ರಾಕ್ಟರ್ ನಿಲ್ಲಿಸಿದ್ದರಿಂದ ಅದಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಪಟ್ಟ ಗೊಲ್ಲರ ಗೋಪಾಲ ಪತ್ನಿ ಸೇರಿದಂತೆ 2 ಗಂಡು, 1 ಹೆಣ್ಣುಮಗುವಿದ್ದು, ಕರಿಬಸವ ಗೆ ಪತ್ನಿ ಸೇರಿದಂತೆ 3 ಮಕ್ಕಳು ಇದ್ದು, ದೊಡ್ಡಬಸಪ್ಪ ರ ಪತ್ನಿ 7 ತಿಂಗಳ ಗರ್ಭಿಣಿಯಾಗಿದ್ದು ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
MUST WATCH
ಹೊಸ ಸೇರ್ಪಡೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !