ಮಧ್ಯಪ್ರದೇಶದಲ್ಲಿ ಜಾರಿಯಾಗಲಿದೆ ‘ಗೋ ಸೆಸ್’ ! ಗೋ ಸಂಪುಟ ಸಭೆಯಲ್ಲಿ ತೀರ್ಮಾನ
Team Udayavani, Nov 23, 2020, 6:09 PM IST
ಭೋಪಾಲ: ಮಧ್ಯಪ್ರದೇಶದಲ್ಲಿ 4 ಸಾವಿರ ಗೋಶಾಲೆಗಳ ನಿರ್ಮಾಣಕ್ಕೆ “ಕೌ ಸೆಸ್'( ಗೋ ಸೆಸ್) ವಿಧಿಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಭಾನುವಾರ ನಡೆದ ಮೊದಲ “ಗೋ ಸಂಪುಟ’ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದನ್ನು ಖಾಸಗಿ – ಸರ್ಕಾರಿ ಸಹಭಾಗಿತ್ವದಲ್ಲಿ ನಿರ್ಮಿಸುವ ನಿರ್ಧಾರಕ್ಕೆ ಬರಲಾಗಿದೆ.
ಗೋಶಾಲೆಯಲ್ಲಿಯೇ ಬೆರಣಿ, ಹಾಲಿನ ಪುಡಿ ಸೇರಿದಂತೆ ಹಲವು ಉಪ ಉತ್ಪನ್ನಗಳನ್ನು ಖಾಸಗಿ ಸಹ ಭಾಗಿತ್ವದಲ್ಲಿ ತಯಾರಿಸುವುದರ ಬಗ್ಗೆಯೂ ಸಮ್ಮತಿ ಸೂಚಿಸಲಾಗಿದೆ.
ಗೋ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಚೌಹಾಣ್ ಅಗರ್-ಮಾಲ್ವಾ ಸಮೀಪ ಇರುವ ಸಲಾರಿಯಾ ಗ್ರಾಮದಲ್ಲಿರುವ ದೇಶದ ಮೊದಲ ಗೋ ಅಭಯಾರಣ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಚೌಹಾಣ್ “ಗೋ ಶಾಲೆ ನಿರ್ಮಿಸಲು ಮತ್ತು ಅದರ ನಿರ್ವಹಣೆಗಾಗಿ ಗೋ ಸೆಸ್ ವಿಧಿಸಲು ತೀರ್ಮಾನಿಸಲಾಗಿದೆ’ ಎಂದರು.
ಇದನ್ನೂ ಓದಿ:ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಆರೋಗ್ಯ ಮತ್ತಷ್ಟು ಗಂಭೀರ
ಇದರ ಜತೆಗೆ ಸಭೆಯಲ್ಲಿ ಗೋವಿಗೆ ತಾಯಿಯ ಸ್ಥಾನ ನೀಡುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದೆ. ಜತೆಗೆ ಅಡುಗೆ ಮನೆಯಲ್ಲಿ ಸಗಣಿಯ ಬೆರಣಿಗಳನ್ನು ಬಳಕೆ ಮಾಡುವುದಕ್ಕೆ, ಗೋ ಮೂತ್ರವನ್ನು ವೈದ್ಯಕೀಯ ಬಳಕೆಗೆ ಮತ್ತು ಕೀಟನಾಶಕಗಳ ಸ್ಥಾನದಲ್ಲಿ ಬಳಕೆ ಮಾಡುವುದರ ಬಗ್ಗೆ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ