
kadaba: ಲೈನ್ಮನ್ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ
Team Udayavani, Jun 3, 2023, 5:23 AM IST

ಕಡಬ: ಕಡಬ ಮೆಸ್ಕಾಂನ ಲೈನ್ಮನ್ ದ್ಯಾಮಣ್ಣ ದೊಡ್ಡಮನಿ (26) ಅವರು ಕರ್ತವ್ಯದಲ್ಲಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಕಡಬ ಮೆಸ್ಕಾಂ ಉಪ ವಿಭಾಗದ ಇಬ್ಬರು ಎಂಜಿನಿಯರ್ಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ಯಾಮಣ್ಣ ದೊಡ್ಡಮನಿ ಅವರ ತಂದೆ ರೇವಣ್ಣಪ್ಪ ಅವರು ಮೆಸ್ಕಾಂ ಕಡಬ ಉಪ ವಿಭಾಗದ ಸಹಾಯಕ ಎಂಜಿನಿಯರ್ ಸತ್ಯನಾರಾಯಣ ಕೆ.ಸಿ. ಹಾಗೂ ಕಿರಿಯ ಎಂಜಿನಿಯರ್ ವಸಂತ ವಿರುದ್ಧ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದೂರಿನ ವಿವರ
ಪುತ್ರ ದ್ಯಾಮಣ್ಣ ಮೆಸ್ಕಾಂ ಕಡಬ ಶಾಖೆಯಲ್ಲಿ ಹಿರಿಯ ಮಾರ್ಗದಾಳು ಆಗಿದ್ದು, ಮೇ 31ರಂದು ರಾತ್ರಿ ವಿಪರೀತ ಮಳೆ ಸುರಿದ ಕಾರಣ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಅದರ ದುರಸ್ತಿಗಾಗಿ ಜೂ. 1ರಂದು ಕುಟ್ರಾಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಕಂಬ ಏರಿದ್ದಾಗ ಹಠಾತ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುತ್ತಾನೆ. ಆತ
ದುರಸ್ತಿ ಮಾಡುತ್ತಿದ್ದ ಸ್ಥಳದಲ್ಲಿ ಎರಡು ಟ್ರಾನ್ಸ್ ಫಾರ್ಮರ್ಗಳ ಎರಡು ವಿದ್ಯುತ್ ಲೈನ್ಗಳು ಹಾದು ಹೋಗಿವೆ. ಒಂದನ್ನು ಆಫ್ ಮಾಡಿದ್ದು, ಮತ್ತೂಂದು ಲೈನ್ನಲ್ಲಿ ವಿದ್ಯುತ್ ಪ್ರವಹಿಸಿರುವುದರಿಂದ ಆತನಿಗೆ ವಿದ್ಯುತ್ ಆಘಾತವಾಗಿದೆ. ದುರಸ್ತಿ ಸಂದರ್ಭ ಆತನ ಜತೆಗೆ ಹಿರಿಯ ಅಧಿಕಾರಿಗಳು ಹೋಗದಿರುವುದು, ಸಹಾಯಕ್ಕೆ ಯಾರನ್ನೂ ಕಳುಹಿಸದಿದ್ದುದು, ಸುರಕ್ಷೆಗಾಗಿ ಹೆಲ್ಮೆಟ್, ಹ್ಯಾಂಡ್ ಗ್ಲೌಸ್, ಶೂ ಮುಂತಾದ ಯಾವುದೇ ಸುರûಾ ಸಾಮಗ್ರಿಗಳನ್ನು ನೀಡದೆ ಕಳುಹಿಸಿ ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದ ಅವಘಡಕ್ಕೆ ಹಿರಿಯ ಅಧಿಕಾರಿಗಳೇ ಕಾರಣರಾಗಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ