ನಾಡಿನೆಲ್ಲೆಡೆ ಇಂದು ಶಿವ ನಾಮ ಸ್ಮರಣೆ, ಜಾಗರಣೆ


Team Udayavani, Mar 11, 2021, 5:55 AM IST

ನಾಡಿನೆಲ್ಲೆಡೆ ಇಂದು ಶಿವ ನಾಮ ಸ್ಮರಣೆ, ಜಾಗರಣೆ

ಕುಂದಾಪುರ: ನಾಡಿನ ವಿವಿಧ ಶಿವದೇಗುಲಗಳಲ್ಲಿ ಗುರುವಾರ ಭಕ್ತಿ, ಸಂಭ್ರಮದಿಂದ ಶಿವರಾತ್ರಿ ಆಚರಣೆ, ಜಾಗರಣೆ ನಡೆಯಲಿದೆ. ಅಭಿಷೇಕ ಪ್ರಿಯನಾದ ರುದ್ರನಿಗೆ ರುದ್ರಾಭಿಷೇಕ ನಡೆಯಲಿದ್ದು ಜಾಗರದ ಸಂದರ್ಭ ಭಜನೆ ನಡೆಯಲಿದೆ. ಕಳೆದ ಶಿವರಾತ್ರಿ ಆಚರಣೆಗೆ ಕೊರೊನಾ ಇರಲಿಲ್ಲ. ಈ ಬಾರಿಯ ಆಚರಣೆ ಸಂದರ್ಭ ಕೊರೊನಾ ಭಯ ಕಡಿಮೆಯಾಗಿದೆ. ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದ್ದರಿಂದ ಈಚಿನ ದಿನಗಳಲ್ಲಿ ಬಂದ ಹಬ್ಬಗಳ ಪೈಕಿ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವ ಹಬ್ಬ ಎಂದು ಪರಿಗಣಿಸಲಾಗಿದೆ.

ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು ಶಿವರಾತ್ರಿ ಆಚರಣೆ ನಡೆಯುತ್ತದೆ. ಈ ದಿನ ರಾತ್ರಿ ಸಮಯದಲ್ಲಿ ಶಿವ, ಪಾರ್ವತಿಯ ಜತೆಯಲ್ಲಿ ಭೂಮಿಗೆ ಬರುತ್ತಾನೆ. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಆ ಸಮಯದಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂಬ ಶಾಸ್ತ್ರೋಕ್ತಿ ಇದೆ. ಈ ನಂಬಿಕೆಯಂತೆ ಶಿವರಾತ್ರಿಯಂದು ಜಾಗರಣೆ, ಆಚರಣೆ, ಅಭಿಷೇಕ, ಭಜನೆ, ಪಾದಯಾತ್ರೆ, ದೇವರ ದರ್ಶನ ಇತ್ಯಾದಿ ನಡೆಸಲಾಗುತ್ತದೆ. ಕುಂದಾಪುರ, ಬೈಂದೂರು ತಾಲೂಕಿನ ಎಲ್ಲ ಶಿವಾರಾಧನನ ಕ್ಷೇತ್ರಗಳಲ್ಲೂ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆದಿದೆ.

ದೊಡ್ಡ ಮಟ್ಟದ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೇ, ಅದ್ದೂರಿ ಕಡೆಗೆ ಮನ ಮಾಡದೇ, ಭಜನೆಯಂತಹ ಧಾರ್ಮಿಕ ಚಟುವಟಿಕೆಗೆ ಹೆಚ್ಚಿನ ಆದ್ಯತೆ ದೊರೆತದ್ದು ಈ ಬಾರಿಯ ವಿಶೇಷ.

ದೇವಾಲಯಗಳಲ್ಲಿ ದೀಪಾಲಂಕಾರ ನಡೆದಿದೆ. ಬೆಳಗ್ಗೆಯಿಂದಲೇ ಭಜನೆ, ಅಭಿಷೇಕ, ಅರ್ಚನೆ ನಡೆಯಲಿದೆ ಎಂದು ಈಗಾಗಲೇ ದೇವಾಲಯಗಳ ಪ್ರಕಟನೆ ತಿಳಿಸಿದೆ. ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದು ಕೊಂಡೇ ಧಾರ್ಮಿಕ ಆಚರಣೆಗಳು, ಭಕ್ತರ ದೇಗುಲ ಭೇಟಿ ನಡೆಯಲಿದೆ.

ಪಂಚ ಶಂಕರನಾರಾಯಣ ಕ್ಷೇತ್ರಗಳಲ್ಲಿ ಆಚರಣೆ
ಕ್ರೋಢ ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ಬೆಳಗ್ಗೆ 9ರಿಂದ ಶತರುದ್ರಾಭಿಷೇಕ, ಮಹಾಪೂಜೆ, ಸಂಜೆ 6ರಿಂದ 8ರ ತನಕ ಶಂಕರನಾರಾಯಣ ಯಕ್ಷಗಾನ ಬಾಲಕ ಸಂಘದಿಂದ ಯಕ್ಷಗಾನ ಪ್ರದರ್ಶನ, ರಾತ್ರಿ 9ರಿಂದ ಮಹಾ ರಂಗಪೂಜೆ, ಪಲ್ಲಕಿ ಉತ್ಸವ‌ ನಡೆಯಲಿವೆ.

ಹೊಳೆ ಶಂಕರನಾರಾಯಣ
ಕ್ಷೇತ್ರದಲ್ಲಿ ರುದ್ರಾಭಿಷೇಕ, ಸಂಜೆ 6ರಿಂದ ರಂಗಪೂಜೆ, ಮಹೋತ್ಸವ ಮತ್ತು ಭಜನೆ ಸೇವಾ ಕಾರ್ಯಗಳು ಜರಗಲಿವೆ.

ಮಾಂಡವಿ ಶಂಕರನಾರಾಯಣ
ಕ್ಷೇತ್ರದಲ್ಲಿ ರುದ್ರಾಭಿಷೇಕ, ರಂಗಪೂಜೆ, ಭಜನೆ ಸೇವಾ ಕಾರ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಬೆಳ್ವೆ ಶಂಕರನಾರಾಯಣ
ದೇಗುಲದಲ್ಲಿ ರುದ್ರಾಭಿಷೇಕ, ರಾತ್ರಿ ರಂಗಪೂಜಾ ಮಹೋತ್ಸವ ಮತ್ತು ಭಜನೆ ಸೇವಾ ಕಾರ್ಯಗಳು ಜರಗಲಿವೆ.

ಆವರ್ಸೆ ಶಂಕರನಾರಾಯಣ
ಕ್ಷೇತ್ರದಲ್ಲಿ ರುದ್ರಾಭಿಷೇಕ, ರಾತ್ರಿ ರಂಗಪೂಜಾ ಮಹೋತ್ಸವ ಮತ್ತು ಭಜನೆ ಸೇವಾ ಕಾರ್ಯಗಳು ಜರಗಲಿವೆ.

ಹಣುಬು ಕಾಮನ ಹಬ್ಬ
ಶಿವರಾತ್ರಿ ಹಬ್ಬ ಎಲ್ಲರ ಪ್ರಿಯವಾದ ಹಬ್ಬಗಳಲ್ಲಿ ಒಂದು. ಕುಂದಾಪುರದ ಹಲವು ಕಡೆಗಳಲ್ಲಿ ಶಿವರಾತ್ರಿ ದಿನ ಅಥವಾ ಮಾರನೇದಿನ ಹಣುಬು ಸುಡುವ ಆಚರಣೆ ಇದ್ದು, ಶಿವನು ಮನ್ಮಥನನ್ನು ತನ್ನ ಮೂರನೇ ಕಣ್ಣಿನಿಂದ ದಹಿಸುವಿಕೆಯ ಪ್ರತೀಕವಾಗಿ ಈ ಸಂಪ್ರದಾಯ ಆಚರಿಸಲಾಗುತ್ತದೆ.

ಶಿವರಾತ್ರಿಯಂದು ಗ್ರಾಮಸ್ಥರೆಲ್ಲ ಊರಿನ ಹಿರಿಯರ ಮುತುವರ್ಜಿಯಲ್ಲಿ ತಂಡ ಮನೆ ಮನೆಗೆ ಭೇಟಿ ನೀಡಿ, ಚೆಂಡೆ, ತಾಳ, ಜಾಗಟೆ ಬಾರಿಸುತ್ತ ಧೀಂಸ್ಸಾಲ್‌ ಎನ್ನಿರೋ..ಧೀಂಗುಟ್ಕ ಕುಣಿರೋ..ಎಂಬ ಕುಂದಾಪ್ರ ಕನ್ನಡದ ಜನಪದ ಪದ್ಯ ಹೇಳುತ್ತಾ ಸಾಂಪ್ರದಾಯಿಕವಾಗಿ ತೆಂಗಿನಕಾಯಿ, ಅಕ್ಕಿ, ತೆಂಗಿನ ಹೆಡೆಯನ್ನು (ಮಡ್ಲ್) ಕಾಣಿಕೆ ಪಡೆಯುವುದು ವಾಡಿಕೆ.

ಕಾಮನ ದಹಿಸಿದ ಶಿವ ಮನೆಗೆ ಬರುವನೆಂಬ ನಂಬಿಕೆಯಿಂದ ಮನೆಯವರು ಅಕ್ಕಿ- ತೆಂಗಿನಕಾಯಿ ನೀಡುತ್ತಾರೆ. ಹಣುಬು ಸುಡುವ ಜಾಗದಲ್ಲಿ ಒಂದು ಮರನೆಟ್ಟು ಅದಕ್ಕೆ ಸಮುದ್ರ ಕಿನಾರೆಯಲ್ಲಿ ಬೆಳೆಯುವ ಒಂದು ಮುಳ್ಳುಜಾತಿಯ ಬಳ್ಳಿ ಯಂತೆ ಹಬ್ಬುವ ಚುಂಗಿ ರಾಶಿ ಹಾಕಿ, ಒಣ ಹುಲ್ಲು ಹಾಕಿ ತೆಂಗಿನ ಮಡಲನ್ನು ಸುತ್ತ ಕಟ್ಟಿ, ಹಣುಬಿನ ರಥ ನಿರ್ಮಿಸುತ್ತಾರೆ.

ಸಂಜೆ ಊರ ದೇವಸ್ಥಾನದಲ್ಲಿ ಪೂಜೆ ಮಾಡಿ ಶಿವ ನಾಮಾರ್ಚನೆ ಮಾಡಿ ಪ್ರಾರ್ಥನೆ ಸಲ್ಲಿಸಿ, ಗ್ರಾಮದ ಜನರೆಲ್ಲ ಹಣುಬಿನ ಗದ್ದೆಯಲ್ಲಿ ಸೇರಿ ದಿಮ್ಸಾಲ್‌ ಹಾಕುತ್ತ ನೆಟ್ಟ ಮರಕ್ಕೆ ಮೂರು ಸುತ್ತು ಬಂದು ಬೆಂಕಿ ಕೊಡುತ್ತಾರೆ. ಮರುದಿನ ಹಣುಬಿನ ರಾಶಿಯಲ್ಲಿ ಬೆಂದು ಉಳಿದ ತೆಂಗಿನಕಾಯಿ ಪ್ರಸಾದವೆಂದು ತೆಗೆಯುತ್ತಾರೆ.

ಆಚರಣೆ ಉಳಿಸಿ
ಈ ಜನಪದ ವಿಶಿಷ್ಟ ಆಚರಣೆಯನ್ನು ಯುವಜನಾಂಗ ತಮ್ಮ ಸಂಘ-ಸಂಸ್ಥೆಯ ಮೂಲಕ ಉಳಿಸಿಕೊಳ್ಳಲು ಪ್ರಯತ್ನಿಸಿದರೆ ಜನಪದ ಲೋಕದ ಈ ಅಪರೂಪದ ಆಚರಣೆ ಉಳಿಸಿಕೊಳ್ಳಬಹುದಾಗಿದೆ.
-ಪ್ರವೀಣ್‌ ಡಿ. ಕಟೀಲು ಸಾಲಿಗ್ರಾಮ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.