ಮುಂಬರುವ ಚುನಾವಣೆಯಲ್ಲಿ ರಾಜಕೀಯ ತ್ಯಜಿಸ್ತೇನೆ…ಆದರೆ… ಉದ್ಧವ್ ಗೆ ಏಕನಾಥ ಶಿಂಧೆ ಸವಾಲೇನು?
ನಮ್ಮ ಶಿವಸೇನಾ ಮತ್ತು ಭಾರತೀಯ ಜನತಾ ಪಕ್ಷ ಮೈತ್ರಿಕೂಟ 200 ಸ್ಥಾನಗಳಲ್ಲಿ ಜಯಗಳಿಸಲಿದೆ.
Team Udayavani, Jul 16, 2022, 10:58 AM IST
ನವದೆಹಲಿ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ತನ್ನೊಂದಿಗೆ ಕೈಜೋಡಿಸಿರುವ ಒಬ್ಬ ಶಾಸಕ ಸೋತರೂ ಕೂಡಾ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಶನಿವಾರ (ಜುಲೈ 16) ತಾವು ಪತನಗೊಳಿಸಿರುವ ಮಹಾ ವಿಕಾಸ್ ಅಘಾಡಿ ಪಕ್ಷಕ್ಕೆ ಸವಾಲು ಹಾಕಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಿರಿಗನ್ನಡಂ ಗೆಲ್ಗೆ: ಸರ್ಕಾರದ ಆದೇಶ ಪ್ರತಿಯಲ್ಲಿ ತುಂಬಿ ತುಳುಕುತ್ತಿದೆ ವ್ಯಾಕರಣ ದೋಷ!
ಶಿವಸೇನಾದಿಂದ ಬಂಡಾಯ ಸಾರಿ ನನ್ನೊಂದಿಗೆ ಬಂದಿರುವ ಎಲ್ಲಾ 50 ಶಾಸಕರು ಮುಂಬರುವ ಚುನಾವಣೆಯಲ್ಲಿ ಜಯಗಳಿಸುತ್ತಾರೆ ಎಂಬ ವಿಶ್ವಾಸವಿದೆ. ಒಂದು ವೇಳೆ ಯಾರಾದರೊಬ್ಬರು ಸೋತರು ಕೂಡಾ ನಾನು ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಶಿಂಧೆ ಅವರು ತಮ್ಮ ಬೆಂಬಲಿಗ ಶಾಸಕರಲ್ಲಿ ಒಬ್ಬರಾದ ಅಬ್ದುಲ್ ಸತ್ತಾರ್ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಿವಸೇನಾ ಮತ್ತು ಭಾರತೀಯ ಜನತಾ ಪಕ್ಷ ಮೈತ್ರಿಕೂಟ 200 ಸ್ಥಾನಗಳಲ್ಲಿ ಜಯಗಳಿಸಲಿದೆ. ಇಲ್ಲದಿದ್ದರೆ ರಾಜಕೀಯ ತ್ಯಜಿಸುವುದಾಗಿ ಏಕನಾಥ ಶಿಂಧೆ ಪುನರುಚ್ಚರಿಸಿದ್ದಾರೆ.
ಇತ್ತೀಚೆಗಿನ ನಾಟಕೀಯ ಬೆಳವಣಿಗೆಯಲ್ಲಿ ಬಂಡಾಯವೆದ್ದ ಪರಿಣಾಮ ಅಂದಿನ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರ ಪತನಗೊಂಡ ಬಗ್ಗೆ ಉಲ್ಲೇಖಿಸಿದ ಶಿಂಧೆ, ಅದರ ಸಂಭವನೀಯ ಪರಿಣಾಮಗಳ ಬಗ್ಗೆ ತಾನು ಚಿಂತೆಗೊಳಗಾಗಿದ್ದದನ್ನು ಒಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ