ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್
ಪುಣೆ, ಥಾಣೆಯನ್ನು ಜಿಲ್ಲಾಡಳಿತ ಕನಿಷ್ಠ ಮೂರು ಹಂತದ ನಿರ್ಬಂಧಗಳನ್ನು ಮುಂದುವರಿಸಿದೆ.
Team Udayavani, Jun 25, 2021, 6:26 PM IST
ನವದೆಹಲಿ:ರಾಜ್ಯದಲ್ಲಿ ನೂತನ ರೂಪಾಂತರ ಡೆಲ್ಟಾ ಪ್ಲಸ್ ಸೋಂಕಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಸಡಿಲಿಕೆ ನಿರ್ಬಂಧವನ್ನು ಕಠಿಣಗೊಳಿಸಲು ನಿರ್ಧರಿಸಿರುವುದಾಗಿ ಶುಕ್ರವಾರ(ಜೂನ್ 25) ಘೋಷಿಸಿದೆ.
ಇದನ್ನೂ ಓದಿ:ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?
ಮಹಾರಾಷ್ಟ್ರದಲ್ಲಿ ಡೆಲ್ಟಾ , ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಹಾಗೂ ಕೋವಿಡ್ 3ನೇಯ ಅಲೆಯ ಸಾಧ್ಯತೆ ಇದೆ ಎಂಬ ವರದಿಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 20 ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ನಿರ್ಬಂಧ ಸಡಿಲಿಕೆಯಿಂದ ಅಪಾಯ ಎದುರಿಸಲು ಸಾಧ್ಯವಿಲ್ಲ, ಅಲ್ಲದೇ ಕ್ಷಿಪ್ರ ಆ್ಯಂಟಿಜೆನ್ ಪರೀಕ್ಷೆಗಿಂತ ಒಟ್ಟು ಆರ್ ಟಿ ಪಿಸಿಆರ್ ಪರೀಕ್ಷೆಗಳು ನಿರ್ಣಾಯಕ ಅಂಶವಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ರಾಜ್ಯದಲ್ಲಿ ಅತೀ ಹೆಚ್ಚು ಲಸಿಕೆ ನೀಡಿಕೆಗೆ ಹೆಚ್ಚು ಆದ್ಯತೆ ನೀಡುವುದಾಗಿ ಸರ್ಕಾರ ತಿಳಿಸಿದೆ.
ಪುಣೆ, ಥಾಣೆಯಲ್ಲಿ ಜಿಲ್ಲಾಡಳಿತ ಕನಿಷ್ಠ ಮೂರು ಹಂತದ ನಿರ್ಬಂಧಗಳನ್ನು ಮುಂದುವರಿಸಿದೆ. ಮಾಲ್ಸ್, ಸಾರ್ವಜನಿಕ ಸ್ಥಳಗಳನ್ನು ತೆರೆಯಬಹುದು ಎಂಬ ಈ ಮೊದಲಿನ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದೆ. ಎಲ್ಲಾ ಅಂಗಡಿಗಳು, ಸಾರ್ವಜನಿಕ ಸ್ಥಳಗಳನ್ನು ಸಂಜೆ 4ಗಂಟೆವರೆಗೆ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ