ಕುಷ್ಟಗಿ: ಪೊಲೀಸ್ ಠಾಣೆ ಹಿಂಭಾಗದ ಮಾಜಿ ಸೈನಿಕನ ಮನೆಯಲ್ಲೇ ಕಳವು
Team Udayavani, Feb 3, 2023, 8:10 PM IST
ಕುಷ್ಟಗಿ: ಕುಷ್ಟಗಿ ಪಟ್ಟಣದ ಹೊರವಲಯದ ಲಿಯೋ ಕಾಲೋನಿ ವ್ಯಾಪ್ತಿಯ ಪೊಲೀಸ್ ಠಾಣೆಯ ಹಿಂಭಾಗದ ಮಾಜಿ ಸೈನಿಕರೊಬ್ಬರ ಮನೆಯಲ್ಲಿ ಕಳವಾಗಿದೆ.
ಮಾಜಿ ಸೈನಿಕ, ಮಡಿವಾಳ ಸಮಾಜದ ಅಧ್ಯಕ್ಷ ಸುಭಾಶ್ಚಂದ್ರ ಮಡಿವಾಳ ಅವರು ತಮ್ಮ ಕುಟುಂಬದೊಂದಿಗೆ ಹನುಮಸಾಗರದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆಗೆ ಶುಕ್ರವಾರ ಬೆಳಗ್ಗೆ ಹೋಗಿದ್ದರು. ಸಂಜೆ 5 ಕ್ಕೆ ಮನೆಗೆ ವಾಪಸ್ಸಾದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಮನೆಯನ್ನು ಪರಿಶೀಲಿಸಿ ಶ್ವಾನ ದಳ ಕರೆಸಲು ಕ್ರಮ ಕೈಗೊಂಡಿದ್ದಾರೆ.
ಮಧ್ಯಾಹ್ನದ ಸಮಯದಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಕಳ್ಳರು ಮನೆಯ ಬೀಗ ಮುರಿದು ಕಪಾಟಿನಲ್ಲಿದ್ದ 12 ತೊಲ ಬಂಗಾರ, ಒಂದೂವರೆ ಲಕ್ಷ ರೂ. ದೋಚಿದ್ದಾರೆ. ಬೆಳ್ಳಿಯ ದೇವರ ಮೂರ್ತಿಗಳನ್ನು ದಾರಿಯಲ್ಲಿ ಎಸೆದಿದ್ದಾರೆ.
ಈ ಪ್ರಕರಣ ಲಿಯೋ ಕಾಲೋನಿ, ಕೃಷ್ಣಗಿರಿ ಕಾಲೋನಿ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಸಂಸ್ಕೃತಿಯ ಪರಂಪರೆ ಆದಿ-ಅನಂತ…: ರಾಜ್ಯಪಾಲ ಗೆಹ್ಲೋಟ್
ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ
ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ
ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ
ಕೇಸರಟ್ಟಿ ಹಣವಾಳ ರಸ್ತೆ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
MUST WATCH
ಹೊಸ ಸೇರ್ಪಡೆ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ
ನೇಕಾರ ಸಮ್ಮಾನ್ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ
ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ