ಅಡಿಕೆ ಫಸಲಿನ ಮೇಲಿನ ಆಸೆ : ಇಬ್ಬರ ಕೊಲೆ, ಓರ್ವನ ಆತ್ಮಹತ್ಯೆಯಲ್ಲಿ ಅಂತ್ಯ
Team Udayavani, Oct 15, 2021, 7:15 PM IST
ಮಡಿಕೇರಿ : ದಾಯಾದಿ ಕಲಹವೊಂದು ಜೋಡಿ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಅಂತ್ಯವಾಗಿದ್ದು, ಅಡಿಕೆ ಫಸಲಿನ ಮೇಲಿನ ಆಸೆ ಮೂರು ಜೀವಗಳನ್ನು ಬಲಿ ತೆಗೆದುಕೊಂಡ ಘಟನೆ ದಕ್ಷಿಣ ಕೊಡಗಿನ ಕಿರಗೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದ ಅಲೆಮಾಡ ಕುಟುಂಬದ ಸೋಮಯ್ಯ ಸಾಗರ್(52) ಗುಂಡು ಹೊಡೆದು ಮಧು(42) ಹಾಗೂ ಯಶೋಧ ಎಂಬುವವರನ್ನು ಹತ್ಯೆ ಮಾಡಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಿರಗೂರು ಗ್ರಾಮದಲ್ಲಿರುವ ತೋಟದ ಅಡಿಕೆ ಫಸಲಿನ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಯ್ಯ ಸಾಗರ್ ಹಾಗೂ ಆತನ ಚಿಕ್ಕಪ್ಪನ ಮಗ ಮಧು ನಡುವೆ ಕಲಹ ಉಂಟಾಗಿತ್ತು. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದಾಗ ಸಾಗರ್ ಕೋವಿಯಿಂದ ಮಧುವಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಸಂದರ್ಭ ತಡೆಯಲು ಬಂದ ಸಾಗರ್ ಪತ್ನಿ ಯಶೋಧ ಅವರಿಗೂ ಗುಂಡೇಟು ತಗುಲಿದೆ.
ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಯಶೋಧ ತುರ್ತು ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ದುಷ್ಕೃತ್ಯವೆಸಗಿದ ಬಳಿಕ ಸಾಗರ್ ಮನೆ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯಶೋಧ ಟಿ. ಶೆಟ್ಟಿಗೇರಿ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಗೋಣಿಕೊಪ್ಪ ವೃತ್ತ ನಿರೀಕ್ಷಕ ಜಯರಾಮ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾ ಎಸ್ಐ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಕೊಂಡಿದ್ದಾರೆ.
ಮಧು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ