ಬಂಟ್ವಾಳ: ಉರುಳಿಗೆ ಸಿಲುಕಿದ್ದ ಚಿರತೆ ರಕ್ಷಣೆ
Team Udayavani, Nov 20, 2021, 9:59 AM IST
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಿದ್ದಾರೆ.
ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ನಡೆದಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು, ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್ ತಿಳಿಸಿದ್ದಾರೆ.
ಸುತ್ತ ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿತ್ತು. ಸುಮಾರು ರಾತ್ರಿ 8 ಗಂಟೆ ವೇಳೆ ಚಿರತೆ ಇರುವ ಮಾಹಿತಿ ದೊರಕಿತು. ಸ್ಥಳೀಯರ ಮಾಹಿತಿ ಆಧಾರದಲ್ಲಿ ದೊರೆತ ವಿಚಾರದಂತೆ ಕೂಡಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ ಕೊಂಡೊಯ್ಯಲು ಸಫಲವಾಯಿತು.
ಸುಮಾರು 60 ಕೆ.ಜಿ. ತೂಕದಷ್ಟಿರುವ ಈ ಚಿರತೆಗೆ ಸೂಕ್ತ ಚಿಕಿತ್ಸೆ ನೀಡಿ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ವಲಯಾರಣ್ಯಾಧಿಕಾರಿ ತಿಳಿಸಿದ್ದಾರೆ. ಮಂಗಳೂರಿನಿಂದ ಡಾ. ಯಶಸ್ವಿ ಮತ್ತು ವೈದ್ಯರ ತಂಡ ಮತ್ತು ಬರುವ ಇಂಜೆಕ್ಷನ್ ಕೊಟ್ಟ ಬಳಿಕ ಸುಮಾರು 15 ನಿಮಿಷದ ಬಳಿಕ ಅಮಲಿನಲ್ಲಿ ಚಿರತೆ ಮಲಗಿತು. ಬೋನಿನಲ್ಲಿ ಹಾಕಿ ಪಿಕಪ್ ನಲ್ಲಿ ತಂದು ವಲಯ ಕಚೇರಿಗೆ ತರಲಾಯಿತು ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ:ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯಾರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ್, ಅರಣ್ಯರಕ್ಷಕ ಜಿತೇಶ್, ಶೋಭಿತ್, ದಯಾನಂದ್, ಅರಣ್ಯವೀಕ್ಷಕ ಪ್ರವೀಣ್, ಎನ್.ಇ.ಸಿ.ಎಫ್. ತಂಡದಿಂದ ಸ್ನೇಕ್ ಕಿರಣ್, ನಿತ್ಯಪ್ರಕಾಶ್ ಬಂಟ್ವಾಳ್, ಮಂಗಳೂರಿನ ಡಾ. ಯಶಸ್ವಿ ಮತ್ತು ತಂಡದವರು, ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಜೊತೆ ಸ್ಥಳೀಯರಾದ ಮನೋರಾಜ್ ರೈ ಕಟ್ಟೆ, ಪ್ರವೀಣ್ ಶೆಟ್ಟಿ ಉದ್ದೊಟ್ಟು ಮತ್ತಿತರರು ಉಪಸ್ಥಿತರಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ
MUST WATCH
ಹೊಸ ಸೇರ್ಪಡೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ