ಭೂಕುಸಿತ: ತಜ್ಞರ ಸಮಿತಿ ಶಿಫಾರಸುಗಳತ್ತ ಸರಕಾರ ಲಕ್ಷ್ಯಹರಿಸಲಿ


Team Udayavani, Apr 3, 2021, 7:00 AM IST

ಭೂಕುಸಿತ: ತಜ್ಞರ ಸಮಿತಿ ಶಿಫಾರಸುಗಳತ್ತ ಸರಕಾರ ಲಕ್ಷ್ಯಹರಿಸಲಿ

ಮಳೆಗಾಲ ಬಂತೆಂದರೆ ಸಾಕು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭೂಕುಸಿತಗಳು ಸಂಭವಿಸಿ ಪ್ರಾಣ ಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗುವುದು ಸಾಮಾನ್ಯ. ಕಳೆದ ಕೆಲವು ವರ್ಷಗಳಿಂದೀಚೆಗೆ ಪ್ರತೀ ಮಳೆಗಾಲದಲ್ಲಿ ಭೂ ಕುಸಿತದ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಲೇ ಸಾಗಿವೆ. ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅಧ್ಯಕ್ಷತೆಯ ತಜ್ಞರನ್ನು ಒಳಗೊಂಡ ಭೂಕುಸಿತ ಅಧ್ಯಯನ ಸಮಿತಿ ಈ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿ ಭೂಕುಸಿತ ತಡೆ ಸಂಬಂಧ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಸರಕಾರ ಕ್ಕೆ ಸಲ್ಲಿಸಿದೆ.

ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಸಂಸ್ಥೆ ಮತ್ತು ಭಾರತೀಯ ಭೂಗರ್ಭ ಸರ್ವೇಕ್ಷಣ ಸಂಸ್ಥೆ ಪಶ್ಚಿಮ ಘಟ್ಟದಲ್ಲಿ ಈವರೆಗೆ ಸಂಭವಿಸಿರುವ ಭೂಕುಸಿತಗಳ ಸಮಗ್ರ ಅಧ್ಯಯನ ನಡೆಸಿ ನೀಡಿದ ವರದಿಯ ಪ್ರಕಾರ ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳ 23 ತಾಲೂಕುಗಳಲ್ಲಿ ಭವಿಷ್ಯದಲ್ಲೂ ಭೂಕುಸಿತದ ಸಾಧ್ಯತೆಗಳಿವೆ. ಇದರ ಜತೆಯಲ್ಲಿ ತಜ್ಞರ ಸಮಿತಿಯ ಪ್ರಕಾರ ಈ ತಾಲೂಕುಗಳ ಜತೆಯಲ್ಲಿ ಇನ್ನೂ ನಾಲ್ಕು ತಾಲೂಕುಗಳಲ್ಲಿ ಭೂ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಈ ಪೈಕಿ ಬೆಳಗಾವಿಯ ಖಾನಾಪುರವೂ ಸೇರಿರುವುದು ತುಸು ಆತಂಕಕಾರಿ ವಿಷಯವೇ.

ತಜ್ಞರ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಮುಖ್ಯವಾಗಿ ಭೂಕುಸಿತ ಸಂಭಾವ್ಯ ಪ್ರದೇಶಗಳು ಮತ್ತು ಭೂಕುಸಿತದ ಕುರಿತು ಮುನ್ಸೂಚನೆ ನೀಡಲು ತಾಂತ್ರಿಕ ವ್ಯವಸ್ಥೆ ರೂಪಣೆ, ಪ್ರಾಕೃತಿಕ ಸಂಪತ್ತಿನ ಉಳಿವು, ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿ ಸ್ಥಳೀಯ ಸಸ್ಯ ಪ್ರಬೇಧಗಳ ಗಿಡಗಳನ್ನು ನೆಟ್ಟು ಅರಣ್ಯ ಬೆಳೆಸುವುದು, ಮೇಲ್ಮೆ„ಯಲ್ಲಿ ನೀರು ಹರಿಯುವ ಸಹಜ ವ್ಯವಸ್ಥೆಗಳನ್ನು ಉಳಿಸುವುದರ ಜತೆಯಲ್ಲಿ ಅವುಗಳ ಸಮರ್ಪಕ ನಿರ್ವಹಣೆ ಹಾಗೂ ಅನಧಿಕೃತವಾಗಿ ಬಳಸಲಾಗುತ್ತಿರುವ ಮರ ಕಡಿಯುವ, ಭೂ ಕೊರೆತದ ಯಂತ್ರಗಳು ಮತ್ತು ಗಣಿಗಳಲ್ಲಿ ಬಳಸಲಾಗುವ ಸ್ಫೋಟಕಗಳ ಬಳಕೆಯ ನಿಯಂತ್ರಣಕ್ಕಾಗಿ ಕಾನೂನು ಮತ್ತು ಸಕ್ರಮ ಪ್ರಾಧಿಕಾರ ರಚನೆಯ ಶಿಫಾರಸುಗಳನ್ನು ಮಾಡಲಾಗಿದೆ.

ಅಭಿವೃದ್ಧಿ ಯೋಜನೆಗಳು, ಸರಕಾರಿ ನಿವೇಶನಗಳ ಕೊರತೆಯ ನೆಪದಲ್ಲಿ ಅರಣ್ಯ ನಾಶ ಮತ್ತು ಅರಣ್ಯ ಪ್ರದೇಶಗಳ ಅತಿಕ್ರಮಣ ಎಗ್ಗಿಲ್ಲದೆ ಸಾಗಿದ್ದು ಇದರಿಂದಾಗಿ ಭೂಕುಸಿತಗಳು ಸಂಭವಿಸುತ್ತಿವೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಅದು ಸರಕಾರ ವಿರಲಿ, ಖಾಸಗಿಯವರಾಗಿರಲಿ ಬಹುತೇಕ ಗುಡ್ಡಗಳು ಸಮತಟ್ಟಾಗಿವೆ. ಆಧುನಿಕ ಯಂತ್ರಗಳಿಂದ ಈ ಎಲ್ಲ ಗುಡ್ಡಗಳ ಕಲ್ಲುಬಂಡೆಗಳನ್ನು ಉರುಳಿಸಿ ಬಯಲು ಪ್ರದೇಶವನ್ನಾಗಿ ಮಾರ್ಪಡಿಸಲಾಗಿದೆ. ಇನ್ನು ಅರಣ್ಯ ಪ್ರದೇಶದ ತಪ್ಪಲಿನ ನಿವಾಸಿಗಳು ಹಂತಹಂತವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಕೊಳ್ಳುತ್ತಲೇ ಬಂದಿದ್ದಾರೆ. ನದಿ, ತೋಡು, ಕೆರೆ.. ಹೀಗೆ ಎಲ್ಲ ಜಲಮೂಲಗಳು ಮತ್ತು ನೀರು ಹರಿಯುವ ಜಾಗಗಳ ಮೇಲಣ ಮಾನವ ದಾಳಿ ನಿರಂ ತರವಾಗಿ ಸಾಗಿದೆ.

ಸರಕಾರ ಮತ್ತು ಸ್ಥಳೀಯ ಜನತೆ ಪರಸ್ಪರ ಕೈಜೋಡಿಸಿ ಕಾರ್ಯೋನ್ಮುಖವಾದಲ್ಲಿ ಸಮಿತಿಯ ಪ್ರತಿಯೊಂದೂ ಶಿಫಾರಸುಗಳನ್ನು ಅನುಷ್ಠಾನಗೊಳಿಸಬಹುದಾಗಿದೆ. ಈ ವಿಚಾರದಲ್ಲಿ ಸರಕಾರ ಒಂದಿಷ್ಟು ಬದ್ಧತೆ, ಇಚ್ಛಾಶಕ್ತಿಯನ್ನು ಪ್ರದರ್ಶಿಸಿದಲ್ಲಿ ಭೂಕುಸಿತವನ್ನು ತಡೆಗಟ್ಟುವುದು ಅಸಾಧ್ಯವಾದ ಕಾರ್ಯವೇನಲ್ಲ. ಸರಕಾರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಇವೆರಡೂ ವಿಚಾರಗಳಲ್ಲಿ ಸಮತೋಲನ ಕಾಯ್ದುಕೊಂಡು ಒಂದಿಷ್ಟು ದೂರದೃಷ್ಟಿ ಮತ್ತು ವಿವೇಚನೆಯಿಂದ ಮುಂದಡಿ ಇಡುವುದು ಹೆಚ್ಚು ಸೂಕ್ತ ಮತ್ತು ಪರಿಣಾಮಕಾರಿ ನಡೆಯಾದೀತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.