ನನ್ನ ತಾಕತ್ತಿನ ಬಗ್ಗೆ ಪ್ರಶ್ನಿಸಿದವರಿಗೆ ಜನತೆ ಸರಿಯಾಗಿ ಉತ್ತರ ನೀಡಿದ್ದಾರೆ: ಸವದಿ
ಅಥಣಿ ಜನತೆ ನನ್ನ ದೇವರು... ಅಭಿಮಾನಿಗಳ ಅದ್ದೂರಿ ಸ್ವಾಗತ
Team Udayavani, May 13, 2023, 10:26 PM IST
ಅಥಣಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಭರ್ಜರಿ ಗೆಲುವವನ್ನು ಸಾಧಿಸುವ ಮೂಲಕ ಮತ ಏಣಿಕೆ ಆದನಂತರ ಬೆಳಗಾವಿಯಿಂದ ಅಥಣಿಗೆ ಆಗಮಿಸಿದ ಲಕ್ಷ್ಮಣ ಸವದಿಯವರನ್ನು ಅಥಣಿ ಕಾಂಗ್ರೆಸ್ ಕಾರ್ಯಕರ್ತರು ಅದ್ದುರಿಯಾಗಿ ಸ್ವಾಗತಿಸಿದರು.
ಶಿವಾಜಿ ವೃತ್ತದಿಂದ ಲಕ್ಷ್ಮಣ ಸವದಿಯವರನ್ನು ಅದ್ದುರಿಯಾಗಿ ಬರಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹರ್ಷೋದ್ಘಾರದ ನಡುವೆ ಸವದಿಯವರನ್ನು ತೆರೆದ ವಾಹನದಲ್ಲಿ ಕರೆ ತಂದು ಬಸವೇಶ್ವರ ವೃತ್ತಕ್ಕೆ ಬಂದು ಅಲ್ಲಿಂದ ಹಲ್ಯಾಳ ವೃತ್ತದಿಂದ ಅಂಬೇಡ್ಕರ ವೃತ್ತಕ್ಕೆ ಬಂದು ಡಾ.ಬಾಬಾಸಾಹೇಬ ಅಂಬೇಡ್ಕರವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಥಣಿ ಪಟ್ಟಣದ ಪ್ರಮುಖ ಬಿದಿಗಳ ಮೂಲಕ ಸಾಗಿ ತರೆದ ವಾನದಲ್ಲಿ ಮೇರವಣಿಗೆ ನಡೆಸಲಾಯಿತು. ತೆರೆದ ವಾಹನದಲ್ಲಿ ತೆರಳಿದ ಲಕ್ಷ್ಮಣ ಸವದಿ ಮತದಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.
ಈ ಬಾರಿ ಚುನಾವಣೆ ನನ್ನ ಚುನಾವಣೆಯಾಗಿರದೆ ಅಥಣಿ ಜನತೆಯ ಸ್ವಾಭಿಮಾನದ ಚುನಾವಣೆಯಾಗಿತ್ತು ಈ ಗೆಲವು ಅಥಣಿ ಮತಕ್ಷೇತ್ರದ ಮತದಾರರ ಗೆಲವು ಆಗಿದೆ. ನನ್ನ ತಾಕತ್ತಿನ ಬಗ್ಗೆ ಪ್ರಶ್ನಿಸಿದವರಿಗೆ ಅಥಣಿ ಜನತೆ ಸರಿಯಾಗಿ ಉತ್ತರವನ್ನು ನೀಡಿದ್ದಾರೆ. ನನಗೆ 76 ಸಾವಿರಕ್ಕಿಂತ ಅಧಿಕ ಮತಗಳನ್ನು ನೀಡಿದ ಮತದಾರರು ಹಾಗೂ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರು, ಮುಖಂಡರು ಹಾಗೂ ಪದಾಧಿಕಾರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದರು.
ಈ ವೇಳೆ ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ಮುಖಂಡರಾದ ಗಜಾನನ ಮಂಗಸೂಳಿ, ಸದಾಶಿವ ಬೂಟಾಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ