ವಾಣಿಜ್ಯ ಬಳಕೆಯ ಸಿಲಿಂಡರ್ ದರ 105 ರೂಪಾಯಿ ಏರಿಕೆ; ನಗರ ಪ್ರದೇಶದಲ್ಲಿ LPG ಬೆಲೆ ವಿವರ…
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂಪಾಯಿಗೆ ಏರಿಕೆಯಾಗಿದೆ.
Team Udayavani, Mar 1, 2022, 11:30 AM IST
ನವದೆಹಲಿ:ಹಣದುಬ್ಬರದ ಏರಿಕೆಯ ಹೊರೆ ಗ್ರಾಹಕರ ಮೇಲೆ ಇನ್ನಷ್ಟು ಹೆಚ್ಚಾಗಲಿದ್ದು, ಇಂದಿನಿಂದ (ಮಾರ್ಚ್ 01) ಪ್ರತಿ ವಾಣಿಜ್ಯ ಬಳಕೆಯ ಸಿಲಿಂಡರ್ (ಎಲ್ ಪಿಜಿ) ಬೆಲೆ ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಲಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇದನ್ನೂ ಓದಿ:ಕ್ಯಾಲಿಫೋರ್ನಿಯಾ ಚರ್ಚ್ ನೊಳಗೆ ಗುಂಡಿನ ದಾಳಿ; ಮೂವರು ಮಕ್ಕಳು ಸೇರಿ ಐವರ ಹತ್ಯೆ
ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಫೆ.1ರಂದು 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಕಡಿತಗೊಳಿಸಿತ್ತು. ಇದೀಗ 105 ರೂಪಾಯಿ ಹೆಚ್ಚಳದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂಪಾಯಿಗೆ ಏರಿಕೆಯಾಗಿದೆ.
ಅಷ್ಟೇ ಅಲ್ಲ 5 ಕೆಜಿ ಸಿಲಿಂಡರ್ ಬೆಲೆ 27 ರೂಪಾಯಿ ಹೆಚ್ಚಳವಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ 5 ಕೆಜಿ ಪ್ರತಿ ಸಿಲಿಂಡರ್ ಬೆಲೆ 559 ರೂಪಾಯಿಗೆ ಏರಿಕೆಯಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವರದಿ ತಿಳಿಸಿದೆ.
ಕೋಲ್ಕತಾದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 2,089 ರೂಪಾಯಿಗೆ ಏರಿಕೆಯಾಗಿದೆ. ಮುಂಬಯಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 1,962 ರೂಪಾಯಿ, ಚೆನ್ನೈನಲ್ಲಿ 2,185.5 ರೂಪಾಯಿಗೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1685.5 ರೂಪಾಯಿ, 5 ಕೆಜಿ ಸಿಲಿಂಡರ್ ಬೆಲೆ 469.5 ರೂಪಾಯಿ.
ಫೆಬ್ರುವರಿಗೂ ಮುನ್ನ ಕೇವಲ ಐದು ತಿಂಗಳಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಐದು ಬಾರಿ ಏರಿಕೆ ಮಾಡಲಾಗಿತ್ತು. ಆದರೆ ಗೃಹ ಬಳಕೆಯ 14.2 ಕೆಜಿ, 5ಕೆಜಿ ಮತ್ತು 10 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿಲ್ಲ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ