ಗೊಟಬಯ ರಾಜೀನಾಮೆ ಅಂಗೀಕಾರ: ಏಳು ದಿನದಲ್ಲಿ ಲಂಕಾದ ನೂತನ ಅಧ್ಯಕ್ಷರ ಆಯ್ಕೆ: ಸ್ಪೀಕರ್

ರಾಜಕೀಯ ಬಿಕ್ಕಟ್ಟಿನ ಕುರಿತು ಸರ್ವ ಪಕ್ಷಗಳ ಸಭೆ ನಡೆಯುತ್ತಿರುವುದಾಗಿ ವರದಿ ವಿವರಿಸಿದೆ.

Team Udayavani, Jul 15, 2022, 11:31 AM IST

ಗೊಟಬಯ ರಾಜೀನಾಮೆ ಅಂಗೀಕಾರ: ಏಳು ದಿನದಲ್ಲಿ ಲಂಕಾದ ನೂತನ ಅಧ್ಯಕ್ಷರ ಆಯ್ಕೆ: ಸ್ಪೀಕರ್

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ತೆರಳಿದ ನಂತರ ಸಲ್ಲಿಸಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಶ್ರೀಲಂಕಾ ಸಂಸತ್ ಸ್ಪೀಕರ್ ತಿಳಿಸಿದ್ದು, ಏಳು ದಿನದೊಳಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಚಾಲಕನ ಬಳಿ ಹಣವಿಲ್ಲವೆಂದು ವಾಹನ ಸುಟ್ಟು ಹಾಕಿ ವಿಕೃತಿ ಮೆರದ ಪುಂಡರು

ಶ್ರೀಲಂಕಾದಿಂದ ಪರಾರಿಯಾಗಿರುವ ಗೊಟಬಯ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ಕಾನೂನು ಪ್ರಕಾರವಾಗಿ ರಾಜೀನಾಮೆ ನೀಡಿದ್ದು, ಇದು ಗುರುವಾರದಿಂದಲೇ ಅನ್ವಯವಾಗಲಿದೆ ಎಂದು ಲಂಕಾ ಸ್ಪೀಕರ್ ಮಹೀಂದ ಯಾಪಾ ಅಬೆಯವರ್ದನಾ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಮಾಲ್ಡೀವ್ಸ್ ನಲ್ಲಿದ್ದ ಗೊಟಬಯ ರಾಜಪಕ್ಸ ವಿಶೇಷ ವಿಮಾನದ ಮೂಲಕ ಸಿಂಗಾಪುರಕ್ಕೆ ತೆರಳಿದ್ದು, ಅಲ್ಲಿಂದಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಲಂಕಾ ಸಂಸತ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ಕುರಿತು ಸರ್ವ ಪಕ್ಷಗಳ ಸಭೆ ನಡೆಯುತ್ತಿರುವುದಾಗಿ ವರದಿ ವಿವರಿಸಿದೆ.

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಗೊಟಬಯ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆ ತೀವ್ರ ಸ್ವರೂಪ ತಾಳುತ್ತಿದ್ದಂತೆಯೇ ಗೊಟಬಯ ಲಂಕಾದಿಂದ ಮಾಲ್ಡೀವ್ಸ್ ಗೆ ಪರಾರಿಯಾಗಿದ್ದರು.

1978ರಿಂದ ಶ್ರೀಲಂಕಾದ ಸರ್ಕಾರದಲ್ಲಿ ಅಧ್ಯಕ್ಷರ ಆಡಳಿತ ವ್ಯವಸ್ಥೆ ಜಾರಿಗೊಂಡ ನಂತರ ಗೊಟಬಯ ರಾಜಪಕ್ಸ ರಾಜೀನಾಮೆ ನೀಡಿದ ಮೊದಲ ಅಧ್ಯಕ್ಷರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.