ಬೈರೂತ್ ಮಹಾಸ್ಫೋಟಕ್ಕೆ ತಲೆದಂಡ! ಲೆಬನಾನ್ ಪ್ರಧಾನಿ ಹಸನ್ ದಿಯಾಬ್ ರಾಜೀನಾಮೆ
ಲೆಬನಾನ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 160ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು.
Team Udayavani, Aug 10, 2020, 11:17 PM IST
ಬೈರೂತ್: ಬೈರೂತ್ ಬಂದರು ಪ್ರದೇಶದಲ್ಲಿ ಸಂಭವಿಸಿದ ಭಾರೀ ಪ್ರಮಾನದ ಸ್ಫೋಟದ ಹಿನ್ನೆಲೆಯಲ್ಲಿ ದಶಕಗಳ ಕಾಲದ ಅದಕ್ಷ ಆಡಳಿತ ಎಂಬ ಆರೋಪದ ನಿಟ್ಟಿನಲ್ಲಿ ಲೆಬನಾನ್ ಪ್ರಧಾನಿ ಹಸನ್ ದಿಯಾಬ್ ಸೋಮವಾರ ಅಧಿಕಾರದ ಗದ್ದುಗೆಯಿಂದ ಕೆಳಗಿಳಿದಿರುವುದಾಗಿ ವರದಿ ತಿಳಿಸಿದ್ದಾರೆ.
ಇಂದು ನಾವು ಜನರೆಡೆಗೆ ಲಕ್ಷ್ಯ ಕೊಡುತ್ತಿದ್ದೇವೆ. ಈ ದುರಂತಕ್ಕೆ ಯಾರು ಹೊಣೆಗಾರರು ಎಂಬ ಬೇಡಿಕೆಗೆ ಹೊಣೆ ಹೊರಬೇಕಾಗಿದೆ ಎಂದು ಟೆಲಿವಿಷನ್ ಉದ್ದೇಶಿಸಿ ಮಾತನಾಡುತ್ತ ದಿಯಾ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳ ಭ್ರಷ್ಟ ರಾಜಕೀಯ ಆಡಳಿತದಿಂದಾಗಿ ಆಗಸ್ಟ್ 4ರಂದು ಸ್ಫೋಟ ಸಂಭವಿಸಲು ಕಾರಣವಾಗಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ. ಈ ನಿಟ್ಟಿನಲ್ಲಿ ನಾನು ನನ್ನ ಸರ್ಕಾರಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದರು.
ಲೆಬನಾನ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 160ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. 6000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 20 ಮಂದಿ ನಾಪತ್ತೆಯಾಗಿದ್ದರು ಎಂದು ವರದಿ ತಿಳಿಸಿತ್ತು.
ಸ್ಫೋಟ ಸಂಭವಿಸಿದ ಗ್ರೌಂಡ್ ಜೀರೋ ಪ್ರದೇಶದಲ್ಲಿ ಶ್ವಾನದಳ ತಂಡ ಮತ್ತು ಅತ್ಯಾಧುನಿಕ ತಂತ್ರಜ್ಞರ ತಂಡ ಶೋಧ ಕಾರ್ಯ ನಡೆಸುತ್ತಿದೆ. ಶವ ಹಾಗೂ ಇತರರಿಗಾಗಿ ಈ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ