ತಂಬಾಕು ಸೇವನೆಯ ದುಶ್ಚಟದಿಂದ ದೂರ ಉಳಿಯೋಣ


Team Udayavani, May 31, 2023, 7:30 AM IST

CIGERATTE

ವಿಶ್ವ ಅರೋಗ್ಯ ಸಂಸ್ಥೆಯ ಪ್ರಕಾರ ಕೋವಿಡ್‌ 19ನಿಂದ ಸಾವನ್ನಪ್ಪಿರುವವರ ಸಂಖ್ಯೆಗಿಂತ ಬೀಡಿ, ಸಿಗರೇಟ್‌, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳ ಬಳಕೆಯಿಂದ ಮರಣ ಹೊಂದಿರುವವರ ಸಂಖ್ಯೆ ಅಧಿಕವಾಗಿದೆ. ತಂಬಾಕು ಉತ್ಪನ್ನಗಳ ನೇರ ಸೇವನೆ ಮತ್ತು ಪರೋಕ್ಷ ಸೇವನೆಯ ಪರಿಣಾಮದಿಂದ ಪ್ರತೀ ವರ್ಷ ಸರಿಸುಮಾರು 13.5-14 ಲಕ್ಷ ಜನರು ದೇಶದಲ್ಲಿ ಸಾವನ್ನಪ್ಪುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಗ್ಲೋಬಲ್‌ ಅಡಲ್ಟ್ ತಂಬಾಕು ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸುಮಾರು 3 ಕೋಟಿ ಜನರು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಕರ್ನಾಟಕದ ಒಟ್ಟಾರೆ ಜನಸಂಖ್ಯೆಯ ಅರ್ಧಕ್ಕರ್ಧ ಮಂದಿ ಈ ಉತ್ಪನ್ನಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಪೈಕಿ ಶೇ.8.8ರಷ್ಟು ಧೂಮಪಾನಿಗಳು, ಶೇ.16.3ರಷ್ಟು ಧೂಮಪಾನ ರಹಿತ ತಂಬಾಕು ಬಳಕೆದಾರರು ಸೇರಿದ್ದಾರೆ. ಇವರಲ್ಲಿ ಯುವಕರೇ ಹೆಚ್ಚು ವ್ಯಸನಿಗಳಾಗಿದ್ದಾರೆ.

ಮಾರಣಾಂತಿಕ ಕಾಯಿಲೆಗಳ ಜನಕ!
ತಂಬಾಕು ಸೇವನೆಯಿಂದ ದೇಹದ ಬಹುತೇಕ ಎಲ್ಲ ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ. ಉಸಿರಾಟ, ರೋಗನಿರೋಧಕ ಮತ್ತು ಸಂತಾನೋತ್ಪತ್ತಿ ಸಮಸ್ಯೆ, ಶ್ವಾಸಕೋಶ ಸಹಿತ ವಿವಿಧ ಅಂಗಾಂಗಗಳ ಕ್ಯಾನ್ಸರ್‌, ಅಧಿಕ ರಕ್ತದೊತ್ತಡ, ಹೃದಯಾಘಾತ, ಪಾರ್ಶ್ವವಾಯು, ಅಂಧತ್ವ, ಎಲುಬು ಸವೆತ ಸಹಿತ ಹಲವಾರು ಕಾಯಿಲೆಗಳಿಗೆ ತಂಬಾಕು ಸೇವನೆ ಕಾರಣೀಭೂತವಾಗಿದೆ.

ಈ ಬಾರಿಯ ಧ್ಯೇಯವಾಕ್ಯ
ತಂಬಾಕು ಮತ್ತು ಅದರ ಉತ್ಪನ್ನಗಳಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯ ನಿರ್ಣಯದಂತೆ ಪ್ರತೀ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನ’ವನ್ನು ಆಚರಿಸ ಲಾಗುತ್ತದೆ. “ನಮಗೆ ಆಹಾರ ಬೇಕು, ತಂಬಾಕು ಅಲ್ಲ’ ಎಂಬುದು ಈ ವರ್ಷದ ಧ್ಯೇಯವಾಕ್ಯ. ತಂಬಾಕನ್ನು ಬೆಳೆಯುವ ರೈತರನ್ನು ಪರ್ಯಾಯ ಬೆಳೆಗಳತ್ತ ಸೆಳೆದು ಆ ಬೆಳೆಗಳ ಮಾರುಕಟ್ಟೆ ಅವಕಾಶಗಳ ಬಗ್ಗೆ ಅರಿವು ಮೂಡಿಸುವುದರ ಜತೆಯಲ್ಲಿ ಪೌಷ್ಟಿಕ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ಬಾರಿಯ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತಿದೆ.

ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳು
ಸಾರ್ವಜನಿಕರಿಂದ ಸಿಒಟಿಪಿಎ ಉಲ್ಲಂಘನೆಗಳನ್ನು ನೋಂದಾಯಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ಸ್ಟಾಪ್‌ ಟೊಬ್ಯಾಕೊ’ ಎಂಬ ಆ್ಯಂಡ್ರಾಯಿಡ್‌ ಮೊಬೈಲ್‌ ಆ್ಯಪ್ಲಿಕೇಶನ್‌ ಪರಿಚಯಿಸಿದೆ.
ನಗರಾಭಿವೃದ್ಧಿ ಇಲಾಖೆಯು 2022ರಲ್ಲಿ ತಂಬಾಕು ಮಾರಾಟಗಾರರ ಪರವಾನಿಗೆ ಕುರಿತು ಹೊರಡಿಸಿರುವ ಅಧಿಸೂಚನೆ ಪ್ರಕಾರ, ತಂಬಾಕು ಉತ್ಪನ್ನಗಳನ್ನು ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಕಡ್ಡಾಯವಾಗಿದ್ದು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ಬರುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ 30ಕ್ಕೂ ಹೆಚ್ಚು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಣೆ.
 ಅಪ್ರಾಪ್ತ ವಯಸ್ಕರನ್ನು ತಂಬಾಕು ಹಾವಳಿಯಿಂದ ರಕ್ಷಿಸಲು “ತಂಬಾಕು ಮುಕ್ತ ಉತ್ಪಾದನೆ-2023′ ಎಂಬ ಹೊಸ ನೀತಿಯನ್ನು ಪರಿಚಯಿಸುವ ಪ್ರಕ್ರಿಯೆ ನಡೆಯುತ್ತಿದೆ.
ಸಿಗರೇಟ್‌ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ(ಸಿಒಟಿಪಿಎ) 2003ರ ರಾಜ್ಯ ಮಟ್ಟದ ತಿದ್ದುಪಡಿಯು ಸರಕಾರದ ಪರಿಶೀಲನೆಯಲ್ಲಿದೆ.

ರಾಜ್ಯಾದ್ಯಂತ ಜಾಗೃತಿ
ರಾಜ್ಯ ಆರೋಗ್ಯ ಇಲಾಖೆಯೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮವನ್ನು ಕೈಗೊಂಡಿದೆ. ರಾಜ್ಯದ ಹಲವೆಡೆ ತಂಬಾಕು ಸೇವನೆ ಮತ್ತದರ ಪಾರ್ಶ್ವ ಸೇವನೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸಲು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ “ತಂಬಾಕು ವ್ಯಸನ ಮುಕ್ತ ಕೇಂದ್ರ’ಗಳ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ.

ತಂಬಾಕು ಬೆಳೆಯಿಂದ ಲಾಭಕ್ಕಿಂತ ನಷ್ಟವೇ ಅಧಿಕ
ತಂಬಾಕು ಬಳಕೆ ಮತ್ತು ಬೆಳೆಯಿಂದ ಮಾನವನ ಆರೋಗ್ಯದ ಮೇಲೆ ಮಾತ್ರವಲ್ಲದೆ ಪರಿಸರ, ಆರ್ಥಿಕತೆ ಮತ್ತು ರಾಷ್ಟ್ರದ ಒಟ್ಟಾರೆ ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತಿದೆ. ತಂಬಾಕು ಬೆಳೆಯಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ಲಾಭವಾಗುವುದಕ್ಕಿಂತ ಹೆಚ್ಚು ತಂಬಾಕು ಸೇವನೆಯಿಂದ ಅನಾರೋಗ್ಯಕ್ಕೆ ಪೀಡಿತರಾದವರ ಚಿಕಿತ್ಸೆಗೆಂದು ಸರಕಾರ ಅಧಿಕ ಹಣವನ್ನು ವೆಚ್ಚಮಾಡುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.