ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು
Team Udayavani, Nov 27, 2020, 9:00 PM IST
ಬೆಂಗಳೂರು: ಮನೆ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ನಗ್ಮಾ (24)ಎಂಬಾಕೆಯನ್ನು ಬಂಧಿಸುವಲ್ಲಿ ಚಂದ್ರಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ನಗ್ಮಾ ಬಂಧನನಿಂದ ಐದು ಕಳವು ಪ್ರಕರಣಗಳು ಪತ್ತೆಯಾಗಿದ್ದು 6.46 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆ ನಯಾಜ್ ಖಾನ್ ಹಾಗೂ ಅಪ್ಸರ್ ಖಾನ್ ಎಂಬುವವರನ್ನು ಬಂಧಿಸಿ ಅವರಿಂದ ಕಳವು ಆಭರಣ ಜಪ್ತಿ ಮಾಡಿಕೊಂಡಿದ್ದರು. ಈ ವೇಳೆ ಆರೋಪಿಗಳು ನಗ್ಮಾ ಕೂಡ ತಮ್ಮ ಜತೆ ಕಳವು ಕೃತ್ಯಗಳಲ್ಲಿ ಭಾಗವಹಿಸಿದ್ದು ಆಕೆಯ ಬಳಿ ಮತ್ತಷ್ಟು ಕಳವು ಮಾಲಿದೆ ಎಂದು ಹೇಳಿದ್ದರು.
ಇದನ್ನೂ ಓದಿ:ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?
ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಇನ್ಸ್ಪೆಕ್ಟರ್ ಬ್ರಿಜೇಶ್ ಮ್ಯಾಥ್ಯೂ ನೇತೃತ್ವದ ತಂಡ, ಆರೋಪಿ ನಗ್ಮಾಳನ್ನು ಬಂಧಿಸಿ ಆಕೆಯಿಂದ ಕಳವು ಆಭರಣಗಳನ್ನು ಜಪ್ತಿ ಮಾಡಿಕೊಂಡಿದೆ.
ಕಳ್ಳತನವೇ ಕಸುಬು!
ಆನೆಪಾಳ್ಯ ನಿವಾಸಿಯಾದ ನಗ್ಮಾ ಹಲವು ವರ್ಷಗಳಿಂದ ಕಳ್ಳತನವನ್ನೇ ಕಸುಬಾಗಿಸಿಕೊಂಡಿದ್ದಾಳೆ. ಆರೋಪಿಗಳಾದ ನಯಾಜ್ ಹಾಗೂ ಅಪ್ಸರ್ ಖಾನ್ ಜತೆ ಸೇರಿ ಕಳವು ಕೃತ್ಯಗಳನ್ನು ಮಾಡುತ್ತಿದ್ದಳು. ಆರೋಪಿಗಳ ಹೆಂಡತಿಯಂತೆ ನಟಿಸುತ್ತಾ ನಗರದ ಹಲವು ಬಡಾವಣೆಗಳಲ್ಲಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಸುತ್ತಾಡುತ್ತಿದ್ದಳು. ಹೊರಗಡೆಯಿಂದ ಬಾಗಿಲು ಬಡಿಯುತ್ತಿದ್ದರು ಈ ವೇಳೆ ಮನೆಯಲ್ಲಿ ಯಾರಾದರೂ ಇರುವುದು ಕಂಡು ಬಂದತೆ ನಮ್ಮದು ಕುಟುಂಬ ಮನೆ ಬಾಡಿಗೆ ಬೇಕಿದೆ ಎಂದು ಹೇಳಿ ಸಬೂಬು ಹೇಳಿ ಅಲ್ಲಿಂದ ತೆರಳುತ್ತಿದ್ದರು.
ಬೀಗ ಹಾಕಿದ ಮನೆಗಳು ಕಂಡು ಬಂದರೆ ಬೀಗ ಒಡೆದು ಒಳನುಗ್ಗಿ ಕಳವು ಮಾಡುತ್ತಿದ್ದರು. ಈ ವೇಳೆ ನಗ್ಮಾ ಹೊರಗಡೆ ನಿಂತು ಯಾರಾದರೂ ಬಂದರೆ ಮಾಹಿತಿ ನೀಡುತ್ತಿದ್ದಳು. ಕಳವು ಮಾಡಿದ ಆಭರಣಗಳಲ್ಲಿ ಎಲ್ಲರೂ ಹಂಚಿಕೊಳ್ಳುತ್ತಿದ್ದರು.
ಆರೋಪಿ ನಗ್ಮಾ ಈ ಹಿಂದೆಯೂ ಎಚ್ಎಎಲ್ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿ ಬಂಧಿತಳಾಗಿದ್ದಳು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು .
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ
ಅಕ್ರಮ ಕಸಾಯಿಖಾನೆಗೆ ಪೋಲೀಸರ ದಾಳಿ : ಓರ್ವನ ಬಂಧನ, ಗೋ ಮಾಂಸ ವಶ
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ನಿಗದಿಯಂತೆ ಕಾಮನ್ವೆಲ್ತ್ ಗೇಮ್ಸ್: ಸಿಡಬ್ಲ್ಯುಜಿ ಫೆಡರೇಶನ್ ವಿಶ್ವಾಸ
ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ