ಲಿಂಬೆಹಣ್ಣು ಹಗರಣ! ಪಂಜಾಬ್ ಜೈಲು ಅಧಿಕಾರಿ ಅಮಾನತು, ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಜೈಲಿನ ಸೂಪರಿಂಟೆಂಡೆಂಟ್ ಗುರ್ನಮ್ ಲಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ
Team Udayavani, May 7, 2022, 3:34 PM IST
ಚಂಡೀಗಢ್: ಕೈದಿಗಳ ಆಹಾರಕ್ಕಾಗಿ ಮಂಜೂರಾದ ಹಣದ ದುರುಪಯೋಗ ಹಾಗೂ ನಿಂಬೆ ಹಣ್ಣು ಖರೀದಿಸಿರುವುದಾಗಿ ದಾಖಲೆಯಲ್ಲಿ ನಕಲಿ ನಮೂದು ಸೇರಿಸಿದ ಆರೋಪದಲ್ಲಿ ಪಂಜಾಬ್ ನ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಲಿಂಬೆಹಣ್ಣು ಹಗರಣ ಬಯಲಾಗಿದ್ದು ಹೇಗೆ?
ಸುಮಾರು 50 ಕೆಜಿ ಲಿಂಬೆಹಣ್ಣುಗಳನ್ನು ಖರೀದಿಸಲಾಗಿದೆ ಎಂದು ಜೈಲಿನ ದಾಖಲೆಯಲ್ಲಿ ನಮೂದಿಸಲಾಗಿತ್ತು. ಆದರೆ ಕೈದಿಗಳು ನಮಗೆ ಏನನ್ನೂ ನೀಡಿಲ್ಲ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ಕಫುರ್ತಲಾ ಮಾಡರ್ನ್ ಜೈಲಿನ ಸೂಪರಿಂಟೆಂಡೆಂಟ್ ಗುರ್ನಮ್ ಲಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ವೀರಪ್ಪನ್ ಕಾರ್ಯಾಚರಣೆ ಕಥೆ ಹೇಳುವ ಶ್ರೀನಿವಾಸ್ ಜೀಪ್
ಕಳೆದ ತಿಂಗಳು ಲಿಂಬೆಹಣ್ಣು ಕೆಜಿ ಬೆಲೆ 200 ರೂಪಾಯಿಗೆ ಏರಿಕೆಯಾದ ಸಂದರ್ಭದಲ್ಲಿ ಲಿಂಬೆ ಹಣ್ಣು ಖರೀದಿಸಿರುವುದಾಗಿ ನಕಲಿ ನಮೂದುಗಳನ್ನು ದಾಖಲೆಯಲ್ಲಿ ಸೇರಿಸಲಾಗಿತ್ತು. ತಪಾಸಣಾ ತಂಡ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಪಡಿತರದಲ್ಲಿ ಲಿಂಬೆಹಣ್ಣುಗಳನ್ನು ಕೊಟ್ಟಿಲ್ಲ ಎಂದು ಕೈದಿಗಳು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
ಪಂಜಾಬ್ ನ ಜೈಲು, ಗಣಿಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವ ಹರ್ಜೋತ್ ಸಿಂಗ್ ಬೈನ್ಸ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದರು. ತನಿಖೆಯಲ್ಲಿ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದು, ಜೈಲು ಅಧಿಕಾರಿ ಗುರ್ನಾಮ್ ಲಾಲ್ ನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ