ಪುತ್ತೂರಿನ ಪುರುಷರಕಟ್ಟೆಯಲ್ಲಿ ಚಿರತೆ ಪ್ರತ್ಯಕ್ಷ : ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ
Team Udayavani, Jan 6, 2021, 2:17 PM IST
ನರಿಮೊಗರು: ತಾಲೂಕಿನ ಪುರುಷರ ಕಟ್ಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಲಾಗಿದೆ.ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಅವರ ಜಾಗದಲ್ಲಿ ಚಿರತೆ ಹಾದುಹೋಗಿದೆ.
ಸ್ಥಳದಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.
ಸರ್ವೆ ,ಮುಂಡೂರು,ಬನ್ನೂರು,ಪಡೀಲ್,ಕೋಡಿಂಬಾಡಿ ಹಾಗೂ ಕಡಬ ತಾಲೂಕಿನ ಪಾಲ್ತಾಡಿ,ಚೆನ್ನಾವರ,ಬಂಬಿಲ ಸೇರಿದಂತೆ ಕೆಲವು ಕಡೆಗಳಲ್ಲಿ ಚಿರತೆ ಪ್ರತ್ಯಕ್ಷಗೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ನಿನ್ನೆ ನರಿಮೊಗರು ಗ್ರಾ.ಪಂ ವ್ಯಾಪ್ತಿಯ ಮುಕ್ವೆ ಮೊಗೇರಡ್ಕ ಎಂಬಲ್ಲಿ ಬೋನು ಅಳವಡಿಸಿದ್ದಾರೆ. ಈ ಮೂಲಕ ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಸಮಾಜದಲ್ಲಿ ನಿಯತ್ತಾಗಿ ಬದುಕಿ; ಗಾಂಜಾ ಅಪರಾಧಿಗಳಿಗೆ ನೂತನ ಕಮಿಷನರ್ ವಾರ್ನಿಂಗ್
ಮೊಗೇರಡ್ಕ ಎಂಬಲ್ಲಿ ಪೊದೆಗಳು ಹೆಚ್ಚು ಇರುವ ನಿರ್ಜನ ಪ್ರದೇಶದಲ್ಲಿ ಈ ಬೋನು ಅಳವಡಿಸಲಾಗಿದೆ. ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದ್ದು ಜನತೆ ಕೂಡಾ ಭಯಭೀತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ