ಬಿಜೆಪಿ ದ್ವಂದ್ವ ನಿಲುವು: ಎಂ.ಬಿ. ಪಾಟೀಲ್
Team Udayavani, Feb 18, 2022, 8:30 PM IST
ಬೆಂಗಳೂರು: ವಿಧಾನಮಂಡಲ ಉಭಯ ಸದನಗಳಲ್ಲಿ ಬಿಜೆಪಿಯವರೂ ಅಹೋರಾತ್ರಿ ಧರಣಿ ಮಾಡಿದ್ದಾರೆ. ಆದರೆ ಈಗ ಅವರು ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೆ ಕೆ. ಜೆ. ಜಾರ್ಜ್ ಗೃಹಸಚಿವರಾಗಿದ್ದಾಗ ಬಿಜೆಪಿಯವರು ರಾತ್ರಿ ಧರಣಿ ಮಾಡಿದ್ದರು. ಆಗ ಸದನ ವ್ಯರ್ಥ ಆಗಿರಲಿಲ್ವಾ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ. ಸ್ವಾತಂತ್ರ್ಯ ಸಂದರ್ಭದಲ್ಲಿ ಮನುಸ್ಮತಿ ನಮ್ಮ ಸಂವಿಧಾನ ಆಗಬೇಕು ಎಂದು ಆರೆಸ್ಸೆಸ್ ಬಯಸಿತ್ತು. ಬಿಜೆಪಿಯ ಬೇಡಿಕೆಯೂ ಅದೇ ಆಗಿದೆ ಎಂದು ಆರೋಪಿಸಿದರು.
ಈಶ್ವರಪ್ಪ ರಾಜಿನಾಮೆ ಕೊಡಲೇಬೇಕು. ನಮ್ಮ ಹೋರಾಟ ಮುಂದುವರಿಯಲಿದೆ. ಸದನದ ಒಳಗೆ ಹಾಗೂ ಹೊರಗೂ ನಾವು ಈ ವಿಚಾರದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಚಹಲ್ 200 ವಿಕೆಟ್ಗಳ ಕಮಾಲ್; ಈ ಸಾಧನೆಗೈದ ಮೊದಲ ಬೌಲರ್
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ