ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ
Team Udayavani, Feb 10, 2022, 12:17 PM IST
ನವದೆಹಲಿ : ಪ್ರಸ್ತುತ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ನ ಅನುಮತಿಯನ್ನು ಪರಿಶೀಲಿಸುತ್ತಿರುವ ಕರ್ನಾಟಕ ಹೈಕೋರ್ಟ್ನಿಂದ ಅರ್ಜಿಗಳನ್ನು ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ನಿರ್ದಿಷ್ಟ ದಿನಾಂಕವನ್ನು ನೀಡುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠದ ಮುಂದೆ ಹಿರಿಯ ವಕೀಲ ಕಪಿಲ್ ಸಿಬಲ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಕರ್ನಾಟಕದ ವಿವಾದ ಇಡೀ ದೇಶದಲ್ಲಿ ಹರಡುತ್ತಿದೆ ಎಂದು ಎಂದು ಸಿಬಲ್ ಮನವಿ ಸಲ್ಲಿಸಿದರು.
ಕರ್ನಾಟಕ ಹೈಕೋರ್ಟ್ ಈಗಾಗಲೇ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದು, ಅದನ್ನು ನಿರ್ಧರಿಸಲು ಅವಕಾಶ ನೀಡಬೇಕು. “ಈ ಹಂತದಲ್ಲಿ ನಾವೇಕೆ ಪ್ರವೇಶಮಾಡಬೇಕು? ಅದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇಂದು ವಿಚಾರಣೆ
ಹೈಕೋರ್ಟಿನ ಪೂರ್ಣ ಪೀಠಕ್ಕೆ ವರ್ಗಾವಣೆ ಯಾಗಿರುವ ಹಿಜಾಬ್ – ಕೇಸರಿ ಶಾಲು ವಿವಾದ ಗುರುವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಯಾಗಿದೆ. ಮುಖ್ಯ ನ್ಯಾ| ರಿತುರಾಜ್ ಅವಸ್ಥಿ, ನ್ಯಾ| ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ| ಜೈಬುನ್ನಿಸಾ ಎಂ. ಖಾಜಿ ಅವರ ಪೀಠ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?