ಗ್ಯಾಸ್ ಸಿಲೆಂಡರ್ ಎತ್ತಿ ಹಾಕಿ ಪತ್ನಿ ಕೊಲೆ
Team Udayavani, Jan 15, 2022, 12:13 PM IST
ಕಲಬುರಗಿ: ಪತ್ನಿ ತಲೆ ಮೇಲೆ ಪತಿಯೇ ಗ್ಯಾಸ್ ಸಿಲೆಂಡರ್ ಎತ್ತಿ ಹಾಕಿ ಧಾರುಣವಾಗಿ ಕೊಲೆ ಮಾಡಿದ ಘಟನೆ ನಗರದ ಕೋಟನೂರ ಜಿಡಿಎ ಬಡಾವಣೆ ಹತ್ತಿರದ ಕುಬೇರಾ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.
ದಿನಾಲು ಕುಡಿದು ಪತ್ನಿಯೊಂದಿಗೆ ಜಗಳ ತೆಗೆಯುತ್ತಿದ್ದ. ಗುರುವಾರ ರಾತ್ರಿ ಎಂದಿನಂತೆ ಪತ್ನಿಯೊಂದಿಗೆ ಜಗಳ ತೆಗೆದಿದ್ದಲ್ಲದೇ ಮಾತಿಗೆ-ಮಾತು ಬೆಳೆದು ಹೊಡೆದು ಮನೆಯಲ್ಲಿದ್ದ ಗ್ಯಾಸ್ ಸಿಲೆಂಡರ್ ತಲೆ ಮೇಲೆ ಎತ್ತಿ ಹಾಕಿ ಧಾರುಣವಾಗಿ ಕೊಲೆ ಮಾಡಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ.
ಆರತಿ ತಾರಾಸಿಂಗ್ ರಾಠೊಡ (28) ಮಹಿಳೆ ಕೊಲೆಯಾದ ಗೃಹಿಣಿ. ಈಕೆಯ ಪತಿ ತಾರಾಸಿಂಗನೇ ಕೊಲೆ ಮಾಡಿದ ವ್ಯಕ್ತಿ. ತಾರಾಸಿಂಗ್ನ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಘಟನೆ ವಿವರ
ಚಾಲಕನಾಗಿರುವ ತಾರಾಸಿಂಗ್ ಶಾಲೆಯ ವಿದ್ಯಾರ್ಥಿಗಳನ್ನು ವ್ಯಾನ್ದಲ್ಲಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಕುಬೇರಾ ನಗರದಲ್ಲಿ ಮನೆ ಬಾಡಿಗೆ ಹಿಡಿದಿದ್ದ. ತವರು ಮನೆಯಿಂದ ಹಣ ತರುವಂತೆ ಪತ್ನಿಯನ್ನು ಆಗಾಗ್ಗೆ ಪೀಡಿಸುತ್ತಿದ್ದ. ಆರತಿ ತಂದೆ ಸರ್ಕಾರಿ ನೌಕರರಾಗಿದ್ದರಿಂದ ಬ್ಯಾಂಕ್ನಲ್ಲಿ ಸಾಲ ಪಡೆದು ಮಗಳಿಗೆ ಹೌಸಿಂಗ್ ಬೋರ್ಡ್ನಲ್ಲಿ ಮನೆ ಕೊಡಿಸಿದ್ದರು. ಆದರೆ ತಾರಾಸಿಂಗ್ ಮನೆ ಕೊಡಿಸಿದರೆ ಸಾಲದು, ಮನೆ ತನ್ನ ಹೆಸರಿಗೆ ಇರಬೇಕೆಂದು ಜಗಳ ತೆಗೆಯುತ್ತಿದ್ದ. ಇದೇ ವಿಷಯಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ಗುರುವಾರ ರಾತ್ರಿ ಕಳೆದಿದ್ದರೆ ಶುಕ್ರವಾರ ದಿನ ಸಂಕ್ರಾಂತಿ ಹಬ್ಬಕ್ಕೆಂದು ಆರತಿ ತವರು ಮನೆಗೆ ಹೊರಡುವವಳಿದ್ದಳು. ಆದರೆ ಪತಿ ತಾರಾಸಿಂಗ್ ಪತ್ನಿಯನ್ನು ಕೊಲೆ ಮಾಡಿ ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ. ಆರತಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಲೆ ಮಾಡಿರುವ ತಾರಾಸಿಂಗ್ಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.
ಡಿಸಿಪಿ ಅಡ್ಡೂರು ಶ್ರೀನಿವಾಸಲು, ಎಸಿಪಿ ಜೆ.ಎಚ್. ಇನಾಂದಾರ, ಗುಲ್ಬರ್ಗ ವಿವಿ ಠಾಣೆಯ ಇನ್ಸಪೆಕ್ಟರ್ ಶಿವಾನಂದ ಗಾಣಿಗೇರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ