ಲಖೀಂಪುರ್ ಖೇರಿ ಹಿಂಸಾಚಾರ: 5,000 ಪುಟಗಳ ಆರೋಪಪಟ್ಟಿ ಸಲ್ಲಿಕೆ, ಸಚಿವರ ಪುತ್ರ ಪ್ರಮುಖ ಆರೋಪಿ
ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ನೀಡುವ ಮುನ್ನ ಈ ಹಿಂಸಾಚಾರ ನಡೆದಿತ್ತು ಎಂದು ಆರೋಪಿಸಲಾಗಿದೆ.
Team Udayavani, Jan 3, 2022, 1:24 PM IST
ನವದೆಹಲಿ: ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಸೋಮವಾರ(ಜನವರಿ 03) 5,000 ಪುಟಗಳ ಆರೋಪಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ರಾಜ್ಯ ಗೃಹಖಾತೆ ಸಚಿವ ಅಜಯ್ ಮಿಶ್ರಾ ಥೇಣಿ ಪುತ್ರ ಅಶೀಶ್ ಮಿಶ್ರಾನನ್ನು ಪ್ರಮುಖ ಆರೋಪಿ ಎಂದು ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಇಂದಿನಿಂದ ಜೋಹಾನ್ಸ್ ಬರ್ಗ್ ಟೆಸ್ಟ್: ವಿರಾಟ್ ಪಂದ್ಯದಿಂದ ಔಟ್, ರಾಹುಲ್ ನೂತನ ನಾಯಕ
ರೈತರ ಪ್ರತಿಭಟನೆ ಸಂದರ್ಭದಲ್ಲಿನ ಹಿಂಸಾಚಾರದ ನಂತರ ಎಂಟು ಮಂದಿ ಸಾವನ್ನಪ್ಪಿದ್ದರು. ಉತ್ತರಪ್ರದೇಶದ ಲಖೀಂಪುರ್ ಖೇರಿಗೆ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ನೀಡುವ ಮುನ್ನ ಈ ಹಿಂಸಾಚಾರ ನಡೆದಿತ್ತು ಎಂದು ಆರೋಪಿಸಲಾಗಿದೆ.
ಉತ್ತರಪ್ರದೇಶ ಸಚಿವರನ್ನು ಸ್ವಾಗತಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರ ಬೆಂಗಾವಲು ಪಡೆ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ನಂತರ ಹಿಂಸಾಚಾರದಲ್ಲಿ ನಾಲ್ವರು ರೈತರು ಸಾವನ್ನಪ್ಪಿದ್ದರು. ಲಖೀಂಪುರ್ ಖೇರಿ ಹಿಂಸಾಚಾರದ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಪ್ರಕಾರ, ಪ್ರತಿಭಟನಾ ನಿರತ ರೈತರನ್ನು ಕೊಲ್ಲುವ ವ್ಯವಸ್ಥಿತ ಸಂಚು ಇದಾಗಿತ್ತು ಎಂದು ತಿಳಿಸಿದೆ.
ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಶೀಶ್ ಮಿಶ್ರಾ ಸ್ಥಳದಲ್ಲಿ ಇದ್ದಿರುವುದಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ಹೇಳಿವೆ. ಅಷ್ಟೇ ಅಲ್ಲದೇ ಆರೋಪಪಟ್ಟಿಯಲ್ಲಿ ಅಶೀಶ್ ಮಿಶ್ರಾನ ಸಂಬಂಧಿಯ ಹೆಸರನ್ನೂ ಕೂಡಾ ದಾಖಲಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?