ಮೇ.10 ರಿಂದ ಕಠಿನ ಲಾಕ್‌ಡೌನ್‌ :ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ; ಉಡುಪಿ ಡಿಸಿ


Team Udayavani, May 8, 2021, 8:20 PM IST

ಮೇ.10 ರಿಂದ ಕಠಿನ ಲಾಕ್‌ಡೌನ್‌ :ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ; ಉಡುಪಿ ಡಿಸಿ

ಉಡುಪಿ : ಸೋಮವಾರದಿಂದ ಜಾರಿಯಾಗುವ ಎರಡನೆಯ ಹಂತದ ಲಾಕ್‌ಡೌನ್‌ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದ್ದಾರೆ.

ಈಗಾಗಲೇ ಚೆಕ್‌ಪೋಸ್ಟ್‌ಗಳು ಕಾರ್ಯಾಚರಿಸುತ್ತಿದ್ದು ಜಿಲ್ಲೆಯೊಳಗೆ ಯಾರನ್ನೂ ಬಿಡುವುದಿಲ್ಲ. ಈ ಕುರಿತು ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದ್ದೇವೆ ಎಂದು ಜಿಲ್ಲಾಧಿಕಾರಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಹಳ್ಳಿಗಳಲ್ಲಿ ಪೇಟೆಗೆ ಬರಲು ಬಹಳ ದೂರ ಇರುವುದರಿಂದ ಸರಕಾರದ ಗಮನಕ್ಕೆ ತರುತ್ತೇವೆ ಎಂದರು.

ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಜಿ.ಪಂ. ಸಿಇಒ ಡಾ|ನವೀನ್‌ ಭಟ್‌, ಎಡಿಸಿ ಸದಾಶಿವ ಪ್ರಭು, ಸಹಾಯಕ ಕಮಿಷನರ್‌ ರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ :ಪಾಲಿಕೆ ಚುನಾವಣೆಯಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ – ಸುದೀನ್ ಧವಳೀಕರ್

ಪ್ರಮುಖ ಅಂಶಗಳು :
– ಹೊಟೇಲುಗಳಲ್ಲಿ ಬೆಳಗ್ಗಿನಿಂದ ರಾತ್ರಿವರೆಗೆ ಆಹಾರ ಪಾರ್ಸೆಲ್‌ ಕೊಂಡೊಯ್ಯಬಹುದು. ಆದರೆ ಗ್ರಾಹಕರು ವಾಹನಗಳಲ್ಲಿ ಬಂದು ಪಾರ್ಸೆಲ್‌ ಕೊಂಡೊಯ್ಯುವಂತಿಲ್ಲ. ಪಕ್ಕದ ಹೊಟೇಲುಗಳಿಗೆ ಹೋಗಿ ಪಾರ್ಸೆಲ್‌ ತೆಗೆದುಕೊಳ್ಳಬಹುದು.

– ಅಂಗಡಿಗಳಲ್ಲಿ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಸಾಮಗ್ರಿ ಖರೀದಿಸಬಹುದು. ಆದರೆ ಮನೆ ಸಮೀಪದ ಅಂಗಡಿಗಳಿಗೆ ಮಾತ್ರ ನಡೆದುಕೊಂಡು ಹೋಗಬೇಕು.

– ಔಷಧಿಗಳನ್ನು ಖರೀದಿಸುವವರೂ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು.

– ಸ್ವತಂತ್ರ ಮದ್ಯದ ಮಳಿಗೆಗಳಲ್ಲಿ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಖರೀದಿಸಬಹುದು.

– ತಳ್ಳುಗಾಡಿಗಳಲ್ಲಿ ಹಣ್ಣು ಮತ್ತು ತರಕಾರಿ ಕೊಂಡೊಯ್ಯುವವರು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಸಂಚರಿಸಬಹುದು. ಇವರು ಮನೆಗಳಿಗೂ ಕೊಂಡೊಯ್ದು ಕೊಡಬಹುದು. ಇದು ಸಾರ್ವಜನಿಕರ ಖರೀದಿ ಅನುಕೂಲಕ್ಕಾಗಿ.

– ಹಾಪ್‌ಕಾಮ್ಸ್‌ ಮತ್ತು ಕೆಎಂಎಫ್ ಹಾಲಿನ ಬೂತುಗಳನ್ನು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ತೆರೆದಿಟ್ಟುಕೊಳ್ಳಬಹುದು. ಬೇಕರಿ, ಇತರ ಅಂಗಡಿಗಳಲ್ಲಿ ಹಾಲು ಮಾರುತ್ತೇವೆಂದರೆ ಅವಕಾಶಗಳಿಲ್ಲ.

– ಬಂದರು ಪ್ರದೇಶಗಳಿಗೆ ಸಾರ್ವಜನಿಕರು ಪ್ರವೇಶಿಸಿ ಮೀನು ಖರೀದಿ ಮಾಡುವಂತಿಲ್ಲ. ಅಲ್ಲಿಂದ ರೀಟೇಲರ್‌ ಮೂಲಕ ಮಾರುಕಟ್ಟೆಯಲ್ಲಿ ಖರೀದಿಸಬಹುದು. ಮೀನನ್ನು ಮನೆಗೆ ಸ್ಕೂಟರ್‌ನಲ್ಲಿ ಕೊಂಡೊಯ್ದು ಮಾರಾಟಕ್ಕೆ ಅವಕಾಶವಿದೆ.

– ಆರೋಗ್ಯ ತುರ್ತು ಸ್ಥಿತಿ, ಆರೋಗ್ಯ ಇಲಾಖೆ ಸಿಬಂದಿಗಳ ಕರ್ತವ್ಯಕ್ಕೆ, ನ್ಯಾಯಾಂಗ ಸಿಬಂದಿಗಳ ಕರ್ತವ್ಯಕ್ಕೆ, ರೈಲು-ವಿಮಾನದಲ್ಲಿ ಪ್ರಯಾಣಿಸುವವರು ಟಿಕೆಟ್‌ ದಾಖಲೆಯೊಂದಿಗೆ, ತುರ್ತು ಆರೋಗ್ಯ ಸ್ಥಿತಿಗೆ ಟ್ಯಾಕ್ಸಿ ಪ್ರಯಾಣ, ರೋಗಿಗಳ ಪರಿಚಾರಕರಿಗೆ ಪ್ರಯಾಣ ಹೊರತುಪಡಿಸಿ ಅಂತಾರಾಜ್ಯ ಮತ್ತು ಅಂತರ್ಜಿಲ್ಲಾ ಸಂಚಾರವನ್ನು ನಿರ್ಬಂಧಿಸಲಾಗಿದೆ.

– ಬ್ಯಾಂಕ್‌, ಎಟಿಎಂ, ವಿಮಾ ಕಚೇರಿಗಳು ಹಿಂದಿನಂತೆ ಕಾರ್ಯನಿರ್ವಹಿಸುತ್ತವೆ.

– ಅಗತ್ಯ ವಸ್ತುಗಳ ತಯಾರಿಕ ಘಟಕಗಳಿಗೆ ಅವಕಾಶವಿದೆ.

– ಕಾರ್ಮಿಕರನ್ನು ಕಾಮಗಾರಿ ನಿವೇಶನದಲ್ಲಿ ಉಳಿಸಿಕೊಂಡು ನಿರ್ಮಾಣ ಕಾಮಗಾರಿ ಮಾಡುವುದಾದರೆ ಮಾತ್ರ ಅವಕಾಶವಿದೆ. ಕಾರ್ಮಿಕರು ಹೊರಗಿನಿಂದ ಬರಲು ಅವಕಾಶಗಳಿಲ್ಲ. ಯಾರೂ ಕೂಡ ಕಾರ್ಮಿಕರನ್ನು ಕರೆತರಿಸಿ ಜಿಲ್ಲಾಡಳಿತ ಇವರ ಹೊಣೆ ಹೊರಬೇಕೆಂದರೆ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಇಂತಹ ಕಾರ್ಮಿಕರನ್ನು ರವಿವಾರದ ಒಳಗೆ ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಕಳುಹಿಸಬೇಕು. ಅವರನ್ನು ತಂದು ಅರ್ಧದಲ್ಲಿ ಕೈಬಿಡಬಾರದು.

– ಕಟ್ಟಡ ನಿರ್ಮಾಣ ಅಂಗಡಿಗಳೂ ತೆರೆದಿರುವುದಿಲ್ಲ. ಹೀಗಾಗಿ ಸಾಮಗ್ರಿಗಳನ್ನು ರವಿವಾರದೊಳಗೆ ಸಂಗ್ರಹಿಸಿಟ್ಟುಕೊಳ್ಳಬೇಕು.

– ಹೊಯಿಗೆ, ಮಣ್ಣು ಸಹಿತ ಸಾಮಗ್ರಿಗಳ ಸಾಗಾಟಕ್ಕೆ ಅವಕಾಶವಿದೆ.

– ಹೋಮ್‌ ಡೆಲಿವರಿಗೆ ಅವಕಾಶವಿದೆ.

– 50 ಜನರ ಒಳಗೆ ಮದುವೆಗೆ ಅವಕಾಶವಿದೆ. ಎಲ್ಲಿ ಮದುವೆಯಾಗುತ್ತದೋ ಅಲ್ಲಿನ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಸಂಚಾರ ಅನುಮತಿ ಪಡೆದುಕೊಳ್ಳಬೇಕು. ಮೆಹಂದಿ, ಬೀಗರ ಔತಣಗಳಿಗೆ ಅವಕಾಶಗಳಿಲ್ಲ.

– ಅಂತ್ಯಸಂಸ್ಕಾರವನ್ನು ಐದು ಜನರ ಒಳಗೆ ನಡೆಸಬೇಕು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.