ವಿಜಯಪುರ : ಕೋವಿಡ್ 2ನೇ ಅಲೆಗೆ ಮಹಿಳಾ ಪಿಎಸ್ಐ ಸಾವು
Team Udayavani, May 10, 2021, 9:16 PM IST
ವಿಜಯಪುರ : ಕೊರೊನಾ 2ನೇ ಅಲೆಗೆ ಕರ್ತವ್ಯನಿರತ ಮಹಿಳಾ ಪಿಎಸ್ಐಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ವೇಳೆ ಬಂದೋಬಸ್ತಗೆ ನಿಯೋಜನೆಗೊಂಡಿದ್ದ ಇಲ್ಲಿನ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್ಐ ಸುಲೋಚನಾ ಭಜಂತ್ರಿ, ಅಲ್ಲಿಂದ ಮರಳಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಪಚಾರ ಪಡೆದು, ಕರ್ತವ್ಯಕ್ಕೆ ಹಾಜರಾಗಿದ್ದ ಅವರಿಗೆ ಸೋಮವಾರ ಬೆಳಗ್ಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡು ಬಂದಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಬಂಧು, ಬಳಗವನ್ನು ಅಗಲಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆ ಮಹಿಳಾ ಪಿಎಸ್ ಐ ಸುಲೋಚನಾ ಭಜಂತ್ರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೋವಿಡ್- 19 ಸೋಂಕಿಗೆ ಸಾವಿಗೀಡಾಗಿರುವುದು ನೋವಿನ ಸಂಗತಿ. ಮೃತರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ ಅಗರವಾಲ್ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ :3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಸರಕಾರ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ