ಮಹದಾಯಿ ಯೋಜನೆ ಅನುಷ್ಠಾನ ಕೇಂದ್ರ ಸಚಿವರೊಂದಿಗೆ ಚರ್ಚೆ : ರಮೇಶ ಜಾರಕಿಹೊಳಿ
Team Udayavani, May 27, 2020, 2:30 PM IST
ಬೆಳಗಾವಿ : ಮಹದಾಯಿ ಯೋಜನೆ ಅನುಷ್ಠಾನದ ವಿಚಾರದಲ್ಲಿ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಮುಂದಿನ ವಾರ ದೆಹಲಿಗೆ ಹೋಗಿ ಕೇಂದ್ರ ಸಚಿವರ ಜತೆಗೆ ಚರ್ಚೆ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇದಕ್ಕೆ ಸಂಬಂಧಪಟ್ಟ 800 ಕೋಟಿ ರೂಪಾಯಿ ಯೋಜನೆಯ ರೂಪುರೇಷೆ ಸಿದ್ದವಾಗಿದೆ ಎಂದರು. ಕೊರೊನಾ ಲಾಕ್ ಡೌನ್ ನಿಂದ ನೀರಾವರಿ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಇಲಾಖೆಯ ಅನುದಾನದಲ್ಲಿ ಸಹ ಯಾವುದೇ ಕಡಿತ ಮಾಡಿಲ್ಲ ಎಂದು ಹೇಳಿದರು.
ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಸದ್ಯ ನೀರಿನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಬರುವಷ್ಟರಲ್ಲಿ ಎಲ್ಲಾ ಸಮಸ್ಯೆ ಇತ್ಯರ್ಥ ಮಾಡಲಾಗುವದು ಎಂದ ಅವರು ಮಹಾರಾಷ್ಟ್ರ ಸರ್ಕಾರದ ಜೊತೆಗೆ ನೀರು ಹಂಚಿಕೆ ಬಗ್ಗೆ ಮಾತುಕತೆ ಮಾಡಬೇಕಿತ್ತು. ಆದರೆ ಕೋವಿಡ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾತುಕತೆ ವಿಳಂಬವಾಗಿದೆ. ಶೀಘ್ರದಲ್ಲಿ ಈ ಬಗ್ಗೆ ಚರ್ಚಿಸಿ ನೀರು ಹಂಚಿಕೆ ಕುರಿತು ಒಪ್ಪಂದ ಮಾಡಿಕೊಳ್ಳಲಾಗವದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ