ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್ಗಳಲ್ಲಿ ವಿವರ ಅಪ್ಡೇಟ್ಗೆ ತಾಕೀತು
Team Udayavani, Apr 20, 2021, 7:20 AM IST
ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್ಡೇಟ್ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ.
ಕಳೆದ ವರ್ಷದ ಲಾಕ್ಡೌನ್ ಅವಧಿಯಲ್ಲಿ ಖಾಸಗಿ ಬ್ಯಾಂಕ್ನಲ್ಲಿ ಎಸ್ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್ಕ್ಷಣವೇ ಕೆವೈಸಿ ವಿವರ ಅಪ್ಡೇಟ್ ಮಾಡಬೇಕು. ಇಲ್ಲದೇ ಇದ್ದರೆ ಖಾತೆ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು ಎಂದಿದ್ದಾರೆ. ಬ್ಯಾಂಕ್ನ ಸಿಬಂದಿ ತಮ್ಮನ್ನು ಹೈರಿಸ್ಕ್ ಕಸ್ಟಮರ್ ಎಂದು ವರ್ಗೀಕರಿಸಿದ್ದಾರೆ ಎಂದು ವ್ಯಕ್ತಿ ಹೇಳಿದ್ದಾರೆ. ಕಚೇರಿಯೊಂದರದಲ್ಲಿ ವೇತನ ಪಡೆದು ಜೀವಿಸುತ್ತಿರುವ ತಾನು ಆ ವರ್ಗಕ್ಕೆ ಹೇಗೆ ಸೇರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಕೋಲ್ಕತಾದಲ್ಲಿನ ಸರಕಾರಿ ಸ್ವಾಮ್ಯದ ಬ್ಯಾಂಕ್ ಒಂದರಲ್ಲಿ ಹಿರಿಯ ನಾಗರಿಕರೊಬ್ಬರು ಪಿಂಚಣಿ ಖಾತೆ ಹೊಂದಿದ್ದಾರೆ. 15 ವರ್ಷದಿಂದ ನಿಯಮಿತವಾಗಿ ಪಿಂಚಣಿ ಬರುತ್ತಿತ್ತು. ಕಳೆದ ತಿಂಗಳು ಕೆವೈಸಿ ಕಾರಣಕ್ಕಾಗಿ ಪಿಂಚಣಿ ಪಾವತಿಯಾಗಿರಲಿಲ್ಲ ಎಂದಿದ್ದಾರೆ. ಕೆವೈಸಿ ಅಪ್ಡೇಟ್ ಆಗದಿದ್ದರೆ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಸುತ್ತೋಲೆ ಕೂಡ ಕಳುಹಿಸಲಾಗಿಲ್ಲ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಕೆವೈಸಿ- ಯಾರಿಗೆ ಹೇಗೆ?
ಹೈರಿಸ್ಕ್ ಗ್ರಾಹಕರು: ಪ್ರತೀ 1-2 ವರ್ಷಗಳಲ್ಲಿ ಒಂದು ಬಾರಿ
ಮೀಡಿಯಂ ರಿಸ್ಕ್ ಗ್ರಾಹಕರು : ಪ್ರತೀ 8 ವರ್ಷಗಳಿಗೆ ಒಮ್ಮೆ
ಲೋ ರಿಸ್ಕ್ ಗ್ರಾಹಕರು: ಪ್ರತೀ ಹತ್ತು ವರ್ಷಗಳಿಗೆ ಒಂದು ಬಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ