ಕಲ್ಲುಕ್ವಾರಿಗಳ ಅಕ್ರಮಕ್ಕೆ ಸಕ್ರಮ ಹಾದಿ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

114 ನಗರ ಕ್ಲಿನಿಕ್‌ ಮೇಲ್ದರ್ಜೆಗೆ

Team Udayavani, Jan 21, 2023, 7:10 AM IST

ಕಲ್ಲುಕ್ವಾರಿಗಳ ಅಕ್ರಮಕ್ಕೆ ಸಕ್ರಮ ಹಾದಿ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಗುತ್ತಿಗೆ ಪಡೆದ ಪ್ರದೇಶ ಬಿಟ್ಟು, ಪಕ್ಕದಲ್ಲಿ ನಡೆಸುತ್ತಿರುವ ಕಲ್ಲು ಕ್ವಾರಿಯನ್ನು ಸಕ್ರಮ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಶುಕ್ರವಾರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ಯಂತ್ರ ಬಳಸದೆ ಕಲ್ಲು ಕ್ವಾರಿ ಮಾಡುವವರು ತಮಗೆ ಗುತ್ತಿಗೆ ಮಂಜೂರಾದ ಪ್ರದೇಶವನ್ನು ಬಿಟ್ಟು ಆಕಸ್ಮಿಕವಾಗಿ ಗೊತ್ತಿಲ್ಲದೆ ಪಕ್ಕದಲ್ಲಿ ಕ್ವಾರಿ ನಡೆಸಿದರೆ ಅಂಥ ಪ್ರದೇಶವನ್ನು ಮರು ಹೊಂದಾಣಿಕೆ ಮಾಡಲಾಗುವುದು ಎಂದರು.

ಗಣಿ ಅಧಿಕಾರಿಗಳಿಗೆ ಸೂಕ್ತ ಅನಿಸಿದರೆ ಮಂಜೂರಾದ ಮೂಲ ಗುತ್ತಿಗೆ ಪ್ರದೇಶವನ್ನು ಮರು ಹೊಂದಾಣಿಕೆ ಮಾಡಿಕೊಳ್ಳಬಹುದು. ಹೀಗಾಗಿ ಮಂಜೂರಾದ ಮೂಲ ಗುತ್ತಿಗೆ ಪ್ರದೇಶ ಬಿಟ್ಟು ಕಲ್ಲುಕ್ವಾರಿ ನಡೆಸುವ ಪ್ರದೇಶವನ್ನು ಸಕ್ರಮಗೊಳಿಸಲಾಗುತ್ತದೆ. ಕಲ್ಲು ಗಣಿಗಾರಿಕೆ ಮಾಡದೇ ಉಳಿದ ಮೂಲ ಗುತ್ತಿಗೆ ಪ್ರದೇಶವನ್ನು ವಾಪಸ್‌ ಪಡೆಯಲಾಗುವುದು ಎಂದರು.

ಕಲ್ಲುಕ್ವಾರಿ ಗುತ್ತಿಗೆ ಸ್ಥಳದ ವ್ಯತ್ಯಾಸದ ಬಗ್ಗೆ ಕೆಲ ವರ್ಷಗಳಿಂದ ವಿವಾದ ಸೃಷ್ಟಿಯಾಗಿತ್ತು. ಗ್ರಾಮೀಣ ಭಾಗದ ಶಾಸಕರು ಈ ಬಗ್ಗೆ ಪಕ್ಷಾತೀತವಾಗಿ ಬೇಡಿಕೆ ಸಲ್ಲಿಸಿದ್ದರು. ಕೆಲ ಗುತ್ತಿಗೆದಾರರು ಹೈಕೋರ್ಟ್‌ಗೂ ಮನವಿ ಸಲ್ಲಿಸಿದ್ದರು. ಪಟ್ಟಾ ಜಾಗ ಹಾಗೂ ಗುತ್ತಿಗೆ ಜಾಗದಲ್ಲಿ ನಿಗದಿತ ಸ್ಥಳ ಬಿಟ್ಟು ಬೇರೆಡೆ ಗಣಿಗಾರಿಕೆ ನಡೆಸುತ್ತಾರೆ ಎಂಬ ಆರೋಪದ ಜತೆಗೆ ಯಾಂತ್ರೀಕೃತ ಗಣಿಗಾರಿಕೆಯೂ ನಡೆಯುತ್ತಿತ್ತು.

54.6 ಕೋಟಿ ಷೇರು ಬಂಡವಾಳ ಎತ್ತುವಳಿ
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 54.6 ಕೋಟಿ ಷೇರು ಬಂಡವಾಳ ಎತ್ತುವಳಿಗೆ ಅವಕಾಶ ಕಲ್ಪಿಸಲಾಗಿದೆ. ನಿಗಮದ ಎನ್‌ಪಿಎ ಯಾದ ತೀರುವಳಿಗಳಿಗೆ ಒಂದಾವರ್ತಿ (ಒನ್‌ ಟೈಂ ಸೆಟ್ಲಮೆಂಟ್‌) ಇತ್ಯರ್ಥಕ್ಕೆ 2003-2023ವರೆಗೆ ಅನ್ವಯವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಈಗ ನಿಗಮದಲ್ಲಿ ಅಸಲು 127 ಕೋಟಿ ರೂ. ಬಾಕಿ ಇದ್ದರೆ, 217.65 ಕೋಟಿ ಬಡ್ಡಿ ಮೊತ್ತ ಬಾಕಿ ಇದೆ. ಒಟ್ಟು 345 ಕೋಟಿ ರೂ. ಬಾಕಿ ಇದೆ. ರಾಜ್ಯ ಸರಕಾರ ಪ್ರಸ್ತುತ ಬಳಸುತ್ತಿರುವ ಎಚ್‌ಆರ್‌ಎಂಎಸ್‌ ತಂತ್ರಾಂಶ ಪರಿಷ್ಕರಣೆಗೆ ನಿರ್ಧರಿಸಿದ್ದು, 40 ಕೋಟಿ ರೂ. ಅನುದಾನಕ್ಕೆ ಸಂಪುಟ ಸಮ್ಮತಿಸಿದೆ.

ರಾಜ್ಯಾದ್ಯಂತ 100 ಅಂಬೇಡ್ಕರ್‌ ಹಾಸ್ಟೆಲ್‌ ನಿರ್ಮಾಣಕ್ಕೆ 600 ಕೋಟಿ ರೂ. ನೀಡಲಿದೆ.

114 ನಗರ
ಕ್ಲಿನಿಕ್‌ ಮೇಲ್ದರ್ಜೆಗೆ
ಪಿಎಂ ಅಭೀಮ್‌ ಯೋಜನೆಯಡಿ 114 ನಗರ ಕ್ಲಿನಿಕ್‌ಗೆ ಅವಕಾಶ ಕೊಟ್ಟಿದ್ದು, ಅವು ನಮ್ಮ ಕ್ಲಿನಿಕ್‌ ಆಗಿ ರೂಪಾಂತರವಾಗಲಿವೆ. ಆರೋಗ್ಯ ಉಪಕೇಂದ್ರ (ಎಎನ್‌ಎಂ ಸೆಂಟರ್‌)ಕ್ಕೆ ಹೆಚ್ಚು ಶಕ್ತಿ ನೀಡಲು ಸಿಬಂದಿ ನಿಯೋಜನೆಗೆ ಸಮ್ಮತಿಸಲಾಗಿದೆ. ಒಟ್ಟು 847 ಕೇಂದ್ರಗಳ ಮೇಲ್ದರ್ಜೆಗೇರಿಸಲು ಒಪ್ಪಿಗೆ ಕೊಡಲಾ ಗಿದ್ದು, 71.56 ಕೋಟಿ ರೂ. ಮೊತ್ತಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದರು ಸಚಿವರು.

ಫೆ.10ರಿಂದ
ಜಂಟಿ ಅಧಿವೇಶನ
ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆ.10ರಿಂದ ನಡೆಯಲಿದೆ. ಫೆ. 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡಿಸುವರು. ಫೆ.10ರಂದು ಅಧಿವೇಶನ ಪ್ರಾರಂಭಗೊಳ್ಳಲಿದ್ದು, ಉಭಯ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವರು. ಫೆ.10ರಿಂದ 17ರ ವರೆಗೆ ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆಯಲಿದೆ. ಆದರೆ ಬಜೆಟ್‌ ಅಧಿವೇಶನ ಎಷ್ಟು ದಿನ ನಡೆಸಬೇಕೆಂಬ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.