Flood:ಗ್ರಾಮಸ್ಥರನ್ನು ರಕ್ಷಿಸಲು ಹೋಗಿ ಅಪಾಯಕ್ಕೆ ಸಿಲುಕಿದ ಸಚಿವ,ಹೆಲಿಕಾಪ್ಟರ್ ಮೂಲಕ ರಕ್ಷಣೆ
ರಾಜ್ಯ ವಿಪತ್ತು ನಿರ್ವಹಣಾ ತಂಡದ ಜತೆಗೂಡಿ ಬೋಟ್ ನಲ್ಲಿ ಸ್ಥಳಕ್ಕೆ ತೆರಳಿದ್ದರು.
Team Udayavani, Aug 5, 2021, 3:45 PM IST
ಭೋಪಾಲ್:ಭಾರೀ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿದ ಗ್ರಾಮಸ್ಥರನ್ನು ರಕ್ಷಿಸಲು ಹೋಗಿದ್ದ ಸಚಿವರೇ ಅಪಾಯದಲ್ಲಿ ಸಿಲುಕಿ ಹಾಕಿಕೊಂಡು ಕೊನೆಗೆ ಅವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದರೂ ಮೋದಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸಲಿದೆ: ಅಣ್ಣಾಮಲೈ
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಡಾಟಿಯಾ ಜಿಲ್ಲೆಯ ಕೋಟ್ರಾ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿ ಹಾಕಿಕೊಂಡಿದ್ದ ಸ್ಥಳೀಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಬೋಟ್ ನಲ್ಲಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.
ಏನಿದು ಘಟನೆ:
ಪ್ರವಾಹದಿಂದ ಕಂಗೆಟ್ಟಿದ್ದ ಕೋಟ್ರಾ ಗ್ರಾಮದಲ್ಲಿ ಜನರು ತಮ್ಮ ರಕ್ಷಣೆಗಾಗಿ ಮನೆಯ ಮಹಡಿ ಮೇಲೆ ಹತ್ತಿ ಕುಳಿತಿದ್ದು, ಅವರನ್ನು ರಕ್ಷಿಸಬೇಕೆಂದು ಗೃಹ ಸಚಿವ ಮಿಶ್ರಾ ಅವರಿಗೆ ಕೆಲವು ಜನರು ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಮಿಶ್ರಾ ಅವರು ರಾಜ್ಯ ವಿಪತ್ತು ನಿರ್ವಹಣಾ ತಂಡದ ಜತೆಗೂಡಿ ಬೋಟ್ ನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮರವೊಂದು ಬೋಟ್ ಮೇಲೆ ಬಿದ್ದ ಪರಿಣಾಮ ಬೋಟ್ ಮುಂದೆ ಚಲಿಸದಂತೆ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
MP home minister @drnarottammisra was airlifted by from Kotra village in Datia he went by boat to Kotra where 9 persons were stranded but the boat fell flat as the boat got stuck due to a collapsed tree @INCMP says “stunt” for competitive politics @ndtv @ndtvindia pic.twitter.com/hYlw7fDUEL
— Anurag Dwary (@Anurag_Dwary) August 4, 2021
ಸ್ಥಳೀಯರನ್ನು ರಕ್ಷಿಸಲು ಹೋಗಿದ್ದ ಸಚಿವ ಮಿಶ್ರಾ ತಾನೇ ಖುದ್ದು ಅಪಾಯದಲ್ಲಿ ಸಿಲುಕಿರುವುದನ್ನು ಮನಗಂಡು ಕೂಡಲೇ ಸರ್ಕಾರಿ ಅಧಿಕಾರಿಗಳಿಗೆ ಸಂದೇಶದ ಮೂಲಕ ವಿಷಯ ತಿಳಿಸಿ, ಸ್ಥಳಕ್ಕೆ ಐಎಎಫ್ ಹೆಲಿಕಾಪ್ಟರ್ ಕಳುಹಿಸಿ ರಕ್ಷಿಸುವಂತೆ ಕೇಳಿಕೊಂಡಿದ್ದರು. ಆ ನಂತರ ಸ್ಥಳಕ್ಕೆ ಹೆಲಿಕಾಪ್ಟರ್ ಬಂದಿದ್ದು, ಅಪಾಯದಲ್ಲಿ ಸಿಲುಕಿದ್ದ ಒಂಬತ್ತು ಮಂದಿ ಗ್ರಾಮಸ್ಥರನ್ನು ಹಾಗೂ ಸಚಿವರನ್ನು ರಕ್ಷಣೆ ಮಾಡಲಾಯಿತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು