ಇನ್ನಾದರೂ ರೈತರ ಕೈಗೆ ಕ್ಷೀರಭಾಗ್ಯ ಹಣ ಸೇರಲಿ


Team Udayavani, Jun 9, 2023, 6:05 AM IST

DAIRY FARMING

ಕಳೆದ ಏಳು ತಿಂಗಳುಗಳಿಂದ ರೈತರಿಗೆ ಕ್ಷೀರಭಾಗ್ಯ ಹಣ ಸೇರಿಲ್ಲ ಎಂಬುದು ನೋವಿನ ಸಂಗತಿ. ರಾಜ್ಯದ ಸುಮಾರು 9 ಲಕ್ಷ ಮಂದಿ ರೈತರಿಗೆ ಈ ಹಣ ಸೇರಬೇಕಾಗಿದ್ದು ಸರಕಾರದ ಬಳಿ ಬಾಕಿ ರೂಪದಲ್ಲಿಯೇ 871 ಕೋಟಿ ರೂ.ಗಳಿವೆ. ಸದ್ಯ ರಾಜ್ಯದಲ್ಲಿ ಇನ್ನೂ ಮುಂಗಾರುಆರಂಭವಾಗಿಲ್ಲ. ಗುರುವಾರವಷ್ಟೇ ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದು, ಕರ್ನಾಟಕಕ್ಕೆ ಇನ್ನು ಎರಡರಿಂದ ಮೂರು ದಿನಗಳಲ್ಲಿ ಆಗಮನವಾಗಬಹುದು. ಇದರ ಮಧ್ಯೆ ರೋಹಿಣಿ ಮಳೆಯಾಗದೇಬಹುತೇಕ ಕಡೆಗಳಲ್ಲಿ ಬಿತ್ತನೆಯಾಗಿದ್ದ ಬೆಳೆ ಒಣಗುವ ಹಂತಕ್ಕೆ ಬಂದಿದೆ. ಸಾಮಾನ್ಯವಾಗಿ ರೈತರು, ಕೃಷಿ ಜತೆಗೆ ಪೂರಕವಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಮುಂಗಾರು ವೇಳೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಖರೀದಿ ಸೇರಿದಂತೆ ಹಲವಾರು ಖರ್ಚು ವೆಚ್ಚಗಳಿಗೆ ಹೈನುಗಾರಿಕೆಯಿಂದ ಬರುವ ಹಣವೇ ಆದಾಯವಾಗಿರುತ್ತದೆ. ಆದರೆ ಏಳು ತಿಂಗಳ ಹಣವನ್ನು ಬಾಕಿ ಉಳಿಸಿಕೊಂಡಿರುವುದು ನ್ಯಾಯವಲ್ಲ ಎಂಬುದು ವೇದ್ಯವಾಗುತ್ತದೆ.

ರಾಜ್ಯದಲ್ಲಿ ಒಟ್ಟು 14 ಹಾಲು ಒಕ್ಕೂಟಗಳಿದ್ದು, ಇದರಲ್ಲಿ 15 ಸಾವಿರ ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಈ ಸಂಘಗಳಲ್ಲಿ 24 ಲಕ್ಷ ಮಂದಿ ನೋಂದಾಯಿತ ಹಾಲು ಉತ್ಪಾದಕರಿದ್ದಾರೆ. ಇವರಲ್ಲಿ ನಿತ್ಯ 9 ಲಕ್ಷ ಮಂದಿ ರೈತರು ಹಾಲು ಸರಬರಾಜು ಮಾಡುತ್ತಿದ್ದಾರೆ. ರಾಜ್ಯ ಸರಕಾರವು ಹೈನುಗಾರಿಕೆ ನಡೆಸುವ ರೈತರಿಗೆ ಅನುಕೂಲವಾಗಲಿ ಎಂಬ ಕಾರಣದಿಂದಾಗಿ ಕ್ಷೀರಧಾರೆ ಹೆಸರಿನಲ್ಲಿ ಪ್ರತಿಯೊಬ್ಬ ರೈತರಿಗೆಲೀಟರ್‌ಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿದೆ.ಆದರೆ ಕಳೆದ ನವೆಂಬರ್‌ನಿಂದ ರಾಜ್ಯ ಸರಕಾರ ಹೈನುಗಾರಿಕೆ ನಡೆಸುತ್ತಿರುವ ರೈತರಿಗೆ ಇನ್ನೂ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ.

ಈಗಾಗಲೇ ಹೇಳಿರುವಂತೆ ಇದರ ಬಾಕಿಯೇ 871 ಕೋಟಿ ರೂ.ಗಳಿವೆ. 2022ರ ನವೆಂಬರ್‌ನಲ್ಲಿ ಅಕ್ಟೋಬರ್‌ಗಿಂತ ಹಿಂದಿನ ಮೂರು ತಿಂಗಳ ಪ್ರೋತ್ಸಾಹ ಧನ ಬಿಡುಗಡೆ ಮಾಡಿತ್ತು. ಇನ್ನು ರಾಜ್ಯದ ಎಲ್ಲ ಒಕ್ಕೂಟಗಳಲ್ಲಿಯೂ ಹಾಲಿಗೆ ಪ್ರತ್ಯೇಕ ದರವಿದೆ. ರೈತರ ಹಾಲು ಉತ್ಪಾದನೆಯೂ ಪ್ರಸ್ತುತದಲ್ಲಿ ಕಷ್ಟಕರವಾಗಿದೆ. ಸ್ವಂತ ಮೇವಿನ ವ್ಯವಸ್ಥೆ ಇದ್ದಲ್ಲಿ ಪ್ರತೀ ಲೀ.ಗೆ 22ರಿಂದ 24 ರೂ. ವೆಚ್ಚವಾಗುತ್ತದೆ. ಮೇವು ಖರೀದಿಸಿದರೆ ಇದು 30 ರೂ. ದಾಟುತ್ತದೆ. ಆದರೆ ಒಕ್ಕೂಟಗಳು ಕೊಡುವ ಹಣ ಪ್ರತೀ ಲೀ.ಗೆ 30ರಿಂದ 32.75 ರೂ. ಇದರಿಂದಾಗಿಯೇ ರಾಜ್ಯ ಸರಕಾರ ರೈತರಿಗೆ ಅನುಕೂಲವಾಗಲಿ ಎಂಬ ಕಾರಣದಿಂದಾಗಿ ಕ್ಷೀರಧಾರೆ ಹೆಸರಿನಲ್ಲಿ ಪ್ರೋತ್ಸಾಹ ಧನ ನೀಡುತ್ತಿದೆ.

ಅಂದ ಹಾಗೆ ಈ ಯೋಜನೆ ತೀರಾ ಹೊಸದೇನಲ್ಲ. 2008ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುರು ಮಾಡಿದ್ದ ಯೋಜನೆ ಇದು. ಆಗ ಲೀ.ಗೆ 2 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಮುಂದೆ 2013ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ 4 ರೂ.ಗೆ ಏರಿಕೆ ಮಾಡಿದರು. 2016ರಲ್ಲಿ ಮತ್ತೆ 1 ರೂ. ಹೆಚ್ಚಳ ಮಾಡಿ 5ರೂ.ಗಳಿಗೆ ಏರಿಕೆ ಮಾಡಲಾಯಿತು. ಮೊದಲು ಮೂರರಿಂದ ನಾಲ್ಕುತಿಂಗಳಿಗೆ ಒಮ್ಮೆ ಹಣ ಬಿಡುಗಡೆಯಾಗುತ್ತಿತ್ತು. ಈಗ ಏಳುತಿಂಗಳುಗಳಾದರೂ ಬಂದಿಲ್ಲ.ಸದ್ಯ ಸಿದ್ದರಾಮಯ್ಯ  ನೇತೃತ್ವದಲ್ಲಿ ಹೊಸ ಸರಕಾರ ಬಂದಿದ್ದು, ಈಗಲಾದರೂ ಪ್ರೋತ್ಸಾಹ ಧನದ ಬಗ್ಗೆ ಕಣ್ಣು ಹಾಯಿಸಬೇಕಾಗಿದೆ. ಈ ಮೂಲಕ ರೈತರ ನೋವು ನಿವಾರಿಸುವ ಜವಾಬ್ದಾರಿ ಸರಕಾರದ ಮೇಲಿದೆ.

ಟಾಪ್ ನ್ಯೂಸ್

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sammati sex

18+: ಸಮ್ಮತಿ ವಯಸ್ಸು ಇಳಿಕೆ ಮಾಡದಿರುವ ನಿಲುವು ಸ್ವಾಗತಾರ್ಹ

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

drought

Karnataka: ಬರ ನಿರ್ವಹಣೆ: ಕೇಂದ್ರ, ರಾಜ್ಯ ಸರಕಾರಗಳು ಕಾರ್ಯೋನ್ಮುಖವಾಗಲಿ

supreme court

Supreme Court: ಸುಪ್ರೀಂ ಎಚ್ಚರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿ

river…

Cauvery: ಎರಡೆರಡು ಬಂದ್‌ ಸರಿಯಾದ ನಿರ್ಧಾರವಲ್ಲ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.