“ಲಡ್ಕಿ ಹೂಂ, ಲಡ್ ಸಕ್ತಿ ಹೂಂ” ಪೋಸ್ಟರ್ ಗರ್ಲ್ ಗೆ ಟಿಕೆಟ್ ನಿರಾಕರಿಸಿದ ಕಾಂಗ್ರೆಸ್!
ಒಂದು ತಿಂಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡ ವ್ಯಕ್ತಿಗೆ ಟಿಕೆಟ್ ನೀಡಿರುವುದಾಗಿ ಪ್ರಿಯಾಂಕಾ ದೂರಿದ್ದಾರೆ.
Team Udayavani, Jan 15, 2022, 1:05 PM IST
ಲಕ್ನೋ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ತನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಲು ನಿರಾಕರಿಸಿದೆ. ನಾನು ಲಂಚ ಕೊಡಲು ಒಪ್ಪದ ಕಾರಣ ಟಿಕೆಟ್ ನೀಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತೆ, ಕಾಂಗ್ರೆಸ್ ನ ಲಡ್ಕಿ ಹೂಂ, ಲಡ್ ಸಕ್ತಿ ಹೂಂ (ನಾನು ಹೆಣ್ಣುಮಗಳು, ಹೋರಾಡಬಲ್ಲೆ) ಪ್ರಚಾರ ಅಭಿಯಾನದ ಪೋಸ್ಟರ್ ಗರ್ಲ್ ಪ್ರಿಯಾಂಕಾ ಮೌರ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ:ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆ ಮಾಡುತ್ತೇವೆ: ಕಾಂಗ್ರೆಸ್ ಶಾಸಕ
ತನಗೆ ಟಿಕೆಟ್ ನೀಡುವ ಬದಲು ಕಾಂಗ್ರೆಸ್ ಹೈಕಮಾಂಡ್, ಒಂದು ತಿಂಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡ ವ್ಯಕ್ತಿಗೆ ಟಿಕೆಟ್ ನೀಡಿರುವುದಾಗಿ ಪ್ರಿಯಾಂಕಾ ದೂರಿದ್ದಾರೆ.
ಕಾಂಗ್ರೆಸ್ ಪಕ್ಷ ನನ್ನ ಮುಖ, ನನ್ನ ಹೆಸರು ಹಾಗೂ ಸಾಮಾಜಿಕ ಜಾಲತಾಣದಲ್ಲಿನ 10ಲಕ್ಷ ಫಾಲೋವರ್ಸ್ ಗಳನ್ನು “ಲಡ್ಕಿ ಹೂಂ, ಲಡ್ ಸಕ್ತಿ ಹೂಂ ಪ್ರಚಾರಾಂದೋಲನಕ್ಕೆ ಬಳಸಿಕೊಂಡರು. ಆದರೆ ವಿಧಾನಸಭಾ ಚುನಾವಣೆಯ ಟಿಕೆಟ್ ಅನ್ನು ಬೇರೆ ಯಾರಿಗೋ ನೀಡಿದ್ದಾರೆ. ಇದೆಲ್ಲಾ ಮೊದಲ ನಿರ್ಧಾರವಾಗಿದ್ದು, ನಾನು ಪ್ರಿಯಾಂಕಾ ಗಾಂಧಿ ಕಾರ್ಯದರ್ಶಿ ಸಂದೀಪ್ ಸಿಂಗ್ ಗೆ ಲಂಚ ಕೊಡದಿದ್ದ ಪರಿಣಾಮ ಟಿಕೆಟ್ ಸಿಗಲಿಲ್ಲ ಎಂದು ಉತ್ತರಪ್ರದೇಶ ಕಾಂಗ್ರೆಸ್ ನ ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರಿಯಾಂಕಾ ಮೌರ್ಯ ಟೀಕಿಸಿದ್ದಾರೆ.
ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಬಿಂಬಿಸಲು ಪ್ರಿಯಾಂಕಾ ಗಾಂಧಿ, ಲಡ್ಕಿ ಹೂಂ ಲಡ್ ಸಕ್ತಿ ಹೂಂ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ಪ್ರಚಾರ ಅಭಿಯಾನದ ಪೋಸ್ಟರ್ ನಲ್ಲಿ ಪ್ರಿಯಾಂಕಾ ಮೌರ್ಯ ಅವರು ಕಾಣಿಸಿಕೊಂಡಿದ್ದರು.
ಲಕ್ನೋದ ಸರೋಜಿನಿ ನಗರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾಂಕಾ ಮೌರ್ಯ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ರುದ್ರ ದಮನ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷ ಇತ್ತೀಚೆಗಷ್ಟೇ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು