ಮಳೆ ಎದುರಿಸಲು ಸಮರ್ಥವಾಗಿ ಸಿದ್ಧವಾಗಲಿ ಆಡಳಿತ


Team Udayavani, May 22, 2023, 6:09 AM IST

rain 2

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಮರುದಿನವೇ ಶಕ್ತಿಸೌಧದ ಹೊಸ್ತಿಲಲ್ಲೇ ಮಳೆಯ ಅಬ್ಬರಕ್ಕೆ ಮೊದಲ ಸಾವು ಸಂಭವಿಸಿದೆ. ಹೈದರಾಬಾದ್‌ ಮೂಲದ ಆರು ಜನರ ಕುಟುಂಬ ಬೆಂಗಳೂರಿಗೆ ಬಂದ ವೇಳೆ ಮಳೆನೀರು ತುಂಬಿಕೊಂಡಿದ್ದ ಕೆ.ಆರ್‌. ವೃತ್ತದಲ್ಲಿನ ಅಂಡರ್‌ಪಾಸ್‌ ಮೂಲಕ ಹಾದುಹೋಗುವಾಗ ಆ ಕುಟುಂಬದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸರಕಾರ “ಹನಿಮೂನ್‌ ಮೂಡ್‌’ಗೆ ಜಾರುವ ಮುನ್ನವೇ ಈ ಘಟನೆ ನಡೆದಿದೆ. ಇದರೊಂದಿಗೆ ಸವಾಲಿನ ದಿನಗಳ ಸೂಚನೆ ಸಿಕ್ಕಿದೆ.

ಮುಂಗಾರು ಇನ್ನೂ ಆರಂಭಗೊಂಡಿಲ್ಲ. ಮಳೆಗಾಲದ ಅವಾಂತರಗಳನ್ನು ಎದುರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಷ್ಟರಮಟ್ಟಿಗೆ ಸಜ್ಜುಗೊಂಡಿದೆ ಎಂಬುದನ್ನು ಈ ಘಟನೆ ಬಯಲುಗೊಳಿಸಿದೆ. ಅಷ್ಟೇ ಅಲ್ಲ, ಸರಕಾರವು ಅಧಿಕಾರಿಗಳಿಗೆ ಚಾಟಿ ಬೀಸದಿದ್ದರೆ ಮುಂದಿನ ದಿನಗಳು ಇನ್ನೂ ಭಯಾನಕ ಆಗಿರಲಿವೆ ಎಂಬ ಎಚ್ಚರಿಕೆಯನ್ನೂ ವರುಣ ನೀಡಿದಂತಿದೆ.

ಹಾಗೆ ನೋಡಿದರೆ ಸರಕಾರದ ಯೋಜನೆ ಪ್ರಕಾರ ಅಂಡರ್‌ಪಾಸ್‌ಗಳು ಮತ್ತು ಎತ್ತರಿಸಿದ ಮಾರ್ಗಗಳ ನಿರ್ಮಾಣದ ಉದ್ದೇಶ ಸುಗಮ ಸಂಚಾರ ಕಲ್ಪಿಸುವುದಾಗಿದೆ. ಆದರೆ ಆ ಅಂಡರ್‌ಪಾಸ್‌ಗಳೇ ಸಾವಿಗೆ ರಹದಾರಿಗಳಾಗುತ್ತಿರುವುದು ವಿಪರ್ಯಾಸ. ಘಟನೆ ನಡೆದ ಸ್ಥಳ ನಗರದ ಹೃದಯಭಾಗ. ವಿಧಾನಸೌಧ, ಬಹುಮಹಡಿ ಕಟ್ಟಡ, ಹೈಕೋರ್ಟ್‌ ಪಕ್ಕದಲ್ಲೇ ಎನ್ನುವುದು ಗಮನಿಸಬೇಕಾದ ಅಂಶ. ಇನ್ನೂ ವಿಚಿತ್ರವೆಂದರೆ ಕೇವಲ 30 ಮಿ.ಮೀ. ಮಳೆಯಾಗಿದೆ. ಅಷ್ಟಕ್ಕೇ ಇಷ್ಟು ದೊಡ್ಡ ಅವಾಂತರವಾಗಿದೆ. ನೂರಾರು ಮಿಲಿಮೀಟರ್‌ ಸುರಿದರೆ ಗತಿ ಏನು ಎಂಬ ಪ್ರಶ್ನೆಯನ್ನೂ ಈ ಘಟನೆ ಎತ್ತಿದೆ.

ಕೆ.ಆರ್‌. ವೃತ್ತದಲ್ಲಿನ ಪ್ರಕರಣ ಮಾತ್ರವಲ್ಲ; ನಗರದ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳು, ಅಂಡರ್‌ಪಾಸ್‌ಗಳಲ್ಲಿ ಕೂಡ ಸ್ಥಿತಿ ಭಿನ್ನವಾಗಿರಲಿಲ್ಲ. ಅವೆಲ್ಲವೂ ಬಹುತೇಕ ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ವಿಜಯನಗರದ ಶೋಭಾ ಆಸ್ಪತ್ರೆ ಬಳಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ ಎದುರೇ ಮರವೊಂದು ನೆಲಕಚ್ಚಿದೆ. ಕೂದಲೆಳೆಯಲ್ಲಿ ಅನಾಹುತ ತಪ್ಪಿದೆ. ಹಲವು ಕಾರುಗಳ ಮೇಲೆಯೇ ಮರಗಳು ಬಿದ್ದಿವೆ. ಬೀಳಬಹುದಾದ ಮರಗಳನ್ನು ಗುರುತಿಸಿ ಕಡಿತ ಅಥವಾ ತೆರವು ಕಾರ್ಯ ಮಾಡಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂಬ ಪ್ರಶ್ನೆಯನ್ನೂ ಎತ್ತುತ್ತದೆ. ಸಿಬಂದಿ ಚುನಾವಣೆ ಕರ್ತವ್ಯದಲ್ಲಿ “ಬ್ಯುಸಿ’ ಆಗಿದ್ದರು ಎಂಬ ಸಿದ್ಧ ಸಬೂಬನ್ನು ಸ್ಥಳೀಯ ಸಂಸ್ಥೆಗಳು ನೀಡಬಹುದು. ಆದರೆ ಹೀಗೆ ನಗರದಲ್ಲಿ ಮಳೆಗೆ ಜನರು ಸಾವನ್ನಪ್ಪು ತ್ತಿರುವುದು ಇದೇ ಮೊದಲಲ್ಲ; ಇದು ಪ್ರತೀ ವರ್ಷದ ಗೋಳು ಆಗಿದೆ. ಒಮ್ಮೊಮ್ಮೆ ಮಳೆಗೆ ರಸ್ತೆ ಗುಂಡಿಬಿದ್ದು, ಮತ್ತೂಮ್ಮೆ ವಾಹನದಲ್ಲಿ ಹೊರಟಾಗ ಮರಬಿದ್ದು, ಇನ್ನೊಮ್ಮೆ ರಾಜಕಾಲುವೆಯಲ್ಲಿ ಕೊಚ್ಚಿಹೋಗುವುದು ಸಾಮಾನ್ಯವಾಗಿದೆ.

ಪ್ರತೀ ಘಟನೆಯಲ್ಲೂ ರಾಜಕಾಲುವೆ ಒತ್ತುವರಿ ತೆರವು ಸದ್ದಾಗುತ್ತದೆ. ಅನಂತರ ಮಿಂಚಿನಂತೆ ಮಾಯವಾಗುತ್ತದೆ. ಈ ಹಿಂದೆ ರಾಜಕಾಲುವೆ ಎರಡೂ ಕಡೆಗಳಲ್ಲಿನ ತಡೆಗೋಡೆಗಳನ್ನು ಎತ್ತರಿಸಲು ಸಾವಿರಾರು ಕೋಟಿ ಸುರಿಯಲಾಗಿದೆ. ಪರಿ ಣಾಮ ಮಾತ್ರ ಗೊತ್ತಿಲ್ಲ. ಹೊಸ ಸರಕಾರ ಚಾಟಿ ಬೀಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕಿದೆ. ಆಗಾಗ್ಗೆ ಉಂಟಾಗುವ ಇಂಥ ಭಾರೀ ಮಳೆ, ಪ್ರವಾ ಹಕ್ಕೆ ಸರ್ವ ರೀತಿಯಲ್ಲೂ ಆಡಳಿತ ಸಿದ್ಧವಾಗಬೇಕಾಗಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.