Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು
Team Udayavani, May 7, 2024, 1:18 AM IST
ಕೋಟ: ಡೈರಿ ಫಾರ್ಮ್ ನಲ್ಲಿ ಹುಲ್ಲು ಕಟಾವು ನಡೆಸುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿ ಸೋಮವಾರ ಸಂಭವಿಸಿದೆ.
ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ್ ದಾಳಿಗೊಳಗಾದವರು. ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್ ಕುಮಾರ್ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದರು. ಆಗ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ವ್ಯಾಪಕವಾಗಿದೆ. ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆದಿದ್ದು, ಇದೀಗ ಮನುಷ್ಯರ ಮೇಲೆಯೂ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕು. ಗಾಯಾಳುವಿಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura ಎಸ್ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್
ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ
Udupi ಗ್ಯಾಂಗ್ವಾರ್ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
Byndoor 50 ಕಡೆ ಬಸ್, ಲಾರಿ ಚಾಸಿಸ್ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ
“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್ ಸ್ಪಂದನೆ’; ಸಲೀಂ ಅಹಮದ್