ಪಾಕ್ ಬಿಟ್ಟು ತೊಲಗಿ, ಭಾರತದಲ್ಲೇ ನೆಲೆಸಿ: ಇಮ್ರಾನ್ ವಿರುದ್ಧ ನವಾಜ್ ಷರೀಫ್ ಪುತ್ರಿ ಕಿಡಿ
ಅಧಿಕಾರಕ್ಕಾಗಿ ಈ ಪರಿಯಲ್ಲಿ ಅಂಗಲಾಚುತ್ತಿರುವವರನ್ನು ನಾನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ
Team Udayavani, Apr 9, 2022, 11:12 AM IST
ಇಸ್ಲಾಮಾಬಾದ್: ಭಾರತದ ವಿರುದ್ಧ ತೆಗಳುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದಿಢೀರನೆ ಭಾರತವನ್ನು ಹೊಗಳಿದ್ದಕ್ಕೆ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರ್ಯಾಮ್ ನವಾಜ್ ಷರೀಫ್ ವಾಗ್ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮುಂಜಾಗ್ರತೆ ವಹಿಸಿ…ಐದು ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ; ಕೇಂದ್ರದ ಎಚ್ಚರಿಕೆ
“ ಒಂದು ವೇಳೆ ಭಾರತ ತುಂಬಾ ಇಷ್ಟವಾದರೆ ಇಮ್ರಾನ್ ಖಾನ್ ಪಾಕಿಸ್ತಾನ ತೊರೆದು ಭಾರತಕ್ಕೆ ಹೋಗಿ ನೆಲೆಸಲಿ” ಎಂದು ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ (ಪಿಎಂಎಲ್ ಎನ್) ಪಕ್ಷದ ಉಪಾಧ್ಯಕ್ಷೆ ಮರ್ಯಾಮ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ಹೇಳಿದೆ.
ತನ್ನ ಅಧಿಕಾರ ಕೈತಪ್ಪಿ ಹೋಗುತ್ತಿದೆ ಎಂದು ಹುಚ್ಚೆದ್ದು ಕುಣಿಯುತ್ತಿರುವ ಈ ವ್ಯಕ್ತಿಯನ್ನು ಅವರದ್ದೇ ಸ್ವಂತ ಪಕ್ಷ ಅವರನ್ನು ಉಚ್ಛಾಟಿಸಿರುವುದಾಗಿ ಯಾರಾದರು ತಿಳಿಸಲಿ. ಒಂದು ವೇಳೆ ಭಾರತ ತುಂಬಾ ಇಷ್ಟವಾದರೆ, ಪಾಕ್ ಬಿಟ್ಟು ಭಾರತಕ್ಕೆ ಸ್ಥಳಾಂತರಗೊಳ್ಳಲಿ ಎಂದು ಮರ್ಯಾಮ್ ತಿಳಿಸಿದ್ದಾರೆ.
ಅಧಿಕಾರಕ್ಕಾಗಿ ಈ ಪರಿಯಲ್ಲಿ ಅಂಗಲಾಚುತ್ತಿರುವವರನ್ನು ನಾನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಮರ್ಯಾಮ್ ಪಾಕ್ ಸಂಸತ್ ನಲ್ಲಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮುನ್ನ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್