ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ


Team Udayavani, Apr 5, 2020, 6:00 AM IST

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಬೆಂಗಳೂರು: ಲಾಕ್‌ಡೌನ್‌ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹೊಣೆಗಾರಿಕೆ ನಡು ವೆಯೇ ಅಗತ್ಯ ವಸ್ತುಗಳ ಸಾಗಣೆ, ಮಾರಾಟ, ಖರೀದಿ ಗಾಗಿ ರಾಜ್ಯಾದ್ಯಂತ ನೀಡಿರುವ ವಿನಾಯಿತಿ ಅಪಾಯ ತಂದೊಡ್ಡಬಹುದಾ ಎಂಬ ಆತಂಕ ಸೃಷ್ಟಿ ಸಿದೆ.

ಅಗತ್ಯ ಉದ್ದೇಶಗಳಿಗೆ ಈ ಸಡಿಲಿಕೆ ಮಾಡಲಾಗಿದ್ದು ಈಗ ಅನಗತ್ಯ ಉದ್ದೇಶಗಳಿಗೂ ವಿಸ್ತರಣೆ ಆಗುತ್ತಿದೆ. ರೇಷ್ಮೆ ಮಾರುಕಟ್ಟೆಯ ಪುನಾರಂಭ, ಉಚಿತ ಹಾಲು ವಿತರಣೆ, ಕೆಲವೆಡೆ ಪರಿಣಾಮಕಾರಿಯಾಗಿ ಜಾರಿಯಾಗದ ತಪಾಸಣೆ… ಇಂಥ ಹಲವು ಅಂಶಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತೊಡಕಾಗುತ್ತಿವೆ. ಇದು ಮತ್ತೂಂದು ಸಮಸ್ಯೆಗೆ ಕಾರಣವಾಗಬಹುದು ಎಂಬ ಕಳವಳವನ್ನು ಸೃಷ್ಟಿಸಿದೆ.

ಎಪಿಎಂಸಿ ಮಾರುಕಟ್ಟೆಗಳು, ಹಣ್ಣು ಮತ್ತು ತರಕಾರಿ ಮಾರುಕಟ್ಟೆಗಳು, ಆಹಾರ ಧಾನ್ಯ ಮಾರಾಟ ಮಂಡಿಗಳು ತೆರೆದುಕೊಂಡಿರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ರೈತರು, ವರ್ತಕರು, ಸಗಟು ಮತ್ತು ಚಿಲ್ಲರೆ ವ್ಯಾಪಾರಸ್ಥರು, ಸಾರ್ವಜನಿಕರು ದೊಡ್ಡ ಪ್ರಮಾಣದಲ್ಲೇ ಬರುತ್ತಿದ್ದಾರೆ. ಕೇರಳ ಗಡಿ ಹೊರತುಪಡಿಸಿ ರಾಜ್ಯದ ಎಲ್ಲ ಗಡಿಗಳನ್ನೂ ಆಹಾರ ಧಾನ್ಯ, ಹಣ್ಣು ಮತ್ತು ತರಕಾರಿ ಸಾಗಣೆಗೆ ಮುಕ್ತಗೊಳಿಸಲಾಗಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ವಾಹನ ಸಂಚಾರವೂ ಹೆಚ್ಚಾಗಿದೆ. ಆ ವಾಹನಗಳಲ್ಲಿ ಕೂಲಿ ಕಾರ್ಮಿಕರು, ರೈತರು, ವ್ಯಾಪಾರಸ್ಥರು ಬರುತ್ತಿದ್ದಾರೆ. ಇದರಿಂದಾಗಿ ಕೆಲವು ನಗರ ಮತ್ತು ಪಟ್ಟಣಗಳಲ್ಲಿ ಮಾರುಕಟ್ಟೆ, ವ್ಯಾಪಾರ ಮಳಿಗೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಜನರ ಓಡಾಟವೂ ಇದೆ.

ಇದರ ಜತೆಗೆ ಸರಕಾರವೇ ಕೆಎಂಎಫ್‌ನಿಂದ ಹಾಲು ಖರೀದಿಸಿ ಕೊಳೆಗೇರಿಗಳು ಮತ್ತು ಬಡವರ ಕಾಲನಿಗಳಲ್ಲಿ ವಿತರಿಸುತ್ತಿದೆ. ಹಾಲು ಪಡೆಯಲು ಜನರು ನಿತ್ಯ ಬೆಳಗ್ಗೆ ಮುಗಿ ಬೀಳುತ್ತಿದ್ದು ಅಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಮತ್ತೂಂದೆಡೆ ಸರಕಾರವು ಕೃಷಿ ಪರಿಕರಗಳ ಸರಬರಾಜಿಗೆ ತೊಂದರೆಯಾಗದಂತೆ ಅಗತ್ಯ ಇದ್ದವರಿಗೆ ಗ್ರೀನ್‌ ಪಾಸ್‌ ನೀಡಲು ಜಿಲ್ಲಾ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದೆ. ಆ ಪಾಸ್‌ ಪಡೆಯಲು ಜಿಲ್ಲೆ ಮತ್ತು ತಾಲೂಕುಗಳಲ್ಲಿ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಲಾಕ್‌ಡೌನ್‌ನ ಮೂಲ ಉದ್ದೇಶ ಕೆಲವು ಕಡೆಯಷ್ಟೇ ಪಾಲನೆಯಾಗುತ್ತಿದ್ದು ಶೇ. 80ರಷ್ಟು ಕಡೆ ಪಾಲನೆ ಯಾಗುತ್ತಿಲ್ಲ. ಲಾಕ್‌ಡೌನ್‌ ಅವಧಿ ಮುಗಿಯುವ 2 ವಾರಗಳಿಗೂ ಮುನ್ನವೇ ಹಲವಾರು ವಿನಾ ಯಿತಿಗಳನ್ನು ಘೋಷಿಸಲಾಗಿದ್ದು ಎಲ್ಲೆಲ್ಲೂ ಜನಜಂಗುಳಿ ಕಂಡುಬರತೊಡಗಿದೆ. ನಿರ್ಬಂಧಗಳ ಬಿಗಿ ಈ ಮಾದರಿಯಲ್ಲಿ ಸಡಿಲಗೊಂಡರೆ ಕೋವಿಡ್ 19 ವೈರಸ್‌ ಹರಡುವುದನ್ನು ನಿಯಂತ್ರಿಸುವುದು ಕಷ್ಟಸಾಧ್ಯವೇ ಸರಿ.

ಅಗತ್ಯ ವಸ್ತುಗಳ ಸಾಗಣೆಗಾಗಿ ಮಾತ್ರವೇ ಲಾಕ್‌ಡೌನ್‌ನಿಂದ ವಿನಾ ಯಿತಿ ನೀಡಲಾಗಿದೆ. ಇದರ ದುರುಪಯೋಗ ಸಲ್ಲ. ಮಾರುಕಟ್ಟೆ, ಮಂಡಿಗಳ ಬಳಿ ಜನಜಂಗುಳಿ ಸೇರಬಾರದು. ಸರಕಾರದ ವತಿಯಿಂದಲೇ ಹಣ್ಣು ತರಕಾರಿ ಖರೀದಿಸಿ ಸಾರ್ವಜನಿಕರಿಗೆ ನೇರ ಮಾರಾಟ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
-ಎಸ್‌.ಟಿ.ಸೋಮಶೇಖರ್‌, ಸಹಕಾರ ಸಚಿವ

ಅಗತ್ಯ ವಸ್ತುಗಳ ಸಾಗಣೆ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದರಿಂದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಜನ ಸೇರುವಂತಾಗಿದೆ. ಆದರೆ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಜನರ ಹಿತಕ್ಕಾಗಿ ಲಾಕ್‌ಡೌನ್‌ ಜಾರಿಯಾಗಿದೆ. ಅಗತ್ಯ ವಸ್ತು ಗಳಿಗಾಗಿ ಜನರು ಸಂಕಷ್ಟ ಪಡಬಾರದು ಎಂದು ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.
-ಬಿ.ಸಿ.ಪಾಟೀಲ್‌ , ಕೃಷಿ ಸಚಿವ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.