ಸ್ವಾರ್ಥಕ್ಕಾಗಿ ಕೆಲವರು ಸಿಎಂ ಮೇಲೆ ಆರೋಪ ಮಾಡ್ತಿದ್ದಾರೆ, ಇದು ಒಳ್ಳೆಯದಲ್ಲ: ರೇಣುಕಾಚಾರ್ಯ


Team Udayavani, Jan 5, 2021, 1:13 PM IST

ಸ್ವಾರ್ಥಕ್ಕಾಗಿ ಕೆಲವರು ಸಿಎಂ ಮೇಲೆ ಆರೋಪ ಮಾಡ್ತಿದ್ದಾರೆ, ಇದು ಒಳ್ಳೆಯದಲ್ಲ: ರೇಣುಕಾಚಾರ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕುಟುಂಬ, ಮಕ್ಕಳು ಯಾರೂ ಕೂಡಾ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಕೇವಲ ನಾಟಕಕ್ಕೋಸ್ಕರ ಯಾರೂ ನಾಟಕ ಮಾಡಬಾರದು. ಯಾರೇ ಸಿಎಂ ವಿರುದ್ದ ಟೀಕೆ ಮಾಡಿದರೂ ಒಳ್ಳೆಯದಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಶಾಸಕ ಬಸನಗೌಡ ಯತ್ನಾಳ್ ಹೆಸರು ಹೇಳದೆ ಅವರ ವಿರುದ್ಧ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಿಎಂ ಜೊತೆ ಮೂರು ವಿಭಾಗಗಳ ಶಾಸಕರ ಸಭೆ ನಡೆಯಿತು. ಶಾಸಕರು ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಕೋವಿಡ್ ಸಂಧರ್ಭದಲ್ಲಿ ಆರ್ಥಿಕ ಸಂಕಷ್ಟ ಇದ್ದರೂ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ ಎಂದು ಸಿಎಂ ಹೇಳಿದರು ಎಂದರು.

ನಾನು ಯಡಿಯೂರಪ್ಪ ಪರ ಇದ್ದೇನೆ‌ ಎಂದು ನಾನು ಹೇಳುವುದಲ್ಲ. ಆದರೆ ಸಿಎಂ ನಮ್ಮನ್ನು ಬೆಳೆಸಿದಿವರು, ತಂದೆ ಸಮಾನ. ಯಡಿಯೂರಪ್ಪರನ್ನು ಎಲ್ಲರೂ ಗೌರವಿಸಬೇಕು. ಆಡಳಿತದಲ್ಲಿ ಯಡಿಯೂರಪ್ಪ ಕುಟುಂಬದ ಹಸ್ತಕ್ಷೇಪ ಯಾವುದೂ ಇಲ್ಲ. ಇದೆಲ್ಲ ಊಹಾಪೋಹಾ ಎಂದರು.

ಇದನ್ನೂ ಓದಿ:ಇನ್ನೆರಡು ಮೂರು ದಿನಗಳಲ್ಲಿ ನೀನು ಮಂತ್ರಿ‌ ಆಗ್ತೀಯ : ಆರ್ ಶಂಕರ್ ಗೆ ಸಿಎಂ ಶುಭನುಡಿ

ವಿಜಯೇಂದ್ರ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಯಾರೂ ನಾಟಕ ಮಾಡಬಾರದು. ಕೆಲವರು ಸ್ವಾರ್ಥಕ್ಕಾಗಿ ಯಡಿಯೂರಪ್ಪ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ.  ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಸಿಎಂ, ಪಕ್ಷದ ಬಗ್ಗೆ ಬಹಿರಂಗ ಮಾತಾಡದಂತೆ ಹೈಕಮಾಂಡ್ ಸೂಚಿಸಿದೆ. ಬಹಿರಂಗವಾಗಿ ಮಾತಾನಾಡಿದರೆ ಶಿಸ್ತು ಕ್ರಮ ತಗೋಳುವುದಾಗಿ ಹೇಳಿದ್ದಾರೆ. ನಾನು ಯಾರ ಹೆಸರೂ ಹೇಳಿ ಈ ಮಾತು ಹೇಳುತ್ತಿಲ್ಲ.  ಯಾರೇ ಇದ್ದರೂ ಬಹಿರಂಗ ಮಾತನಾಡುವುದು ಸರಿಯಲ್ಲ. ಇವರು ಸ್ವಾರ್ಥ ಇದ್ದಾಗ ವಿಜಯೇಂದ್ರ ಬಳಿ ಹೋಗುತ್ತಾರೆ. ಆದರೆ ಬೇಡವಾದಾಗ ಆರೋಪ ಮಾಡುತ್ತಾರೆ, ಇದು ಸರಿಯಲ್ಲ. ಇದು ಒಳ್ಳೆಯದಲ್ಲ ಎಂದು ಯತ್ನಾಳ್ ವಿರುದ್ಧ ಪರೋಕ್ಷ ಟೀಕೆ ಮಾಡಿದರು.

ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ನಾಯಕರು ಸೂಚನೆ ನೀಡಿದ್ದಾರೆ. ತಾಳ್ಮೆಯಿಂದ ಕಾಯಬೇಕು. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತದೆ ಎಂದದು ಎಲ್ಲೂ ಹೇಳಿಲ್ಲ. ಪಾಪ ಕೆಲವರು ರಾಜೀನಾಮೆ ಕೊಟ್ಟು ಬಂದಿದ್ದಾರೆ. ನನಗಂತೂ ಯಾವುದೇ ಆತುರವಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.