ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ


Team Udayavani, Nov 16, 2020, 10:52 AM IST

ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ

ಮಂಗಳೂರು: ಹಲವು ವರ್ಷಗಳ ಕಾಲ ಮನೆಯವರಿಂದ ದೂರವಿದ್ದು ದಿಕ್ಕು ದೆಸೆ ಇಲ್ಲದೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದು ಮನೆಗೆ ಮರಳಲು ಅಣಿಯಾಗಿರುವ ನೂರಾರು ಮಂದಿಯ ಆಸೆಗೆ ಕೊರೊನಾ ತಣ್ಣೀರೆರಚಿದೆ.

ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಣೆಯಾದ ಕೂಡಲೇ ಎಲ್ಲ ನಿರಾಶ್ರಿತರ ಕೇಂದ್ರಗಳನ್ನು ಮುಚ್ಚಿ ಕೇಂದ್ರಗಳಿಗೆ ಸೇರ್ಪಡೆ, ಕೇಂದ್ರಗಳಿಂದ ಬಿಡುಗಡೆಯನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಪರಿಣಾಮವಾಗಿ ನೂರಾರು ಮಂದಿ ಇಂತಹ ಕೇಂದ್ರಗಳಲ್ಲೇ ಉಳಿದುಕೊಳ್ಳುವುದು ಅನಿವಾರ್ಯವಾಗಿದೆ.

14 ಕೇಂದ್ರಗಳಲ್ಲಿ ಬಾಕಿ
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕೇಂದ್ರ ಪರಿಹಾರ ಸಮಿತಿಯ ಆಶ್ರಯದಲ್ಲಿ 14 ನಿರಾಶ್ರಿತರ ಕೇಂದ್ರಗಳಿದ್ದು 2,700ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಅವರಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡು ಇಲಾಖೆ
ಯಿಂದ ರಕ್ಷಿಸಲ್ಪಟ್ಟು ಅನಂತರ ಮನೆ ವಿಳಾಸ ಪತ್ತೆಯಾಗಿ ಮನೆಗೆ ತೆರಳಲು ಸಿದ್ಧವಾಗಿರುವವರು ಶೇ. 50ಕ್ಕೂ ಅಧಿಕ ಮಂದಿ. ವಿಳಾಸ ಇಲ್ಲದವರ ವಿಳಾಸ ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಲಾಗಿದ್ದು ಮನೆಯವರು ಕೂಡ ವರ್ಷಗಟ್ಟಲೆ ತಮ್ಮಿಂದ ದೂರವಾಗಿರುವ ಬಂಧುಗಳನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ. ಅವರಲ್ಲಿ ಹೊರ ರಾಜ್ಯದವರೂ ಇದ್ದಾರೆ. ಆದರೆ ಕೊರೊನಾ ಇದಕ್ಕೆ ತಡೆಯಾಗಿದೆ.

ನ್ಯಾಯಾಲಯ ಅನುಮತಿ
ಎಪ್ರಿಲ್‌ ಅನಂತರ ನಿರಾಶ್ರಿತರ ಕೇಂದ್ರಗಳಿಂದ ಯಾರನ್ನೂ ಮನೆಗೆ ಕಳುಹಿಸಿಲ್ಲ. ಸಾಮಾನ್ಯವಾಗಿ ಒಂದು ವರ್ಷ ಅಥವಾ ಮೂರು ವರ್ಷಗಳ ಅವಧಿಯವರೆಗೆ ಇಂತಹ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಈಗಾಗಲೇ ನಿಗದಿತ ಅವಧಿ ಮುಗಿದವರು ಅನೇಕ ಮಂದಿ ಇದ್ದಾರೆ. ಅಂತಹ ನಿರಾಶ್ರಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕೊರೊನಾ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅನುಮತಿ ಪಡೆದು ಅವರ ಆಶ್ರಯದ ಅವಧಿ ವಿಸ್ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಬದುಕಿನತ್ತ ಹೆಜ್ಜೆ
ಸಾಮಾನ್ಯವಾಗಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿರುವವರಿಗೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಭಿಕ್ಷಾಟನೆ ನಿಷೇಧ ಕಾಯಿದೆಯಡಿ ಅವರನ್ನು ವಶಕ್ಕೆ ಪಡೆದು ಇಲಾಖೆಯ ಸುಪರ್ದಿಯಲ್ಲಿಡಲಾಗುತ್ತದೆ. ಅವರಿಗೆ ಕೌನ್ಸೆಲಿಂಗ್‌ ಸೇರಿದಂತೆ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತದೆ. ಅವರ ಮನೆಯ ವಿಳಾಸವಿದ್ದರೆ ಅದನ್ನು ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಿ ಮನೆಗೆ ಕಳುಹಿಸಿಕೊಡಲಾಗುತ್ತದೆ. ನಿರಾಶ್ರಿತರ ಕೇಂದ್ರಗಳಿಂದ ತೆರಳಿದವರ ಪೈಕಿ ಭಿಕ್ಷಾಟನೆ ಬಿಟ್ಟು ಹೊಸ ಬದುಕು ಕಟ್ಟಿಕೊಂಡಿರುವವರೇ ಹೆಚ್ಚು ಎನ್ನುತ್ತಾರೆ ನಿರಾಶ್ರಿತ ಕೇಂದ್ರಗಳ ನಿರ್ವಾಹಕರು.

ಸದ್ಯ ಬಿಡುಗಡೆ ಇಲ್ಲ
ನಿರಾಶ್ರಿತರ ಕೇಂದ್ರಗಳಲ್ಲಿ ಇರುವವರ ಆರೋಗ್ಯ ಇತರರಿಗಿಂತ ಸೂಕ್ಷ್ಮ. ಕೇಂದ್ರದ ಒಬ್ಬರಿಗೆ ಸೋಂಕು ಬಂದರೆ ಉಳಿದವರಿಗೆ ಬೇಗನೆ ಹರಡುವ ಸಾಧ್ಯತೆ ಅಧಿಕ. ಕೇಂದ್ರಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಿರುವುದರಿಂದ ಯಾವುದೇ ಕೇಂದ್ರದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಈಗ ಅವರನ್ನು ಮನೆಗೆ ಕಳುಹಿಸಿದರೆ ಅವರಿಗೆ ಮಾತ್ರವಲ್ಲದೆ ಮನೆಯವರಿಗೂ ಅಪಾಯ. ಹಾಗಾಗಿ ಸದ್ಯಕ್ಕೆ ಬಿಡುಗಡೆ ಇಲ್ಲ.
– ಯು. ಚಂದ್ರ ನಾಯಕ್‌, ಕಾರ್ಯದರ್ಶಿ ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.