ಮಹಾದೇವ ಭೈರಗೊಂಡ ಶೂಟ್ ಔಟ್ ಪ್ರಕರಣ : ಮತ್ತೆ ಮೂವರ ಬಂಧನ, ಬಂಧಿತರ ಸಂಖ್ಯೆ16ಕ್ಕೆ ಏರಿಕೆ
Team Udayavani, Nov 11, 2020, 6:51 PM IST
ವಿಜಯಪುರ: ನಗರದ ಹೊರ ವಲಯದಲ್ಲಿ ಕನ್ನಾಳ ಕ್ರಾಸ್ ಬಳಿ ನಡೆದಿದ್ದ ಮಹಾದೇವ ಭೈರಗೊಂಡ ಮೇಲಿನ ಹತ್ಯೆಗಾಗಿ ನಡೆದ ಗುಂಡಿನ ದಾಳಿ ಯತ್ನ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ16 ಕ್ಕೆ ಏರಿಕೆಯಾಗಿದೆ.
ಪ್ರಕರಣದ ತನಿಖೆಗೆ ನೇಮಿಸಿರುವ ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ಪೊಲೀಸರ ತಂಡ ಮೂವರನ್ನು ಬಂಧಿಸಿದೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.
ಬಂಧಿತರನ್ನು ವಿಜಯಪುರ ನಗರದ ಇಂಡಿ ರೋಡನ ಬಂಬಳ ಅಗಸಿ ನಿವಾಸಿ 24 ವರ್ಷದ ಹಸನ ಡೋಂಗ್ರಿ ಉರ್ಫ ಡೋಂಗ್ರಿಸಾಬ್ ಮೆಹಬೂಬಸಾಬ ಬಡಿಗೇರ, 24 ವರ್ಷದ ಕಲ್ಲಪ್ಪ ಉರ್ಫ ಮುದುಕಪ್ಪ ಅಶೋಕ ಬಜಂತ್ರಿ ಹಾಗೂ 21 ವರ್ಷದ ಈರಣ್ಣ ಅಶೋಕ ಬಜಂತ್ರಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಉಲ್ಬಣ ಭೀತಿ : ಚಳಿಗಾಲ ಅಧಿವೇಶನ ನಾಗ್ಪುರದಿಂದ ಮುಂಬೈಗೆ ಶಿಫ್ಟ್!
ಸದರಿ ಆರೋಪಗಳನ್ನು ಬಂಧಿಸಿದ ತಂಡದಲ್ಲಿ ಡಿಎಸ್ಪಿ ಗಳಾದ ಕೆ.ಸಿ.ಲಕ್ಷ್ಮೀನಾರಾಯಣ, ಪೊಲೀಸ್ ಅಧಿಕಾರಿಗಳಾದ ರವೀಂದ್ರ ನಾಯ್ಕೋಡಿ, ಬಸವರಾಜ ಮೂಕರ್ತಿಹಾಳ, ಎಂ.ಕೆ. ದ್ಯಾಮಣ್ಣವರ, ಸಿ.ಬಿ.ಬಾಗೇವಾಡಿ, ಸುನಿಲ ಕಾಂಬಳೆ, ಸುರೇಶ ಬೆಂಡೆಗುಂಬಳ, ಸೋಮಶೇಖರ್ ಜುಟ್ಟಲ ಸರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿತ್ತು.
ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡವನ್ನು ಎಸ್ಪಿ ಅಗರವಾಲ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು