2.4 ಶತಕೋಟಿ ಪೌಂಡ್‌ ಗಳಷ್ಟು ನಷ್ಟ ಅನುಭವಿಸಿದ ಬ್ರಿಟನ್‌ ನ ಹೀಥ್ರೂ ಏರ್ ಪೋರ್ಟ್..!


Team Udayavani, Apr 30, 2021, 7:44 PM IST

London’s Heathrow Airport sees first quarter loss of over 300 million pounds amid pandemic

ಬ್ರಿಟನ್ : ಮಾರಕ ಸೋಂಕು ಕೋವಿಡ್ ನ ಕಾರಣದಿಂದಾಗಿ ಇಡೀ ವಿಶ್ವವೇ ತತ್ತರಿಸಿ ಹೋಗಿದೆ ಎನ್ನುವುದರಲ್ಲಿ ಅನುಮಾನಪಡಬೇಕಾಗಿಲ್ಲ. ಬಹುತೇಕ ವಿದೇಶಿ ವಹಿವಾಟುಗಳಂತೂ ಅಡಿಮೇಲಾಗಿವೆ.

ಬ್ರಿಟನ್‌ ನ ಅತ್ಯಂತ ದೊಡ್ಡ ವಿಮಾನ ನಿಲ್ದಾಣವಾದ ಹೀಥ್ರೂ,  ಕೋವಿಡ್ ಸಾಂಕ್ರಾಮಿಕ ಸೋಂಕಿನ ಪ್ರಾರಂಭದಿಂದೀಚೆಗೆ ಮೊದಲ ತ್ರೈಮಾಸಿಕದಲ್ಲಿ 329 ಮಿಲಿಯನ್ ಪೌಂಡ್‌ಗಳ (9459 ಮಿಲಿಯನ್) ನಷ್ಟ ಹೊಂದಿದ್ದು, ಒಟ್ಟು 2.4 ಶತಕೋಟಿ ಪೌಂಡ್‌ ಗಳಷ್ಟು ನಷ್ಟವನ್ನು ಅನುಭವಿಸಿದೆ ಎಂದು ವರದಿಯಾಗಿದೆ.

ಮಾರ್ಚ್ 31 ರ ತನಕ ಮೂರು ತಿಂಗಳ ಅವಧಿಯಲ್ಲಿ ಕೇವಲ 1.7 ಮಿಲಿಯನ್ ಪ್ರಯಾಣಿಕರು ಲಂಡನ್ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ, ಇದು 2019 ರ ಮೊದಲ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇಕಡಾ 91 ರಷ್ಟು ಕಡಿಮೆಯಾಗಿದೆ.

ಓದಿ : ಹೆಚ್ಚುವರಿ 1 ಕೋಟಿ ಡೋಸ್‌ ಲಸಿಕೆ ಖರೀದಿಗೆ ಟಾಸ್ಕ್ ಪೋರ್ಸ್ ಸಭೆಯಲ್ಲಿ ಅನುಮೋದನೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬ್ರಿಟನ್ ನ ಏವಿಯೇಶನ್ ಇಂಡಸ್ಟ್ರಿ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಸಿದ ನಂತರ ಮೇ ಅಂತ್ಯದಲ್ಲಿ ವಿಮಾನ ಹಾರಾಟವು ಪುನರಾರಂಭವಾಗುವ ಸಾಧ್ಯತೆ ಇದೆ ಎಂದು ಆಶಾಭಾವನೆಯನ್ನು ವ್ಯಕ್ತ ಪಡಿಸಿದರೂ ಕೂಡ, ಕೋವಿಡ್ ಬಿಕ್ಕಟ್ಟಿನ ಸಮಸ್ಯೆಯ ಕಾರಣದಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಜನರು ಪ್ರಯಾಣ ಬೆಳೆಸಬಹುದೇ ಎಂಬ ಅನಿಶ್ಚಿತತೆ  ಉಳಿದಿದೆ.

ಇನ್ನು, ಈ ಬಗ್ಗೆ ಬ್ರಿಟಿಷ್ ಸಾರಿಗೆ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್, ಮುಂದಿನ ವಾರ ಜಿ7 ಸಾರಿಗೆ ಸಚಿವರ ಸಭೆ ಕರೆಯುವುದಾಗಿ ಹೇಳಿದ್ದು, ಬ್ರಿಟನ್‌ ನ ಬೇಸಿಗೆಯ ಆರ್ಥಿಕ ಚೇತರಿಕೆ ಮೇ 17 ರಿಂದ ಪುನರಾರಂಭವಾಗುವ ಪ್ರಯಾಣದ ಮೇಲೆ ಅವಲಂಬಿತವಾಗಿದೆ ಎಂದು ಹೀಥ್ರೂ ಪುನರುಚ್ಚರಿಸಿದೆ.

ಬೇಡಿಕೆ ಮರಳಿದಂತೆ ಸ್ಕೇಲ್ ಅಪ್ ಕಾರ್ಯಾಚರಣೆಗಳಿಗೆ ಸಿದ್ಧವಾಗಲಿದೆ. ಆದರೆ ಪಾಸ್‌ ಪೋರ್ಟ್ ಚೆಕ್‌ ಗಳಲ್ಲಿ ಪ್ರಯಾಣಿಕರನ್ನು ತಲುಪಲು ದೀರ್ಘ ಸಮಯದ ಕಾಯುವಿಕೆಯನ್ನು ತಡೆಯುವ ಯುಕೆ ಬಾರ್ಡರ್ ಫೋರ್ಸ್‌ನ ಸಾಮರ್ಥ್ಯದ ಬಗ್ಗೆ ಪದೇ ಪದೇ ಕಳವಳ ವ್ಯಕ್ತಪಡಿಸಿದೆ.

ಇನ್ನು,  ಕೋವಿಡ್ ಕಾರಣದಿಂದಾಗಿ ಉಂಟಾದ 3 ಬಿಲಿಯನ್ ಪೌಂಡ್‌ ಗಳ  ನಷ್ಟವನ್ನು  ನೀಗಿಸಲು ಹೀಥ್ರೂ ವಿಮಾನಯಾನ ಸಂಸ್ಥೆ ಪ್ರತಿ ಪ್ರಯಾಣಿಕರಿಗೆ 30 ಪೆನ್ಸ್(28 ರೂಪಾಯಿ 57 ಪೈಸೆ) ಹೆಚ್ಚು ಶುಲ್ಕ ವಿಧಿಸಬಹುದು ಎಂದು ಬ್ರಿಟನ್‌ನ ಏವಿಯೇಷನ್ ರೆಗ್ಯುಲೇಟರ್ ತಿಳಿಸಿದೆ.

ಓದಿ :  ಕೋವಿಡ್ ಬಿಕ್ಕಟ್ಟು : ಭಾರತದ ಪರಿಸ್ಥಿತಿ ಎಲ್ಲಿ ಬೇಕಾದರೂ ಆಗಬಹುದು :  WHO ಎಚ್ಚರಿಕೆ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

rape

Hamas ಸೇರಿದ ತಂದೆ, ಮಗನಿಂದ ಇಸ್ರೇಲ್‌ ಮಹಿಳೆಯ ರೇಪ್‌, ಹತ್ಯೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.